ವಿಜಯಪುರ | ಸರ್ಕಾರ ದಲಿತರಿಗೆ ರಾಜಕೀಯದಲ್ಲೂ ಮೀಸಲಾತಿ ಕಲ್ಪಿಸಲಿ: ದಸಂಸ ಸಂಚಾಲಕ ಮಯೂರ

Date:

Advertisements

ಪರಿಶಿಷ್ಟ ಸಮುದಾಯಗಳಿಗೆ ಶೈಕ್ಷಣಿಕ, ಆರ್ಥಿಕ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಿರುವಂತೆ ಮುಂಬರುವ ದಿನಗಳಲ್ಲಿ ರಾಜಕೀಯ ಕ್ಷೇತ್ರದಲ್ಲೂ ಮೀಸಲಾತಿ ಜಾರಿಗೊಳಿಸುವ ಅಗತ್ಯವಿದ್ದು, ಹಂತ ಹಂತವಾಗಿ ಹೋರಾಟ ರೂಪಿಸಲಾಗುವುದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ ಜೆ ಸಾಗರ ಬಣ) ಸಹ ಸಂಚಾಲಕ ವೈ ಸಿ ಮಯೂರ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪರಿಶಿಷ್ಟ ಸಮುದಾಯಗಳ ಮೂರು ದಶಕಗಳ ಬೇಡಿಕೆ ಹಾಗೂ ಹೋರಾಟ ಕೊನೆಗೂ ಗೆಲುವು ಕಂಡಿದೆ. ಒಳ ಮೀಸಲಾತಿ ಹಂಚಿಕೆಯ ಐತಿಹಾಸಿಕ ನಿರ್ಣಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಕೈಗೊಂಡಿರುವುದು ಸ್ವಾಗತಿಸುತ್ತೇವೆ” ಎಂದ ಅವರು, “ಪರಿಶಿಷ್ಟ ಜಾತಿಗಳನ್ನು ಮೂರು ವರ್ಗೀಕರಣ ಮಾಡಿ ಶೇ 17 ರಷ್ಟು ಮೀಸಲು ಪ್ರಮಾಣವನ್ನು ಬಲಗೈ ಹೊಲಯ/ ಛಲವಾದಿಗಳಿಗೆ ಶೇ. 6 ಹಾಗೂ ಎಡಗೈ ಮಾದಿಗ ಜನಾಂಗಕ್ಕೆಶೇ 6 ರಷ್ಟು ಹಾಗೂ ಸ್ಪೃಷ್ಯ ಜಾತಿಗಳಿಗೆ ಶೇ 5 ರಷ್ಟು ಒಳ ಮೀಸಲಾತಿಯನ್ನು ಹಂಚಿಕೆ ಮಾಡಿರುವುದು ಅತ್ಯಂತ ವೈಜ್ಞಾನಿಕ ನಿರ್ಧಾರ” ಎಂದರು.

“ಒಳ ಮೀಸಲಾತಿ ಹಂಚಿಕೆಯಿಂದ ಯಾವ ಸಮುದಾಯಗಳಿಗೂ ನೋವಾಗಿಲ್ಲ. ಎಲ್ಲಾ ಜಾತಿಗಳಿಗೂ ಪ್ರಧಾನ್ನತೆ ನೀಡಲಾಗಿದೆ. ಜೆಟಿಲವಾಗಿದ್ದ ಸಮಸ್ಯೆಗೆ ಪರಿಹಾರ ಲಭಿಸಿದೆ. ಮೀಸಲಾತಿ ಹಂಚಿಕೆಯಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯವಾಗಿದೆ ಎಂಬ ಕೂಗು ಕೇಳಿ ಬಂದಿದ್ದು, ರಾಜ್ಯ ಸರ್ಕಾರ ಸರಿಪಡಿಸುವುದಾಗಿ ಈಗಾಗಲೇ ಭರವಸೆ ನೀಡಿದೆ” ಎಂದರು.

Advertisements

ಇದನ್ನೂ ಓದಿ: ವಿಜಯಪುರ | ‘ಒಳಮೀಸಲಾತಿ ಜಾರಿಗೊಳಿಸಿದ ಸರ್ಕಾರದ ನಡೆ ಸ್ವಾಗತಾರ್ಹ’

ಈ ವೇಳೆ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣವರ, ಮುಖಂಡರಾದ ಶರಣು ಛಲವಾದಿ, ರಮೇಶ್ ದಾರಣಾಕಾರ, ವಿಜಯಕುಮಾರ ಕಾಂಬಳೆ, ರಮೇಶ್ ನಿಂಬಾಳ್ಕರ, ಮಹಾಂತೇಶ ಸಾಹಸಬಾಳ, ಸದಾಶಿವ ಜಿಗದೋಳ ಹಾಗೂ ಪರಮೇಶ್ವರ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಲಕ್ಷ್ಯಕ್ಕೆ ಗುರಿಯಾಗಿ ದುಸ್ಥಿತಿಗೆ ಬಿದ್ದ ರಾಜ್ಯ ಹೆದ್ದಾರಿ; ಶಾಸಕರ ವಿರುದ್ಧ ಸಾರ್ವಜನಿಕರ ಆಕ್ರೋಶ

ಕಲಬುರಗಿ ಜಿಲ್ಲೆಯ ರಾಜ್ಯ ಹೆದ್ದಾರಿ 125, ಶಹಾಬಾದ್ ತಾಲೂಕಿನಿಂದ ಜೇವರ್ಗಿಯ ರಾಷ್ಟ್ರೀಯ...

ಕಲಬುರಗಿ | ಬೆಳೆ ಹಾನಿ: ಎಕರೆಗೆ 25 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಿ ಎಐಕೆಕೆಎಂಎಸ್‌ ಪ್ರತಿಭಟನೆ

ಕಲಬುರಗಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ನಷ್ಟಕ್ಕೆ ಕೂಡಲೇ ಪರಿಹಾರವನ್ನು ಬಿಡುಗಡೆ...

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X