ವಿಜಯಪುರ | ಕೃಷಿಕರ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರ ಸೂಕ್ತ: ಡಾ ಪಾಟೀಲ

Date:

Advertisements

ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ಸೂಕ್ತ ವೈಜ್ಞಾನಿಕ ಪರಿಹಾರಗಳನ್ನು ಸ್ಥಳೀಯವಾಗಿ ನೀಡುವಂತೆ ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅತಿ ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ ಎಲ್ ಪಾಟೀಲ ತಿಳಿಸಿದರು.

ನಗರದ ಹೊರವಲಯದ ಹಿಟ್ಟಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ವಿಜಯಪುರ ಮತ್ತು ಇಂಡಿ ಕೃಷಿ ವಿಜ್ಞಾನ ಕೇಂದ್ರಗಳ 26ನೇ ಮತ್ತು 6ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ರೈತರ ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜತೆಗೆ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು” ಎಂದು ಹೇಳಿದರು.

Advertisements

“ಪ್ರಸ್ತುತ ದಿನಗಳಲ್ಲಿ ಯುವಜನರು ಕೃಷಿಯಿಂದ ವಿಮುಖರಾಗುತ್ತಿದ್ದು, ʼಯುವಜನರರ ನಡಿಗೆ ಕೃಷಿಯ ಕಡೆಗೆʼ ಎಂಬ ತತ್ವವನ್ನು ಆಳವಡಿಸಿ ಹೆಸರಾಂತ ಸ್ವಾಮೀಜಿಗಳಿಂದ ಕೃಷಿ ದೀಕ್ಷೆ ನೀಡಿ ಅವರು ಕೃಷಿಯತ್ತ ಆಸಕ್ತಿ ವಹಿಸುವಂತೆ ಕ್ರಮ ಕೈಗೊಳ್ಳಬೇಕು” ಎಂದರು.

“ವಿಜಯಪುರದಲ್ಲಿ ಬೆಳೆಯುವ ವಿವಿಧ ಬೆಳೆಗಳಾದ ತೊಗರಿ, ಅಜ್ವಾನ, ಕಬ್ಬು, ದಾಳಿಂಬೆ ಇತ್ಯಾದಿ ಬೆಳೆಗಳಲ್ಲಿ ಬರುವ ಸಮಸ್ಯೆಗಳಾದ ಹೊಸ ತಳಿಗಳ ಬಗ್ಗೆ ಮಾಹಿತಿ ಕೊರತೆ, ಬೇಸಾಯಕ್ರಮ ಮತ್ತು ಕೀಟ ಸಮಸ್ಯೆ, ರೋಗ ಹತೋಟಿ ಕ್ರಮಗಳ ಬಗ್ಗೆ ತರಬೇತಿಗಳ ಮೂಲಕ ರೈತರಿಗೆ ಸಹಾಯ ಮಾಡಬೇಕು. ಸಮಸ್ಯೆಗಳ ಕುರಿತು ರೈತರು ಚರ್ಚೆಯಲ್ಲಿ ಪಾಲ್ಗೊಳ್ಳಬೇಕು. ಎಲ್ಲ ಬೆಳೆಗಳ ಮೌಲ್ಯವರ್ಧನೆ, ಮಾರುಕಟ್ಟೆ ಬಗ್ಗೆ ಹೆಚ್ಚಿನ ಗಮನಹರಿಸಿ” ಎಂದು ರೈತರಿಗೆ ಸಲಹೆ ನೀಡಿದರು.

ಸಂಶೋಧನಾ ನಿರ್ದೇಶಕ ಡಾ. ಬಿ ಡಿ ಬಿರಾದಾರ ಮಾತನಾಡಿ, “ರೈತರು ತಮ್ಮ ಜಮೀನಿನ ಬದುಗಳಲ್ಲಿ ಬಹುವಾರ್ಷಿಕ ಮೇವಿನ ಗಿಡಗಳನ್ನು ಬೆಳೆಯಬೇಕು. ರೈತರು ಹೆಚ್ಚಿನ ಪ್ರಮಾಣದಲ್ಲಿ ಕೀಟ/ರೋಗನಾಶಕಗಳ ಸಿಂಪಡಣೆಯಿಂದ ನೈಸರ್ಗಿಕ ಕೀಟಗಳು ಹಾಳಾಗಿದ್ದು, ಇವುಗಳ ತಡೆಗೆ ಪರತಂತ್ರ ಜೀವಿಗಳನ್ನು ಅಭಿವೃದ್ಧಿಪಡಿಸಿ ಹಾನಿಕಾರಕಗಳನ್ನು ಹತೋಟಿಯಲ್ಲಿಡಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕಿ ಡಾ. ರೂಪಾ ಎಲ್ ಮಾತನಾಡಿದರು ಹಾಗೂ ಧಾರವಾಡ ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ. ಆರ್ ಬಸದರಾಜಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಕ್ತಿನಗರ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಬಳಿ ನಿರ್ಮಾಣವಾಗುವುದೇ ಇಂದಿರಾ ಕ್ಯಾಂಟಿನ್?

ವಿಜಯಪುರ, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ಡಾ. ಎಸ್ ಎಮ್ ವಸ್ತ್ರದ ಹಾಗೂ ಇಂಡಿಯ ಹಿರಿಯ ವಿಜ್ಞಾನಿ ಡಾ. ಶಿವಶಂಕರಮೂರ್ತಿ, ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಪ್ರಗತಿಯ ಕುರಿತು ಸಂಕ್ಷಿಪ್ತ ವರದಿ ಮಂಡಿಸಿದರು.

ಸಭೆಯಲ್ಲಿ ಕೃಷಿ ಮಹಾವಿದ್ಯಾಲಯ ಡೀನ್ ಡಾ. ಎ ಎಸ್ ಸಜ್ಜನ, ಸಹ ವಿಸ್ತರಣಾ ನಿರ್ದೇಶಕ ಡಾ. ಆರ್ ಬಿ ಬೆಳ್ಳಿ, ಸಹ ಸಂಶೋಧನಾ ನಿರ್ದೇಶಕ ಡಾ. ಎಸ್ ಬಿ ಜಗ್ಗಿನವರ, ಕೃಷಿ ವಿಜ್ಞಾನ ಕೇಂದ್ರ ವಿಜಯಪುರ ಹಾಗೂ ಇಂಡಿಯ ಎಲ್ಲ ವಿಜ್ಞಾನಿಗಳು, ಪ್ರಗತಿಪರ ರೈತರಾದ ಸಿದ್ದಪ್ಪ ಬಾಲಗೊಂಡ, ಚಂದ್ರಶೇಖರ ರೆಡ್ಡಿ, ನಿಂಗನಗೌಡ ಪಾಟೀಲ, ಸಿದ್ದು ಕವಡೆಕರ, ಭೀಮನಗೌಡ ಪಾಟೀಲ, ಅಂಕಿತ ಪಾಟೀಲ ಸೇರಿದಂತೆ ವಿವಿಧ ಇಲಾಖೆಗಳ ಮುಖ್ಯಸ್ಥರು, ರೈತ ಉತ್ಪಾದಕ ಸಂಸ್ಥೆಯ ನಿರ್ದೇಶಕರು, ಸರ್ಕಾರೇತರ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X