ವಿಜಯಪುರ | ಯುವಜನರಿಗೆ ಉದ್ಯೋಗ ಹಕ್ಕು ಖಾತ್ರಿಪಡಿಸಿ : ಬಸವರಾಜ ಪೂಜಾರ

Date:

ದೇಶದ ಅತಿ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಉದ್ಯೋಗ, ಶಿಕ್ಷಣ ಸಿಗದೆ ಹತಾಶೆಯಲ್ಲಿರುವಾಗ, ಆಳುವ ಸರ್ಕಾರಗಳು ಪರಿಹಾರ ಒದಗಿಸುವ ಬದಲು ಹುಸಿ ಭರವಸೆ ನೀಡಿ ವಂಚಿಸುತ್ತ ಅವರನ್ನು ಚುನಾವಣಾ ದಾಳವನ್ನಾಗಿ ಬಳಸಿಕೊಳ್ಳುತ್ತಿರುವುದು ಅಪಾಯಕಾರಿ ಬೆಳವಣಿಗೆ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಹೇಳಿದರು.

- Advertisement -

‌ವಿಜಯಪುರ ಜಿಲ್ಲೆ ಸಿಂದಗಿ ನಗರದ ಡಿಎಸ್ಎಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ತಾಲೂಕು ಸಮಿತಿಯಿಂದ ಆಯೋಜಿಸಿದ್ದ ‘ಸಾಮರಸ್ಯ, ಉದ್ಯೋಗ ಹಾಗೂ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ’ ನಡೆದ ಸಿಂದಗಿ ತಾಲೂಕಾ ಡಿವೈಎಫ್ಐ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

“ಉದ್ಯೋಗ ಸೃಷ್ಟಿಯ ಆಮಿಷವೊಡ್ಡುವ ಸರ್ಕಾರಗಳು ಕೈಗಾರಿಕೆ ಸ್ಥಾಪಿಸಲು ಕಾ‌ರ್ಪೊರೇಟ್ ಕುಳಗಳು ಹಾಗೂ ದೇಶಿ- ವಿದೇಶಿ ಬಂಡವಾಳಿಗರಿಗೆ ಭೂಮಿ ನೀಡುತ್ತಿವೆ. ಆದರೆ ಆ ಕಂಪನಿಗಳು ಕೈಗಾರಿಕೆ ಆರಂಭಿಸದೇ ಇರುವುದರಿಂದ ಉದ್ಯೋಗ ಸೃಷ್ಟಿ ಬರೀ ಭಾಷಣದಲ್ಲಿ ಉಳಿಯುತ್ತದೆ. ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಉದ್ಯೋಗ ಒದಗಿಸಲು ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತರಬೇಕು. ಉದ್ಯೋಗ ಕೊಡಲಾಗದಿದ್ದರೆ, ನಿರುದ್ಯೋಗಿ ಯುವಜನರಿಗೆ ಮಾಸಿಕ ₹10,000 ನಿರುದ್ಯೋಗ ಭತ್ಯೆ ಕೊಡಬೇಕು” ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

“ದೇಶದಲ್ಲಿ ನಿರುದ್ಯೋಗ ಪ್ರಮಾಣ ವಿಪರೀತವಾಗಿ ಏರುತ್ತಿದೆ. ಉದ್ಯೋಗ ಸೃಷ್ಟಿಸಲು ವಿಫಲವಾದ ಕೇಂದ್ರ ಸರ್ಕಾರ ಕೇವಲ ಭಾವನಾತ್ಮಕ ವಿಷಯಗಳನ್ನು ಮುನ್ನಲೆಗೆ ತಂದು ರಾಜಕೀಯ ಲಾಭಕ್ಕೆ ಹವಣಿಸುತ್ತಿರುವುದು ಜನತೆಗೆ ಎಸಗುತ್ತಿರುವ ದ್ರೋಹ. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ನೀಡಿದ ಮಾಹಿತಿಯಂತೆ ಕೇಂದ್ರ ಸರ್ಕಾರದಡಿ 9.79 ಲಕ್ಷ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳನ್ನು ಭರ್ತಿಗೊಳಿಸಲು ಇ‌ಚ್ಛಾಶಕ್ತಿ ಪ್ರದರ್ಶಿಸುತ್ತಿಲ್ಲ” ಎಂದರು.

ಯುವನಿಧಿ ಗ್ಯಾರಂಟಿ ಯೋಜನೆ ಪರಿಷ್ಕರಣೆಗೆ ಒತ್ತಾಯ

“ನಿರುದ್ಯೋಗಿ ಯುವಜನರಿಗೆ ಯುವನಿಧಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಕ್ರಮ. ಆದರೆ, ಕೇವಲ ಹಿಂದಿನ ವರ್ಷ ಉತ್ತೀರ್ಣರಾದವರಿಗೆ ಯೋಜನೆ ಅನ್ವಯಿಸಿರುವುದರಿಂದ, ಪದವಿ ಮುಗಿಸಿ ಐದು-ಹತ್ತು ವರ್ಷಗಳಿಂದ ಕೆಲಸ ಸಿಗದ ನಿರುದ್ಯೋಗಿಗಳಿಗೆ ಯಾವುದೇ ಆಸರೆ ಸಿಗುವುದಿಲ್ಲ. ಸರ್ಕಾರ ಯುವನಿಧಿ ಗ್ಯಾರಂಟಿ ಯೋಜನೆಯನ್ನು ವೈಜ್ಞಾನಿಕವಾಗಿ ಪರಿಷ್ಕರಿಸಿ, ಅಧ್ಯಯನ ಮುಗಿಸಿ ಕನಿಷ್ಟ 10 ವರ್ಷದಿಂದ ಕೆಲಸ ಸಿಗದಿರುವ ನಿರುದ್ಯೋಗಿ ಯುವಜನರಿಗೆ ಈ ಸೌಲಭ್ಯವನ್ನು ಖಾತ್ರಿಪಡಿಸಬೇಕು” ಎಂದು ಆಗ್ರಹಿಸಿದರು.

