ವಿಜಯಪುರ | ಪೋಷಣ್ ಟ್ರ್ಯಾಕರ್‌ನ ತಾಂತ್ರಿಕ ದೋಷ ಸರಿಪಡಿಸಿ: ಅಂಗನವಾಡಿ ನೌಕರರ ಸಂಘ ಮನವಿ

Date:

Advertisements

ಪೋಷಣ್‌ ಟ್ರ್ಯಾಕರ್‌ ತಂತ್ರಾಂಶದಲ್ಲಿ ಸಾಕಷ್ಟು ತಾಂತ್ರಿಕ ಸಮಸ್ಯೆಗಳಿದ್ದು, ನಿಗದಿತ ಸಮಯಕ್ಕೆ ಕೆಲಸ ಮುಗಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಕೂಡಲೇ ತಂತ್ರಾಂಶದ ತಾಂತ್ರಿಕ ದೋಷಗಳನ್ನು ಸರಿಪಡಿಸಿ ಸರಾಗವಾಗಿ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದು ಅಂಗನವಾಡಿ ನೌಕರರ ಸಂಘವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿಜಯಪುರ ಜಿಲ್ಲಾ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿತು.

“ಅಂಗನವಾಡಿಗಳಲ್ಲಿ ಮಾಡುವ ಪ್ರತಿ ಕೆಲಸವನ್ನು ಫೋನ್‌ನಲ್ಲಿ ಅಪ್‌ಡೇಟ್‌ ಮಾಡಬೇಕು.‌ ಗರ್ಭಿಣಿ, ಬಾಣಂತಿಯರು, ಮಕ್ಕಳು, ಕಿಶೋರಿಯರು ಸೇರಿದಂತೆ ಫಲಾನುಭವಿಗಳ ಮಾಹಿತಿಯನ್ನು ಪೋಷಣ್ ಟ್ರ್ಯಾಕರ್‌ ತಂತ್ರಾಂಶದಲ್ಲಿ ಕಡ್ಡಾಯವಾಗಿ ಅಳವಡಿಸಬೇಕು. ಈ ವೇಳೆ ಒಂದು ಫೋಟೋ ಅಳವಡಿಸಲು ಸುಮಾರು 30 ನಿಮಿಷ ಸಮಯ ಹಿಡಿಯುತ್ತಿದೆ. ಅದರ ಜತೆಗೆ ಸರ್ವರ್‌ ಸಮಸ್ಯೆಯೂ ಹೆಚ್ಚಾಗಿದೆ.

ಬಹುತೇಕರು ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುವುದರಿಂದ ನೆಟ್‌ವರ್ಕ್‌ ಸಹ ಸರಿಯಾಗಿ ಸಿಗದೆ ಒಂದು ಸಣ್ಣ ಕೆಲಸವನ್ನು ಮಾಡಲು ಇಡೀ ದಿನ ತೆಗೆದುಕೊಳ್ಳುವ ಪರಿಸ್ಥಿತಿ ಇದೆ. ಈ ರೀತಿಯ ಸಮಸ್ಯೆ ನೋಡಿ ಫಲಾನುಭವಿಗಳೂ ಕೂಡ ಮಾಹಿತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ. ಆದರೂ ಇಲಾಖೆಯಿಂದ ಒತ್ತಡ ಮಾತ್ರ ತಪ್ಪಿಲ್ಲ. ಈ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ಕ್ರಮಕೈಗೊಳ್ಳಬೇಕು” ಎಂದು ಮನವಿ ಮಾಡಿದರು.

Advertisements

“ಕೆಲಸದ ಬಗ್ಗೆ ತಿಳಿಸಿಕೊಡುವ ತರಬೇತಿ ಕೂಡ ಇಲಾಖೆ ಮಾಡಿರುವುದಿಲ್ಲ. ಸಮಸ್ಯೆ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿದರೆ, ಸಮರ್ಪಕ ಉತ್ತರ ನೀಡದೇ ಯೂಟ್ಯೂಬ್ ಮೂಲಕ ಕಲಿಯರಿ ಎಂದು ಹಾರಿಕೆಯ ಉತ್ತರ ನಿಡುತ್ತಾರೆ. ಅದರ ಸಲುವಾಗಿ ಒಬ್ಬೊಬ್ಬ ಫಲಾನುಭವಿಯ ಮನೆ ಮುಂದೆಯೂ ಕನಿಷ್ಟ ಅರ್ಧ ತಾಸು ನಿಲ್ಲಬೇಕಾಗುತ್ತದೆ. ಹಿಗಾದರೆ ಶಾಲಾ ಪೂರ್ವ ಶಿಕ್ಷಣ ಕುಂಠಿತವಾಗತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಇಂಗಳೇಶ್ವರ ಮಠದ ಚನ್ನಬಸವ ಶ್ರೀಗೆ ಗೌರವ ಸಮರ್ಪಣೆ

ಈ ವೇಳೆ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ ವಿಜಯಪುರ ಜಿಲ್ಲಾ ಸಮಿತಿ ಮುಖಂಡ ಮಲ್ಲಿಕಾರ್ಜುನ ಹೆಚ್ ಟಿ .ನೇತ್ರತ್ವದಲ್ಲಿ ನಿಂಗಮ್ಮ ಮಠ, ಲಕ್ಷ್ಮೀ ಲಕ್ಷಟ್ಟಿ, ಗಾಯತ್ರಿ ಜಡಿಮಠ, ತಾಲೂಕಿನ ಮುಖಂಡರಾದ ಸವಿತಾ ತೇರದಾಳ, ಚಡಚಣ ತಾಲೂಕಿನಿಂದ ಸತ್ಯಮ ಹಡಪದ ಹಾಗೂ ಗಂಗಾ ಉಪಸ್ಥಿತಿರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X