ವಿಜಯಪುರ | ಮಳೆಗಾಲದಲ್ಲಿ ರೈತರು ಜಾಗೃತರಾಗಿರಿ: ಗ್ರಾಪಂ ಮಾಜಿ ಅಧ್ಯಕ್ಷೆ ಬಂಗಾರೆಮ್ಮ

Date:

Advertisements

ಈಗಾಗಲೇ ಮುಂಗಾರು ಆರಂಭವಾಗಿದ್ದು, ಅಹಿತಕರ ಘಟನೆಗಳಾಗುವ ಸಂಭವ ಹೆಚ್ಚಿದೆ. ಹಾಗಾಗಿ ಮಳೆಗಾಲದಲ್ಲಿ ರೈತರು ವಿದ್ಯುತ್ ಪರಿಕರ ಸೇರಿದಂತೆ ಕೃಷಿ ಚಟುವಟಿಯಲ್ಲಿ ತೊಡಗಿರುವಾಗ ಜಾಗೃತಿ ವಹಿಸಿ ಕೆಲಸ ಮಾಡಿ ಎಂದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರೆಮ್ಮ ಮಾನಪ್ಪ ದೊಡಮನಿ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

“ಮಳೆಗಾಲದಲ್ಲಿ ಕರೆಂಟ್ ಎಷ್ಟು ಹೊತ್ತಿಗೆ ಬೇಕಾದರೂ ಬರಬಹುದು, ಹಾಗಾಗಿ ರೈತ ಬಾಂಧವರು ಕರೆಂಟ್ ಇರುವುದಿಲ್ಲ ಎಂದು ತಿಳಿದು ಯಾವುದೇ ರೀತಿಯ ವಿದ್ಯುತ್ ಕಂಬ, ತುಂಡಾಗಿರುವ ವೈರ್‌ಗಳನ್ನು ಸುರಕ್ಷಾ ಸಾಧನಗಳಲ್ಲದೆ ಮುಟ್ಟಬಾರದು. ಮಳೆಗಾಲದಲ್ಲಿ ವಿದ್ಯುತ್‌ಗೆ ಸಂಬಂಧಿಸಿದ ಉಪಕರಣಗಳಿಂದ ದೂರ ಇರಬೇಕು. ಹೊಲದಲ್ಲಿ ಲೈನ್ ತುಂಡಾಗಿದ್ದರೆ, ವಿದ್ಯುತ್ ಸಮಸ್ಯೆ ಇದ್ದರೆ ತಕ್ಷಣ ಕೆಇಬಿ ಅವರಿಗೆ ಕರೆ ಮಾಡಿ ತಿಳಿಸಬೇಕು”

“ಹೊಲದ ಬೋರ್ವೆಲ್ ಹಾಗೂ ಕೆನಾಲ್ ಕಾಲುವೆಗಳಲ್ಲಿನ ಮೋಟರ್‌ಗಳನ್ನು ಹಾಗೂ ಅವುಗಳಿಗೆ ಸಂಪರ್ಕವಾಗಿರುವ ವೈರ್ ಗಳ ಕುರಿತು ಜಾಗೃತಿ ವಹಿಸಬೇಕು. ಯಾವುದೇ ಟ್ರಾನ್ಸ್‌ಫಾರ್ಮರ್ ಕೆಲಸಗಳಲ್ಲಿ ಲೈನ್ ಮೆನ್ ಸಹಾಯ ಪಡೆದು ಕೆಲಸ ನಿರ್ವಹಿಸಬೇಕು.‌ ಮಳೆಗಾಲ ಜೋರಾಗುತ್ತಿರುವುದರಿಂದ ತುಂಬಾ ವಿದ್ಯುತ್ ಅನಾಹುತಗಳು ಸಂಭವಿಸುತ್ತಿರುತ್ತವೆ. ರೈತ ಈ ದೇಶದ ಬೆನ್ನೆಲುಬು, ಪ್ರತಿ ರೈತನ ಜೀವವು ಅತ್ಯಮೂಲ್ಯ, ರೈತರು ಹೊಲಗಳಲ್ಲಿ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು” ಎಂದು ಮನವಿ ಮಾಡಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X