ಡಿವೈಎಫ್ಐ ಕಲಬುರಗಿ ಜಿಲ್ಲಾ ನಾಯಕಿ ಲವಿತ್ರ ಕೆ ಎನ್ ಮಾತನಾಡಿ, “ರಾಜ್ಯದಲ್ಲಿ ಶಾಲೆ, ಕಾಲೇಜು ಹಾಗೂ ವಿವಿಧ ಇಲಾಖೆಗಳಲ್ಲಿ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು, ಗುತ್ತಿಗೆ- ಹೊರಗುತ್ತಿಗೆ ಇತ್ಯಾದಿ ಹೆಸರಿನಲ್ಲಿ ಸೇವೆ ಸಲ್ಲಿಸುತ್ತಿದ್ದು, ಸೇವಾಭದ್ರತೆಯಿಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕೂಡಲೇ ಸರ್ಕಾರ ಇವರೆಲ್ಲರಿಗೂ ಸೇವಾಭದ್ರತೆ ಒದಗಿಸಬೇಕು” ಎಂದರು.

“ರಾಜ್ಯದಲ್ಲಿ ಎರಡೂವರೆ ಲಕ್ಷ ಹುದ್ದೆಗಳು ಖಾಲಿಯಿದ್ದು, ಅವುಗಳ ಭರ್ತಿ ಹಾಗೂ ಆದ್ಯತಾ ಕ್ಷೇತ್ರವಾರು ಉದ್ಯೋಗ ಸೃಷ್ಟಿಗೆ ಬಜೆಟ್‌ನಲ್ಲಿ ಚಕಾರ ಎತ್ತದಿರುವುದು ಯುವಜನರನ್ನು ನಿರ್ಲಕ್ಷಿಸಿರುವುದಕ್ಕೆ ಹಿಡಿದ ಕನ್ನಡಿ” ಎಂದರು.

“ಡಿವೈಎಫ್ಐ ಇದೀಗ ʼಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿʼ ಎಂಬ ಘೋಷಣೆಯಡಿ 12ನೇ ರಾಜ್ಯ ಸಮ್ಮೇಳನವನ್ನು 2024ರ ಫೆಬ್ರವರಿ 25, 26, 27ರಂದು ಮೂರು ದಿನಗಳ ಕಾಲ ಮಂಗಳೂರಿನಲ್ಲಿ ಹಮ್ಮಿಕೊಂಡಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಆಯ್ದ ಪ್ರತಿನಿಧಿಗಳು ಈ ಸಮ್ಮೇಳನದಲ್ಲಿ ಪಾಲ್ಗೊಂಡು ಈ ಮೇಲ್ಕಂಡ ವಿಷಯಗಳ ಕುರಿತು ಚರ್ಚಿಸಿ ನಿರ್ಣಯ ಹಾಗೂ ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಉತ್ತಮ ಕವಿಯಾಗಲು ಬದ್ಧತೆ ಮತ್ತು ವಿಶ್ವಾಸ ಅಗತ್ಯ : ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು

ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಅಧ್ಯಕ್ಷ ಅಣ್ಣಾರಾಯ ಈಳಗೇರ, ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯ ಈರಣ್ಣ ಬೆಳ್ಳುಂಡಗಿ, ತಾಲೂಕು ಮುಖಂಡರಾದ ರಮೇಶ ತಳವಾರ, ಮುಪ್ತಿ ಶೋಯೆಬ್ ಬ್ಯಾಕೋಡ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮಣ ಹಂದ್ರಾಳ, ಅಂಗನವಾಡಿ ನೌಕರ ಸಂಘದ ಪ್ರತಿಭಾ ಕುರಡಿ, ಭರಮಣ್ಣ, ಆದಂ ಜಮಾದಾರ್, ಸಾವಿತ್ರ ಬಡಿಗೇರ, ಶಾಂಭವಿ ಕೊಟಾರಗಸ್ತಿ, ಸವಿತಾ ಕೊಕಟನೂರ, ಶಾಂತಪ್ಪ, ಯೂನುಸ್ ರಾಯಚೂರು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...

ವಿಜಯಪುರ | ಸಂವಿಧಾನ, ಪ್ರಜಾಪ್ರಭುತ್ವಕ್ಕೆ ದೇಶ ಒಗ್ಗೂಡಿಸುವ ಶಕ್ತಿಯಿದೆ: ಸುಪ್ರಿಯಾ ಬನಸೂಡೆ

ವೈವಿಧ್ಯತೆಯಲ್ಲಿ ಏಕತೆಯನ್ನು ರೂಪಿಸುವ ಶಕ್ತಿ ಭಾರತದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗಿದೆ....

ಗದಗ | ಮತದಾನದ ಹಕ್ಕು ಪ್ರಜಾಪ್ರಭುತ್ವದ ರಕ್ಷಣೆಗೆ ಇರುವ ಪ್ರಬಲ ಅಸ್ತ್ರ: ಶಾಸಕ ಡಾ.ಎಚ್.ಕೆ. ಪಾಟೀಲ

"ಪ್ರಜಾಪ್ರಭುತ್ವದ ರಕ್ಷಣೆಗೆ ಮತದಾನದ ಹಕ್ಕು ಪ್ರಬಲ ಅಸ್ತ್ರವಾಗಿದೆ. ಸಂವಿಧಾನದ ರಕ್ಷಣೆ ಪ್ರತಿಯೊಬ್ಬರ...

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...