ವಿಜಯಪುರ | ಗ್ರಾ.ಪಂ. ಸದಸ್ಯರ ಸಮಸ್ಯೆ ಪರಿಹಾರಕ್ಕಾಗಿ ಹೋರಾಟ: ಪ್ರದೀಪ್ ಪಾಟೀಲ್

Date:

Advertisements

ಕರ್ನಾಟಕ ರಾಜ್ಯ ಸರ್ಕಾರವು ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡಲಿಕ್ಕೆ ಹಿಂಜರಿಯುವುದಿಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿ ಪ್ರದೀಪ್. ಚ. ಪಾಟೀಲ್ ಸರ್ಕಾರವನ್ನು ಎಚ್ಚರಿಸಿದರು.

ವಿಜಯಪುರದಲ್ಲಿ ಪತ್ರಿಕಾ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಇಂದು ರಾಜ್ಯ ವ್ಯಾಪ್ತಿಯಲ್ಲಿ ಗ್ರಾ. ಪಂ ಸದಸ್ಯರು ಗ್ರಾಮೀಣ ಪ್ರಾಂತ್ಯಗಳ ಸಮಸ್ಯೆಗಳು ಮತ್ತು ಗ್ರಾಮಗಳ ಅಭಿವೃದ್ಧಿಗಾಗಿ ಅಧಿಕಾರಿಗಳನ್ನು ಜೊತೆಗೂಡಿಸಿಕೊಂಡು ಶ್ರಮಿಸುತ್ತಿರುವದಾಗಿ ತಿಳಿಸಿದರು.

ಸರ್ಕಾರದ ಎಲ್ಲ ಯೋಜನೆಗಳನ್ನು ಜನರಿಗೆ ತಲುಪುವ ಜವಾಬ್ದಾರಿಯನ್ನು ಗ್ರಾಮ ಪಂಚಾಯಿತಿ ಸದಸ್ಯರು ಅಧಿಕಾರಿಗಳ ಜೊತೆಗೆ ಹಳ್ಳಿಗಳಲ್ಲಿ ಕೆಲಸ ಮಾಡುತ್ತಿದ್ದರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ಇವರನ್ನು ಕಡಿಗಣಿಸುವುದು ಮತ್ತು ಗ್ರಾಮ ಪಂಚಾಯಿತಿಯ ಸಾಮಾನ್ಯ  ಸಭೆಗಳಲ್ಲಿ  ಸದಸ್ಯರನ್ನು ನಿರ್ಲಕ್ಷಿಸಿರುವುದಲ್ಲದೆ ಸಾಮಾನ್ಯ ಸಭೆಗೆ ಗೈರಿ ಹಾಜರು ಎಂದು ಸುಳ್ಳು ಆರೋಪ ಮಾಡಿದ್ದಾರೆ ಎಂದರು.

ಅದೇ ಸಂದರ್ಭದಲ್ಲಿ ಪಂಚಾಯಿತಿಯ ಮುಂದೆ ಧರಣಿ ಕೂತಿರುವ ಸದಸ್ಯರಿಗೆ ಸುಳ್ಳು ಭರವಸೆ ನೀಡುವುದರ ಮುಖಾಂತರ ಸಮಾಧಾನಪಡಿಸಿರುತ್ತಾರೆ ಹೊರತು ನ್ಯಾಯ ಕೊಡಿಸಿರುವುದಿಲ್ಲ ಎಂದು ಹೇಳಿದರು. ಚಿಕ್ಕಬಳ್ಳಾಪುರ ಜಿಲ್ಲಾ, ಶಿಡ್ಲಘಟ್ಟ ತಾಲೂಕ, ಜೆ. ವೆಂಕಟಪುರ, ಗ್ರಾಮ ಪಂಚಾಯಿತಿ ಮಹಿಳಾ ಸದಸ್ಯೆ ಶಶಿಕಲಾ ಅಂಬರೀಶ್ ಅಧಿಕಾರಿಗಳು ವರ್ತಿಸಿದ ವಿಧಾನ ಸರಿಯಲ್ಲ ಎಂದರು.

ಅಲ್ಲಿನ ಪಿಡಿಒ, ಅವರ ಪ್ರಶ್ನೆಗಳಿಗೆ ಸಾಮಾನ್ಯ ಸಭೆಯಲ್ಲಿ ಸರಿಯಾದ ಸಮಾಧಾನ ನೀಡದೆ, ನಿರ್ಲಕ್ಷ್ಯವಾಗಿ ಮತ್ತು ಚಿಟಿಕೆ ಹೊಡೆಯುವುದರ ಮುಖಾಂತರ ಗುಂಡಾವರ್ತನೆ ತೋರಿರುವುದು ಖಂಡನಿಯ ಎಂದರು. ಈಗಾಗಲೇ ಈ ವಿಷಯಕ್ಕೆ ಸಂಬಂಧಪಟ್ಟ  ತಮ್ಮ ಒಕ್ಕೂಟ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತರಾದ, ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರಿಗೆ ದೂರು ನೀಡಲಾಗಿದೆ ಎಂದರು.

ರಾಜ್ಯ ಸರ್ಕಾರವು ಕೂಡಲೇ ಈ ವಿಷಯದ ಮೇಲೆ ಗಮನಹರಿಸಿ, ಸಂಬಂಧಿತ ಪಿಡಿಒ ಅವರನ್ನು ವಿಚಾರಣೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮವಹಿಸಿ, ಸದಸ್ಯರಿಗೆ ನ್ಯಾಯ ಕೊಡಿಸದಿದ್ದರೆ ರಾಜ್ಯಾದ್ಯಂತ ತಮ್ಮ ಒಕ್ಕೂಟ ನೇತೃತ್ವದಲ್ಲಿ ಉಗ್ರಹೋರಾಟ ಕೈಗೊಳ್ಳಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರ ನೀಡಿದರು.

ಸಮಾಜದಲ್ಲಿ ಗೌರವಕ್ಕಾಗಿ ಕೆಲಸ ಮಾಡುತ್ತಿರುವ ಗ್ರಾಮ ಪಂಚಾಯತಿ ಸದಸ್ಯರನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಈ ರೀತಿ ನಿರ್ಲಕ್ಷ ಭಾವದಿಂದ ನೋಡಿದರೆ, ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ಕೆಟ್ಟು ಹೆಸರು ಬರುವ ಅವಕಾಶ ಇರುವುದರಿಂದ ಮಾನ್ಯ ಪಂಚಾಯತ್ ರಾಜ್ ಸಚಿವರು ಹಾಗೂ ಸಂಬಂಧಿತ ಇಲಾಖೆ  ಅಧಿಕಾರಿಗಳು ಗ್ರಾಮ ಪಂಚಾಯತಿ ಸದಸ್ಯರ ಹಕ್ಕುಗಳ ರಕ್ಷಣಾ ಮತ್ತು ಉತ್ತಮ ಆಡಳಿತಕ್ಕಾಗಿ ಕ್ರಮವಹಿಸಲು ಈ ಮೂಲಕ ಪ್ರದೀಪ್. ಚ. ಪಾಟೀಲ್ ಮನವಿ ಮಾಡಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X