ವಿಜಯಪುರ | ಮೂಲಸೌಕರ್ಯ ಕಲ್ಪಿಸುವಂತೆ ರೈತ ಸಂಘ ಆಗ್ರಹ

Date:

Advertisements

ವಿಜಯಪುರ ಜಿಲ್ಲೆಯ ನಿಡಗುಂದಿ ಪಟ್ಟಣದ ಸ್ವಚ್ಛತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಿಡಗುಂದಿ ಪಟ್ಟಣ ಪಂಚಾಯತ್ ಮುಖ್ಯ ಅಭಿಯಂತರರಿಗೆ ಮನವಿ ಸಲ್ಲಿಸಿದರು.

“ಪಟ್ಟಣದ ನ್ಯೂ ಇಂಗ್ಲಿಷ್ ಶಾಲೆಯ ಬಳಿ ಇರುವ ಗಟಾರಿನಲ್ಲಿ ನೀರು ನಿಂತು ಗಬ್ಬು ವಾಸನೆ ಬರುತ್ತಿದ್ದು, ಶೀಘ್ರದಲ್ಲಿ ಸ್ವಚ್ಛಗೊಳಿಸಿ ಶಾಲಾ ಮಕ್ಕಳು ಓಡಾಡುವ ಪ್ರದೇಶವನ್ನು ಶುದ್ಧವಾಗಿಡುವಂತೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಬೆಳಕಿನ ವ್ಯವಸ್ಥೆ ಇಲ್ಲದ ಕಾರಣ ನಿಡುಗುಂದಿ ಪೊಲೀಸ್ ಠಾಣೆ ಕತ್ತಲಾದರೆ ಯಾರಿಗೂ ಕಾಣುತ್ತಿಲ್ಲ. ಒಂದನೇ ವಾರ್ಡಿನ ವಿನಾಯಕ ನಗರದ ಕೊನೆಯ ಭಾಗದಲ್ಲಿ ದೊಡ್ಡ ಕಾಲುವೆ ಇರುವುದರಿಂದ ಇಲ್ಲಿ ವಿಷ ಜಂತುಗಳು ಹರಿದಾಡುವ ಸಂಭವಗಳು ಹೆಚ್ಚಾಗಿವೆ. ಹಾಗಾಗಿ ಈ ಎರಡೂ ಸ್ಥಳಗಳಲ್ಲಿ ಎತ್ತರ ಹಾಗೂ ದೊಡ್ಡ ಗಾತ್ರದ ಹೈ ಮಾಸ್ಟ್ ದೀಪಗಳನ್ನು ಕೂಡಲೇ ಅಳವಡಿಸಬೇಕು. ಪಟ್ಟಣದಲ್ಲಿ ಕಳ್ಳತನ ಹೆಚ್ಚಾಗುತ್ತಿರುವುದರಿಂದ ಸಿಸಿಟಿವಿ ವ್ಯವಸ್ಥೆಯನ್ನು ಕಲ್ಪಿಸಬೇಕು” ಎಂದು ರೈತ ಸಂಘದ ಸದಸ್ಯರು ಪಟ್ಟಣ ಪಂಚಾಯತ್ ಕಚೇರಿ ಅಧಿಕಾರಿಗಳಿಗೆ ಒತ್ತಾಯಿಸಿದರು.

Advertisements

ಇದೇ ವೇಳೆ ಸಂಘದ ತಾಲೂಕು ಅಧ್ಯಕ್ಷ ಡಾ. ಕೆ ಎಂ ಬಿರಾದಾರ (ಗುಡ್ನಾಳ) ಮಾತನಾಡಿ ಮನವಿಯ ವಿವರ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಯಶ್‌ ಅಭಿಮಾನಿಗಳ ಸಾವು: ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಸಚಿವ ಪಾಟೀಲ್‌

ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಡಾ. ಕೆ ಎಂ ಬಿರಾದಾರ, ರೈತ ಮುಖಂಡ ತಿರುಪತಿ ಬಂಡಿ ವಡ್ಡರ್ ಬಳಬಟ್ಟಿ, ಗ್ರಾಮ ಘಟಕದ ಪ್ರಧಾನ ಕಾರ್ಯದರ್ಶಿ ಎಂ ಆರ್ ಕಂದಗಲ್, ತಾಲೂಕು ಗೌರವಾಧ್ಯಕ್ಷ ಐ ಆರ್ ಪಾಟೀಲ್, ರೈತ ಮುಖಂಡರುಗಳಾದ ನಾಗಪ್ಪ ವಾಲೀಕಾರ್, ಭೀಮಪ್ಪ ಬಿರಾದಾರ್, ಮುದ್ದಾಪೂರ ಗ್ರಾಮ ಘಟಕದ ಅಧ್ಯಕ್ಷ ಆರ್ ಎಸ್ ಉಕ್ಕಲಿ, ಮೋತಿಲಾಲ್ ಉಣ್ಣಿಬಾವಿ, ತಾಲೂಕು ಮಹಿಳಾ ಘಟಕದ ಅಧ್ಯಕ್ಷ ಸುಭಾನ್ ಮುಲ್ಲಾ, ಸಲ್ಲಿಮಾ ಚಪ್ಪರಬಂದ, ಚಾಂದಬಿ ನದಾಫ್, ನೀಲಮ್ಮ ಗೂಡಿನಮನಿ, ಶಾಂತಾ ಪರಪ್ಪಗೋಳ, ಮಸೂತಿಯ ಚಾಂದಸಾಬ ನದಾಫ್, ಬೊಮ್ಮಣ್ಣ ಕೋಲಕಾರ್, ನರ್ಹಿನ್ ದಳವಾಯಿ, ನಾಜಮೀನ್ ಹಣಗಿ ಮಂಜುಳಾ ಗೂಡಿನಮನಿ, ಕರಿಯಪ್ಪ ಆಲೂರ್, ನಗರ ಘಟಕದ ಅಧ್ಯಕ್ಷ ರಾಜು ನದಾಫ್, ರೆಹಮಾನ್ ಮಾಕಂದಾರ್ ಸೇರಿದಂತೆ ಅನೇಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X