ವಿಜಯಪುರ | ಐತಿಹಾಸಿಕ ಬಾವಿ ಪುನರುಜ್ಜೀವನ ಅಭಿಯಾನಕ್ಕೆ ಚಾಲನೆ

Date:

Advertisements

ವಿಜಯಪುರ ನಗರದ ಕರ್ನಾಟಕ ಜಲಾಭಿವೃದ್ಧಿ ಸಂಸ್ಥೆ ಹಾಗೂ ಇಂಡಿಯನ್ ಇನ್ಸ್‌ಟಿಟ್ಯೂಟ್ ಆಫ್ ಆರ್ಕಿಟೆಕ್ಟ್ ಶಾಖೆ ನೇತೃತ್ವದಲ್ಲಿ ವಿಜಯಪುರ ನಗರದ ಚಾಬುಕ್ ಸವಾರ್ ದರ್ಗಾ ಬಳಿಯ ಐತಿಹಾಸಿಕ ಬಾವಿ ಪುನರುಜ್ಜೀವನ ಅಭಿಯಾನಕ್ಕೆ ಚಾಲನೆ ನೀಡಿ ಸ್ವಚ್ಛತಾ ಕಾರ್ಯ ಆರಂಭಿಸಿದರು.

ವಿಜಯಪುರ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್, ಆಯುಕ್ತರು ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ವಾರ್ಡಿನ ಸದಸ್ಯರ ಸಮ್ಮುಖದಲ್ಲಿ ಚಾಲನೆ ನೀಡಿದರು.

ಜಲಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ಪೀಟರ್ ಅಲೆಕ್ಸಾಂಡರ್‌ ಮಾತನಾಡಿ, “ನಗರದಲ್ಲಿರುವ ಐತಿಹಾಸಿಕ ಬಾವಿಗಳು ಪುನರುಜ್ಜೀವನ ಮಾಡಿದರೆ ನೀರಿನ ಹಾಹಾಕಾರ ತಪ್ಪಿಸಲು ಸಾಧ್ಯವಾಗಬಹುದು. ಬಾವಿಗಳನ್ನು ರಕ್ಷಣೆ ಮಾಡಿ ಸರಿಯಾದ ನಿರ್ವಹಣೆ ಮಾಡಬೇಕು” ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಮಾಡಿದರು.

Advertisements

ಬಾವಿ ಅಭಿವೃದ್ಧಿ 1

ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಗೂಳಪ್ಪ ಶೆಟ್ಟಿಗಾರ್ ಮಾತನಾಡಿ, “ಈ ಕಾರ್ಯಗಳಿಂದ ಬಾವಿ ಸುತ್ತಮುತ್ತಲಿನ ಬಡಾವಣೆಯಲ್ಲಿರುವ ಸಾರ್ವಜನಿಕರಿಗೆ ಸ್ವಚ್ಛ ಗಾಳಿ ಬರುತ್ತದೆ. ಸೊಳ್ಳೆಗಳ ಕಾಟ ತಪ್ಪಿ ಜನರ ಆರೋಗ್ಯ ಹಾಳಾಗುವುದನ್ನು ತಪ್ಪಿಸಬಹುದು. ಒಟ್ಟಾರೆ ಉತ್ತಮ ಕಾರ್ಯವಾಗಿದ್ದು,  ಪರಿಸರ ರಕ್ಷಣೆಯಾಗುತ್ತದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಲ್ಲ ಗ್ರಾಮ ಪಂಚಾಯತಿಗಳಿಗೆ ಪಿಡಿಒ ನೇಮಕಕ್ಕೆ ಮನವಿ 

ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಗೂಳಪ್ಪ ಶೆಟ್ಟಿಗಾರ್ ಅವರಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರುಗಿ ಅವರು ಸನ್ಮಾನಿಸಿದರು. ಹಾಗೆಯೇ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಅವರನ್ನು ಕೂಡಾ ಜಲಾಭಿವೃದ್ಧಿ ಅಧ್ಯಕ್ಷ ಪೀಟರ್ ಅಲೆಕ್ಸಾಂಡ‌ರ್ ಸನ್ಮಾನಿಸಿದರು.

ಸ್ವಚ್ಛತಾ ಕಾರ್ಯದಲ್ಲಿ ಪಾಟೀಲ ಫೌಂಡೇಶನ್ ಸಂಸ್ಥೆ, ರಾಷ್ಟ್ರೀಯ ಅಪರಾಧ ನಿಯಂತ್ರಣ ಮಂಡಳಿ, ರಾಜೇಂದ್ರ ಫೌಂಡೇಶನ್, ಹ್ಯಾಪಿ ಕೇಕ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಆಂಡ್ ಕಲ್ಚರಲ್‌ ಹೆರಿಟೇಜ್, ಕ್ರಾಂತಿ ಅಸೋಸಿಯೇಷನ್ ಸಂಸ್ಥೆಯ ಸ್ವಯಂ ಸೇವಕರು ಭಾಗವಹಿಸಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X