ವಿಜಯಪುರ | ಶಿಕ್ಷಣ, ಸಂಘಟನೆ, ಹೋರಾಟವೇ ಶೋಷಿತರ ಮುಕ್ತಿಯ ಮಾರ್ಗ: ಬಸು ಮಾದರ

Date:

Advertisements

ಶಿಕ್ಷಣ, ಸಂಘಟನೆ, ಹೋರಾಟ ಈ ಮೂರು ಆಯುಧಗಳಿಂದ ಶೋಷಿತರ ಸಮಸ್ಯೆ ಪರಿಹರಿಸಿಲು ಸಾಧ್ಯ ಎಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮನಗಂಡಿದ್ದರು ಎಂದು ಅಂಬೇಡ್ಕ‌ರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಬಸು ಮಾದರ ಕಟ್ಟಿಮನಿ ಹೇಳಿದರು.

ವಿಜಯಪುರ ಜಿಲ್ಲೆಯ ತಾಳಿಕೋಟೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಅಂಬೇಡ್ಕರ್ ಸೇನೆ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. “ಡಾ. ಬಿ ಆರ್ ಅಂಬೇಡ್ಕರ್ ಅವರ ಮೌಲ್ಯಗಳನ್ನು ಅಳವಡಿಸಿಕೊಂಡು ವೈಚಾರಿಕವಾಗಿ ಸದೃಢರಾದಾಗ ಮಾತ್ರ ನಮ್ಮಲ್ಲಿ ಬದಲಾವಣೆ ಸಾಧ್ಯ” ಎಂದರು.

ತಾಲೂಕು ಘಟಕದ ಅಧ್ಯಕ್ಷ ಗೋಪಾಲ ಕಟ್ಟಿಮನಿ ಮಾತನಾಡಿ, “ಸಂಘಟೆನೆಯಲ್ಲಿ ಶಿಸ್ತನ್ನು ಕಡ್ಡಾಯವಾಗಿ ಪಾಲಿಸಬೇಕು. ಪದಾಧಿಕಾರಿಗಳು ಸಂಘಟನೆ ನಿಯಮ ಹಾಕಿಕೊಟ್ಟ ಮಾರ್ಗದಲ್ಲಿ ನಡೆದಾಗ ಮಾತ್ರ ಸಂಘಟನೆ ತನ್ನ ಉದ್ದೇಶದಲ್ಲಿ ಯಶಸ್ಸು ಸಾಧಿಸಲು ಸಾಧ್ಯ. ನಾಯಕರಾದವರು ಇತರರಿಗೆ ಆದರ್ಶವಾಗಿರಬೇಕು. ಸಮುದಾಯದ ಸಮಸ್ಯೆಗಳಿಗೆ ಧ್ವನಿಯಾಗಿ ಸಂಘಟನೆ ಕಟ್ಟುವ ಅವಶ್ಯಕತೆ ಇದೆ” ಎಂದರು.

Advertisements

ಸಂಘಟನೆಯ ಶಿವಪುರ ಗ್ರಾಮದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಮೆಹಬೂಬ್ ಆರ್. ಅವಟಿ ಹಾಗೂ ಉಪಾಧ್ಯಕ್ಷರಾಗಿ ಮೌಲಾಲಿ ಪಿಂಜಾರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಆದೇಶ ಪತ್ರ ವಿತರಿಸಲಾಯಿತು.

ಇದನ್ನೂ ಓದಿ: ವಿಜಯಪುರ | ಚಿತ್ರಕಲಾ ಶಿಕ್ಷಕರ ನೇಮಕದಲ್ಲಿ ಸರ್ಕಾರ ತಾತ್ಸಾರ; ಪೊನ್ನಪ್ಪ ಕಡೇಮನಿ ಆಕ್ರೋಶ

ಕಾರ್ಯದರ್ಶಿ ಮಹಾದೇವ ಅಸ್ಕಿ, ಅಂಬೇಡ್ಕರ್ ಸೇನೆ ತಾಲೂಕು ಘಟಕದ ಉಪಾಧ್ಯಕ್ಷ ಸೋಮು ಚಕ್ರವರ್ತಿ, ಪದಾಧಿಕಾರಿಗಳಾದ ಮರಿಯಪ್ಪ ಚಲವಾದಿ, ಚಾಂದ್ ಬಾಷಾ ವಜ್ಜಲ್, ಪರುಶುರಾಮ ನಾಲತವಾಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X