ವಿಜಯಪುರ | ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ವೈದ್ಯರಿಗೆ ಸನ್ಮಾನ ಸಮಾರಂಭ

Date:

Advertisements

ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರವು ಕಳೆದ ಹಲವು ವರ್ಷಗಳಿಂದಲೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳನ್ನು ಜನತೆ ಅನುಭವಿಸಿದೆ. ಸದ್ಯ ಇದೀಗ ತಮ್ಮ ಆರೋಗ್ಯ ಸೇವೆ ಸ್ಥಳೀಯರಲ್ಲಿ ಸಂತಸ ಮೂಡಿಸಿದೆ. ನಿಮ್ಮ ಸಹಕಾರಕ್ಕೆ ನಾವು ಸದಾ ಇರುತ್ತೇವೆ. ಸೇವೆಗೆ ಹಿಂಜರಿಯಬೇಡಿ ಎಂದು ಡಿಎಸ್ಎಸ್ ಹೋಬಳಿ ಘಟಕದ ಅಧ್ಯಕ್ಷ ಗುಂಡಪ್ಪ ಚಲವಾದಿ ವೈದ್ಯರಿಗೆ ಸಾಥ್‌ ನೀಡಿದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ತಜ್ಞ ವೈದ್ಯ ಡಾ.ರಂಗನಾಥ ವೈದ್ಯ ಸೇರಿದಂತೆ ಐದು ಮಂದಿ ವೈದ್ಯರಿಗೆ ಡಿಎಸ್ಎಸ್ ನಾಲತವಾಡ ಹೋಬಳಿ ಸಂಚಾಲಕರ ಹಾಗೂ ವಿವಿಧ ಸಂಘಟಕರು ಹಮ್ಮಿಕೊಂಡಿದ್ದ ನಾಗರಿಕ ಸಮಾರಂಭದಲ್ಲಿ ಮಾತನಾಡಿದರು.

“ಇಲ್ಲಿರುವ ಹಲವು ಸಿಬ್ಬಂದಿಗಳಿಗೆ ಸಮಯ ಪ್ರಜ್ಞೆ ಬೇಕಿದ್ದು, ಅಂಥವರಿಗಾಗಿ ಮೊದಲು ಸಭೆ ಕರೆದು ಉತ್ತಮ ಸೇವೆಗೆ ಸಮಯ ಪಾಲನೆ ಮಾಡುವಂತೆ ಸೂಚಿಸಬೇಕು” ಎಂದು ಮನವಿ ಮಾಡಿಕೊಂಡರು.

Advertisements

ಸನ್ಮಾನ ಸ್ವೀಕರಿಸಿ ಡಾ.ರಂಗನಾಥ ವೈದ್ಯ ಮಾತನಾಡಿ, “ನನ್ನೊಂದಿಗೆ ಇನ್ನುಳಿದ ವೈದ್ಯರೂ ಕೂಡ ಎಂಬಿಬಿಎಸ್ ಮುಗಿಸಿದ್ದು, ಅವರೂ ಕೂಡಾ ಯುವಕರಿದ್ದಾರೆ. ಅವರೊಂದಿಗೆ ತಮ್ಮ ಸಹಕಾರದಿಂದ ನನ್ನ ಕೈಲಾದಷ್ಟು ಸೇವೆ ಸಲ್ಲಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಹೃದಯಾಘಾತದಿಂದ ಕೆಎಸ್‌ಆರ್‌ಟಿಸಿ ನೌಕರ ನಿಧನ

ಈ ವೇಳೆ ಸನ್ಮಾನ ಸ್ವೀಕರಿಸಿದ ಡಾ.ಅರ್ಪಿತಾ ಚಿನಿ ವಾಲರ, ಡಾ.ರೇಶ್ಚಾ ಹವೇಲಿ ಹಾಗೂ ಕೆಪಿಸಿಸಿ ಘಟಕ ಬೀದಿ ಬದಿ ವ್ಯಾಪಾರಿಗಳ ಸಂಘದ ತಾಲೂಕಧ್ಯಕ್ಷ ಮೈಬೂಬ ಕುಳಗೇರಿ, ಶಿವು ಪಟ್ಟಣಶೆಟ್ಟಿ, ದಂಡಪ್ಪ ಜಾವಳಗೇರಿ, ಕರವೇ ಸಂಘಟಕ ಕಾಶೀಮ ಗಂಗೂರ, ಕಾಶೀಬಾಯಿ, ಮುನ್ನಾ ಹೊನ್ನುಟಗಿ, ಕವಿತಾ ಪಾಟೀಲ, ಕಾಶೀಮಪಟೇಲ ಬಿದರಕೋಟಿ, ಬಸವರಾಜ ಹಳ್ಳಿ, ಮುತ್ತಣ್ಣ ಕೂಡಲಗಿ, ಮಹಾಂತೇಶ ಹಡಪದ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ

ಅಲೆಮಾರಿ ಬುಡಕಟ್ಟು ಸಮುದಾಯಗಳನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಮುಂಚೂಣಿಗೆ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

Download Eedina App Android / iOS

X