ವಿಜಯಪುರ | ಶುಲ್ಕ ಪಾವತಿಸಿಲ್ಲವೆಂದು ಪರೀಕ್ಷೆಯಿಂದ ವಿದ್ಯಾರ್ಥಿಗಳನ್ನು ಹೊರದಬ್ಬಿದ ಶಿಕ್ಷಕರು

Date:

Advertisements

ಶಾಲೆಯ ಪೂರ್ಣ ಶುಲ್ಕ (ಡೊನೇಷನ್) ಪಾವತಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕೊಡದೆ, ಪರೀಕ್ಷೆ ನಡೆಯುತ್ತಿದ್ದ ಕೊಠಡಿಯಿಂದ ಕೆಲ ವಿದ್ಯಾರ್ಥಿಗಳನ್ನು ಶಿಕ್ಷಕರು ಹೊರಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರದಲ್ಲಿರುವ ಖಾಸಗಿ ಶಿಕ್ಷಣ ಸಂಸ್ಥೆ ಡಿ.ವಿ ದರಬಾರ್ ಮೆಮೋರಿಯಲ್ ಟ್ರಸ್ಟ್‌ನ ಶಮ್ಸ್ ಶಾಲೆಯಲ್ಲಿ ಘಟನೆ ನಡೆದಿದೆ. ಎರಡನೇ ಸೆಮಿಸ್ಟರ್​ನ ಶಾಲಾ ಬೋಧನಾ ಶುಲ್ಕ ಭರಿಸಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಯುನಿಟ್‌ ಕಿರುಪರೀಕ್ಷೆ ಬರೆಯಲು ಅವಕಾಶ ಕೊಡದೆ, ಅವರನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಮನೆಗೆ ಕಳಿಸಿದ್ದಾರೆ. 1 ರಿಂದ 6ನೇ ತರಗತಿಯ ಹಲವರು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಾಗದೆ ಮನೆಗೆ ಬಂದಿದ್ದು, ಶಾಲೆಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪರೀಕ್ಷೆಯಿಂದ ವಂಚತರಾದ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಧಾವಿಸಿದ್ದು, ಶಿಕ್ಷಕರನ್ನು ತರಾಟೆಗೆ ತಗೆದುಕೊಂಡಿದ್ದಾರೆ. ಪರೀಕ್ಷಾ ಕೊಠಡಿಯಿಂದ ತಮ್ಮ ಮಕ್ಕಳನ್ನು ಹೊರಹಾಕಲಾಗಿದೆ. ಇದು, ಮಕ್ಕಳ ಮನಸ್ಸಿನ ಗಂಭೀರ ಪರಿಣಾಮ ಬೀರುತ್ತದೆ. 2/3 ಸಾವಿರ ರೂಪಾಯಿ ಕಾರಣಕ್ಕೆ ಮಕ್ಕಳನ್ನು ಹೊರಹಾಕಬೇಕಿತ್ತೇ ಎಂದು ಕಿಡಿಕಾರಿದ್ದಾರೆ.

Advertisements

ಕೆಲ ಪೋಷಕರು ತಾವು ಪೂರ್ಣ ಶುಲ್ಕ ಭರಿಸಿದ್ದರೂ, ಮಕ್ಕಳನ್ನು ಪರೀಕ್ಷೆಯಿಂದ ಹೊರ ಕಳಿಸಲಾಗಿದೆ ಎಂದು ಶಿಕ್ಷಕರು ವಿರುದ್ಧ ಹರಿಹಾಯ್ದಿದ್ದಾರೆ. ಆದಾಗ್ಯೂ, “ಮಕ್ಕಳನ್ನು ಪರೀಕ್ಷೆಯಿಂದ ಹೊರಗೆ ಕಳಿಸಿರುವ ಬಗ್ಗೆ ಶಿಕ್ಷಣ ಇಲಾಖೆ ಮತ್ತು ಮೇಲಾಧಿಕಾರಿಗಳಿಗೆ ದೂರು ಕೊಡಿ, ನಾವು ಏನೂ ಮಾಡಲಾಗುವುದಿಲ್ಲ” ಎಂಬ ಉಢಾಫೆಯ ಉತ್ತರವನ್ನು ಶಾಲೆಯ ಆಡಳಿತ ಮಂಡಳಿ ನೀಡಿದೆ ಎಂದು ಆರೋಪಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X