ವಿಜಯಪುರ | ಸಾಮಾಜಿಕ ಪಿಡುಗುಗಳಿಗೆ ಶಿಕ್ಷಣವೇ ಪರಿಹಾರ

Date:

Advertisements

ಮೂಢನಂಬಿಕೆ, ಹಸಿವು, ಬಡತನದಂತಹ ಸಾಮಾಜಿಕ ಸಮಸ್ಯೆಗೆ ಶಿಕ್ಷಣವೊಂದೇ ಪರಿಹಾರ. ಪ್ರತಿಯೊಂದು ಮಗುವಿಗೂ ಉತ್ತಮ ಶಿಕ್ಷಣ ದೊರೆಯುವಂತಾಗಬೇಕು ಎಂದು ವಿಜಯಪುರದ ಅನೌಪಚಾರಿಕ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್‌ ಟಿಯೋಲ್‌ ಮಾಚಾದೊ ಹೇಳಿದರು.

ನಗರದ ಸಂತಮ್ಮನವರ ದೇವಾಲಯದ ಸಭಾಂಗಣದಲ್ಲಿ ಜಸ್ವಿಟ್ ಎಜುಕೇಶನಲ್ ಮತ್ತು ಚಾರಿಟೆಬಲ್ ಸೊಸೈಟಿ ಹಾಗೂ ಅದರ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಜಿಲ್ಲೆಯ ಜಸ್ವಿಟ್ ಎಜುಕೇಶನಲ್ ಮತ್ತು ಚಾರಿಟೆಬಲ್ ಸೊಸೈಟಿ ಹಾಗೂ ಅದರ ಅಂಗ ಸಂಸ್ಥೆಗಳು ಜಿಲ್ಲೆಯಾದ್ಯಂತ ಬಡವರ ಮಕ್ಕಳ ಸಮಗ್ರ ಅಭಿವೃದ್ಧಿಗೆ ಕೈಜೋಡಿಸುತ್ತಾ ಬಂದಿವೆ. ಪ್ರತಿ ಮಗುವಿನ ಶಿಕ್ಷಣ, ಸಾಮಾಜಿಕ ಜೀವನ ಸೇರಿ ವೈಯಕ್ತಿಕ ಬೆಳವಣಿಗೆಗೂ ಪೂರಕವಾಗುವಂತಹ ಪರಿಸರವನ್ನು ಈ ಟ್ರಸ್ಟ್‌ಗಳು ನಿರ್ಮಾಣ ಮಾಡುತ್ತಿವೆ. ಶಿಕ್ಷಣ ಉದ್ಯಮವಾಗಿರುವ ಇಂದಿನ ದಿನಮಾನಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು” ಎಂದರು.

WhatsApp Image 2025 03 10 at 7.15.53 PM

ಸೊಸೈಟಿಯ ಫಾದರ್ ಫ್ರಾನ್ಸಿಸ್ ಮೆನೇಜಸ್ ಮಾತನಾಡಿ, “ನೂರಾರು ಮಕ್ಕಳಿಗೆ ವಿದ್ಯಾರ್ಥಿ ವೇತನ ದೊರೆಯಲಿದ್ದು ಎಲ್ಲರೂ ಶಿಕ್ಷಣ ಪಡೆದು ಮಾದರಿ ಜೀವನ ರೂಪಿಸಿಕೊಳ್ಳಿ. ಎಲ್ಲಾ ವಿದ್ಯಾರ್ಥಿಗಳು ತಮ್ಮ ಬದುಕಿನಲ್ಲಿ ಬದುಕಿನ ಮೌಲ್ಯ ಪರಸ್ಪರ ಸಹಾಯ ಸಹಕಾರ ಮನೋಭಾವ ಹಾಗೂ ಸಾಮಾಜಿಕ ಕಳಕಳಿ ಬೆಳಸಿಕೊಳ್ಳುವುದು ಕೂಡ ತುಂಬಾ ಅಗತ್ಯವಾದದ್ದು. ಪ್ರಸ್ತುತವಾಗಿ ಮಾನವೀಯ ಮೌಲ್ಯಗಳು ಮರೆಯಾಗುತ್ತವೆ. ಇದು ಸಮಾಜಕ್ಕೆ ಮಾರಕವಾದದ್ದು. ಆದ್ದರಿಂದ ಮಾನವೀಯ ಮೌಲ್ಯಗಳು ಅಳವಡಿಸಿಕೊಂಡು ಪರೋಪಕಾರಿ ಜೀವನ ಸಾಗಿಸಲು ಎಲ್ಲಾ ವಿದ್ಯಾರ್ಥಿಗಳು ಮುಂದಾಗಬೇಕು” ಎಂದು ತಿಳಿಸಿದರು.

Advertisements

ಇದನ್ನೂ ಓದಿ: ವಿಜಯಪುರ | ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೈಪಿಡಿ ಬಿಡುಗಡೆ

ಕಾರ್ಯಕ್ರಮದಲ್ಲಿ ಲಾಯಲ ಪದವಿ ಪೂರ್ವ ಕಾಲೇಜು ನಿರ್ದೇಶಕ ಫಾದರ್ ರೊನಾಲ್ಡೊ ಸೇರಾವೋ, ಲಾಯಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಪ್ರಾಂಶುಪಾಲ ಫಾದರ್ ಸಂತೋಷ್ ಫರ್ನಾಂಡಿಸ್, ಸಂತ ಅಣ್ಣಮ್ಮನವರ ದೇವಾಲಯದ ವಾಜ್‌ ಧರ್ಮಗುರು ಫಾದರ್ ಜೋಸೆಫ್, ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹ ನಿರ್ದೇಶಕ ಫಾದರ್ ಸುಮನ್ ಬಾಲು ಸೇರಿದಂತೆ ಇತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X