ವಿಜಯಪುರ | ಕೊಲ್ಹಾರದ ಕಲ್ಲು ಗಣಿಗಾರಿಕೆ ಬಂದ್ ಮಾಡುವಂತೆ ರೈತರ ಆಗ್ರಹ

Date:

Advertisements

ವಿಜಯಪುರ ಜಿಲ್ಲೆಯ ಕೊಲ್ಹಾರದ ಸರ್ವೇ ನಂ.718ರಲ್ಲಿರುವ ಕಲ್ಲು ಗಣಿಗಾರಿಕೆ ಬಂದ್ ಮಾಡುವಂತೆ ಆಗ್ರಹಿಸಿ ಕೊಲ್ಹಾರ ರೈತರ ಸಂಘಟನೆಯಿಂದ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಲ್ಹಾರ ತಾಲೂಕು ಘಟಕದ ಅಧ್ಯಕ್ಷ ಸೋಮು ಬಿರಾದಾರ ಮಾತನಾಡಿ, “ಕಲ್ಲಿನ ಗಣಿಯಲ್ಲಿ ಬೃಹತ್ ಕಲ್ಲುಗಳನ್ನು ಬ್ಲಾಸ್ಟ್ ಮಾಡಲಾಗುತ್ತಿದೆ. ಇದರಿಂದ ಸಮೀಪದ ಜಮೀನುಗಳಲ್ಲಿ ವಾಸಿಸುತ್ತಿರುವ ರೈತರಲ್ಲಿ ಭಯದ ವಾತಾವರಣ ಸೃಯಾಗಿದೆ. ಪಕ್ಕದಲ್ಲಿಯೇ ಕೋಲ್ಹಾರ ಸೇತುವೆಯೂ ಇರುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಹಾಗಾಗಿ ಕಲ್ಲಿನ ಗಣಿ ಬಂದ್ ಮಾಡಬೇಕು” ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಸಗರ ಮಾತನಾಡಿ, “ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳನ್ನು ಕೂಡಲೇ ಸ್ಥಳಕ್ಕೆ ಕಳುಹಿಸಬೇಕು. ಅಲ್ಲಿರುವ ಸಮಸ್ಯೆಗಳ ಕುರಿತು ನೈಜವಾಗಿ ಪರೀಕ್ಷೆ ಮಾಡಬೇಕು. ಅದರಿಂದಾಗುವ ಅನಾಹುತಗಳನ್ನು ತಿಳಿದು ಕಾನೂನು ಕ್ರಮ ಕೈಗೊಳ್ಳಬೇಕು” ಎಂದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ವಕ್ಫ್ ಆಸ್ತಿಯ ಸಮಗ್ರ ತನಿಖೆಗೆ ಬಿಜೆಪಿ ಒತ್ತಾಯ

ಮಲ್ಲಿಕಾರ್ಜುನ ಮಹಾಂತಮಠ, ಕಲ್ಲಪ್ಪ ಗಿಡ್ಡಪ್ಪಗೊಳ, ಶ್ರೀಶೈಲ ಸೊನ್ನದ, ಯಲ್ಲಪ್ಪ ಸೋನ್ನದ, ಶಶಿಕಾಂತ ಬಿರಾದಾರ, ಮಲ್ಲಿಕಾರ್ಜುನ ಸೊನ್ನದ, ವಿರುಪಾಕ್ಷಿ ಅಥಣಿ, ಸಂಗಪ್ಪ ಅಥಣಿ, ಸಂಗಪ್ಪ ಟಕ್ಕೆ, ಮಹಾದೇವಪ್ಪ ತೇಲಿ, ಪ್ರಕಾಶ ತೇಲಿ, ರಾಮನಗೌಡ ಪಾಟೀಲ, ಪುಂಡಲಿಕ ಸೊನ್ನದ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X