ವಿಜಯಪುರ | ಚಿತ್ರಕಲಾ ಶಿಕ್ಷಕರ ನೇಮಕದಲ್ಲಿ ಸರ್ಕಾರ ತಾತ್ಸಾರ; ಪೊನ್ನಪ್ಪ ಕಡೇಮನಿ ಆಕ್ರೋಶ

Date:

Advertisements

ಚಿತ್ರಕಲಾ ಶಿಕ್ಷಕರ ಹುದ್ದೆ ಭರ್ತಿ ಮಾಡುವಲ್ಲಿ ಸರ್ಕಾರ ತಾತ್ಸಾರ ಮನೋಭಾವನೆ ಅನುಸರಿಸುತ್ತಿದೆ ಎಂದು ಖ್ಯಾತ ಚಿತ್ರಕಲಾವಿದ ಪೊನ್ನಪ್ಪ ಕಡೇಮನಿ ಹೇಳಿದರು.

ವಿಜಯಪುರದ ವರ್ಣಮಹಲ್ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಚಿತ್ರಕಲಾ ಪ್ರದರ್ಶನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

“ಮಕ್ಕಳಿಗೆ ಚಿತ್ರಕಲೆ ಬೋಧನೆ ಅಗತ್ಯವಾಗಿದೆ. ಚಿತ್ರಕಲೆ ಎಂಬುದು ಒಂದು ಅದ್ಭುತ ಕಲೆ. ಮಕ್ಕಳ ಮನಸ್ಸು ಅರಳಿಸುವ ಕಲೆ, ಆದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಚಿತ್ರಕಲೆ ಬೋಧಿಸುವ ಶಿಕ್ಷಕರ ಕೊರತೆ ಇದೆ. ಕೂಡಲೇ ಈ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಶೇಷ ಆಸಕ್ತಿ ವಹಿಸಬೇಕು” ಎಂದು ಕರೆ ನೀಡಿದ ಅವರು, ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವಲ್ಲಿ ಸರ್ಕಾರ ಇನ್ನು ಹೆಚ್ಚಿನ ಮುತುವರ್ಜಿ ವಹಿಸಬೇಕಿದೆ. ಸಂಘ-ಸಂಸ್ಥೆಗಳು ಕಲಾವಿದರನ್ನು ಪೋಷಿಸುವ ಕಾರ್ಯಕ್ಕೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು” ಎಂದರು.

Advertisements

ಸಮಾಜ ಸೇವಕ ಸುಭಾಷ ಕೆಂಭಾವಿ ಮಾತನಾಡಿ, “ಕಲಾ ಪ್ರದರ್ಶನಗಳಲ್ಲಿ ಕಲಾವಿದರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತಾಗಬೇಕಾದರೆ ಹೆಚ್ಚು ಹೆಚ್ಚು ಪ್ರಚಾರದ ಅಗತ್ಯತೆ ಇದೆ. ಕಲಾ ಪ್ರದರ್ಶನ ಏರ್ಪಡಿಸುವುದರಿಂದ ಅನೇಕ ಕಲಾವಿದರು ತಮ್ಮ ಕಲಾ ವಿದ್ವತ್ತು ಪ್ರದರ್ಶಿಸುವುದು ದೊರಕುತ್ತದೆ” ಎಂದರು.

ಇದನ್ನೂ ಓದಿ: ವಿಜಯಪುರ | ಮೇ 14ರಂದು ರಾಜ್ಯಮಟ್ಟದ ಜನ ಹೋರಾಟ

ಕಾರ್ಯಕ್ರಮದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯೆ ರಾಜೇಶ್ವರಿ ಮೋಪಗಾರ, ಮೋಹನ್ ನಾಯಕ್, ವರ್ಣಮಹಲ್ ಸಂಸ್ಥೆಯ ಅಧ್ಯಕ್ಷ ವಿಜಯ್ ನಾಯಕ, ಮಹದೇವಪ್ಪ ಮೋಪಗಾರ ಸೇರಿ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X