ಈಗಾಗಲೇ ಮುಂಗಾರು ಆರಂಭವಾಗಿದ್ದು, ಅಹಿತಕರ ಘಟನೆಗಳಾಗುವ ಸಂಭವ ಹೆಚ್ಚಿದೆ. ಹಾಗಾಗಿ ಮಳೆಗಾಲದಲ್ಲಿ ರೈತರು ವಿದ್ಯುತ್ ಪರಿಕರ ಸೇರಿದಂತೆ ಕೃಷಿ ಚಟುವಟಿಯಲ್ಲಿ ತೊಡಗಿರುವಾಗ ಜಾಗೃತಿ ವಹಿಸಿ ಕೆಲಸ ಮಾಡಿ ಎಂದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹುಣಶ್ಯಾಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಬಂಗಾರೆಮ್ಮ ಮಾನಪ್ಪ ದೊಡಮನಿ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
“ಮಳೆಗಾಲದಲ್ಲಿ ಕರೆಂಟ್ ಎಷ್ಟು ಹೊತ್ತಿಗೆ ಬೇಕಾದರೂ ಬರಬಹುದು, ಹಾಗಾಗಿ ರೈತ ಬಾಂಧವರು ಕರೆಂಟ್ ಇರುವುದಿಲ್ಲ ಎಂದು ತಿಳಿದು ಯಾವುದೇ ರೀತಿಯ ವಿದ್ಯುತ್ ಕಂಬ, ತುಂಡಾಗಿರುವ ವೈರ್ಗಳನ್ನು ಸುರಕ್ಷಾ ಸಾಧನಗಳಲ್ಲದೆ ಮುಟ್ಟಬಾರದು. ಮಳೆಗಾಲದಲ್ಲಿ ವಿದ್ಯುತ್ಗೆ ಸಂಬಂಧಿಸಿದ ಉಪಕರಣಗಳಿಂದ ದೂರ ಇರಬೇಕು. ಹೊಲದಲ್ಲಿ ಲೈನ್ ತುಂಡಾಗಿದ್ದರೆ, ವಿದ್ಯುತ್ ಸಮಸ್ಯೆ ಇದ್ದರೆ ತಕ್ಷಣ ಕೆಇಬಿ ಅವರಿಗೆ ಕರೆ ಮಾಡಿ ತಿಳಿಸಬೇಕು”
“ಹೊಲದ ಬೋರ್ವೆಲ್ ಹಾಗೂ ಕೆನಾಲ್ ಕಾಲುವೆಗಳಲ್ಲಿನ ಮೋಟರ್ಗಳನ್ನು ಹಾಗೂ ಅವುಗಳಿಗೆ ಸಂಪರ್ಕವಾಗಿರುವ ವೈರ್ ಗಳ ಕುರಿತು ಜಾಗೃತಿ ವಹಿಸಬೇಕು. ಯಾವುದೇ ಟ್ರಾನ್ಸ್ಫಾರ್ಮರ್ ಕೆಲಸಗಳಲ್ಲಿ ಲೈನ್ ಮೆನ್ ಸಹಾಯ ಪಡೆದು ಕೆಲಸ ನಿರ್ವಹಿಸಬೇಕು. ಮಳೆಗಾಲ ಜೋರಾಗುತ್ತಿರುವುದರಿಂದ ತುಂಬಾ ವಿದ್ಯುತ್ ಅನಾಹುತಗಳು ಸಂಭವಿಸುತ್ತಿರುತ್ತವೆ. ರೈತ ಈ ದೇಶದ ಬೆನ್ನೆಲುಬು, ಪ್ರತಿ ರೈತನ ಜೀವವು ಅತ್ಯಮೂಲ್ಯ, ರೈತರು ಹೊಲಗಳಲ್ಲಿ ಎಚ್ಚರಿಕೆ ವಹಿಸಿ ಕೆಲಸ ಮಾಡಬೇಕು” ಎಂದು ಮನವಿ ಮಾಡಿದ್ದಾರೆ.