ವಿಜಯಪುರ | ಮಹಿಳೆಯ ಮಡಿಲಲ್ಲಿಯೇ ಜಾನಪದ ಸಾಹಿತ್ಯ ಹುಟ್ಟಿಕೊಂಡಿದ್ದು: ಶಿವಲೀಲಾ ಮಧುರಾ

Date:

Advertisements

ಮಹಿಳೆಯ ಉಡಿಯಲ್ಲಿಯೇ ಜಾನಪದ ಸಾಹಿತ್ಯ ಹುಟ್ಟಿಕೊಂಡಿದ್ದು, ಮಹಿಳೆ ತನ್ನ ಜೀವನದ ಅನುಭಾವವನ್ನು ತ್ರಿಪದಿಯ ಮೂಲಕ ಹಾಡಿ ಜಾನಪದ ಸಾಹಿತ್ಯವನ್ನು ಮನೆ ಮನೆಗೆ ಮುಟ್ಟಿಸಿದ ಗರತಿಯ ಹಾಡುಗಳು ಜನಪ್ರಿಯತೆ ಉಳಿಸಿಕೊಂಡಿವೆ ಎಂದು ವಿಜಯಪುರದ ಶಿವಶರಣೆ ದಾನಮ್ಮ ದೇವಸ್ಥಾನದ 14ನೇ ಜಾತ್ರಾ ಮಹೋತ್ಸವದ ನಿಮಿತ್ತ ಕಾರ್ಯಕ್ರಮದಲ್ಲಿ ಜಾನಪದ ಚಿಂತಕಿ ಶಿವಲೀಲಾ ಮುರಾಳ ಉಪನ್ಯಾಸ ನೀಡಿದರು.

ಅಖಿಲ ಭಾರತ ವೀರಶೈವ ಮಹಾಸಭಾ ಆಶ್ರಯದಲ್ಲಿ ನಡೆದ ಜಾನಪದ ಗೋಷ್ಠಿಯಲ್ಲಿ ನಾಗಠಾಣ ಶಾಸಕ ವಿಠಲ ಕಟಕದೊಂಡ ಮಾತನಾಡಿ, ಜಾನಪದ ಸಾಹಿತ್ಯ ಅತ್ಯಂತ ಶ್ರೀಮಂತವಾಗಿದ್ದು ಗ್ರಾಮೀಣ ಭಾಗದ ಜನರೇ ಜಾನಪದ ಸಾಹಿತ್ಯದ ಮಾಲೀಕರು ಎಂದರು. ಜಾನಪದ ಸಾಹಿತ್ಯ ವಿದ್ವಾಂಸ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಬಿ.ಎನ್ ಪಾಟೀಲ ಮಾತನಾಡಿ, ರೈತರು ಹಾಗೂ ರೈತ ಮಹಿಳೆಯರು ದಿನನಿತ್ಯ ಜಾನಪದ ಹಾಡುಗಳನ್ನು ಹಾಡಿ ಪ್ರಸಾರ ಮಾಡಿದ ಕೀರ್ತಿ ಗ್ರಾಮೀಣರಿಗೆ ಸಲ್ಲುತ್ತದೆ. ಅನೇಕ ರೈತಾಪಿ ಜನರು ರಚಿಸಿ ಜಾನಪದ ಹಾಡುಗಳನ್ನು ಹಾಡಿ ರಂಜಿಸಿದ್ದಾರೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, ಜಾನಪದ ಸಾಹಿತ್ಯ ಕನ್ನಡ ಸಾಹಿತ್ಯದ ಬುನಾದಿ ಎಂದರು.

ಇದನ್ನು ಓದಿದ್ದೀರಾ? ವಿಜಯಪುರ | ಮಕ್ಕಳು ಮೊಬೈಲ್ ಬಳಕೆಯಿಂದ ದೂರವಿರಬೇಕು: ಗಂಗಾಧರ ಸೋನಾರ

Advertisements

ಕಾರ್ಯಕ್ರಮದಲ್ಲಿ ಶಿವಾನಂದ ಮಂಗಾನವರ, ಮಹೆತಾಬ ಕಾಗವಾಡ ರೈತ ಗೀತೆ ಹಾಗು ತತ್ವಪದಗಳನ್ನು ಹಾಡಿದರು. ಸಾವಿತ್ರಿ ಮಠ ಯೋಗಾಭ್ಯಾಸದ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಅಪ್ಪು ಇಟ್ಟಂಗಿ, ರಶ್ಮಿ ಕೋರಿ, ರುದ್ರಗೌಡ ಪಾಟೀಲ,ಆರ್.ಎಮ್.ತೊನಶ್ಯಾಳ ವೇದಿಕೆ ಮೇಲಿದ್ದರು. ಎಂ.ಬಿ. ಮೂಲಿಮನಿ, ಎಚ್.ಎಮ್. ಬೋರಾವತ, ಪಾಟೀಲ, ರವೀಂದ್ರ ಬಾವೂರ, ಎಮ್.ಎಸ್.ಮೇಟಿ, ಸುಜಾತಾ ಕತ್ತಿ, ಕಮಲಾ ಜುಮನಾಳ, ಗಂಗಾಬಾಯಿ ಸಜ್ಜನ, ಬಸವರಾಜ ಮರನೂರ, ಸಿ.ಎಸ್. ಚಟ್ಟೆರ, ಪ್ರೇಮಾ ನಂದಿ, ಡಾ. ಸವಿತಾ ಝಳಕಿ, ಕವಿತಾ ಕಲ್ಯಾಣಪ್ಪಗೋಳ, ಶೋಭಾ ಮೇಡೆಗಾರ, ಸಹದೇವ ನಾಡಗೌಡ, ಎಮ್.ಜಿ ಸಜ್ಜನ, ಸುಭಾಷ ಕರಿಕಬ್ಬಿ, ಎಸ್.ಎಸ್. ಶಿವರಾಯಗೋಳ, ಜಯಶ್ರೀ ಹಿರೇಮಠ, ಮಹಮ್ಮದ ಗೌಸ ಹವಾಲ್ದಾರ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X