ವಿಜಯಪುರ | ಸಾರ್ವಜನಿಕ ಈಜುಕೊಳದಲ್ಲಿ ಅಕ್ರಮ; ಸೂಕ್ತ ಕ್ರಮಕ್ಕೆ ಆಗ್ರಹ

Date:

ಸಾರ್ವಜನಿಕ ಈಜುಕೊಳದಲ್ಲಿ ಅವ್ಯವಹಾರ ಕಂಡುಬರುತ್ತಿದ್ದು, ವ್ಯವಸ್ಥಾಪಕಿಯನ್ನು ಕೂಡಲೇ ಬದಲಾವಣೆ ಮಾಡುವಂತೆ ಆಗ್ರಹಿಸಿ ವಿಜಯಪುರ ಜಿಲ್ಲೆ ಕನಕದಾಸ ಬಡಾವಣೆಯ ಸಾರ್ವಜನಿಕರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

- Advertisement -

“ಜಿಲ್ಲೆಯ ಕನಕದಾಸ ಬಡಾವಣೆಯಲ್ಲಿ ಕಳೆದ ಒಂದು ವರ್ಷದಿಂದ ಈಜುಗೊಳ ಪ್ರಾರಂಭವಾಗಿದ್ದು, ಈ ಈಜುಕೊಳದಲ್ಲಿ ಪ್ರತಿನಿತ್ಯ ದೈನಂದಿನ ತರಬೇತಿಗಾಗಿ ಬಹುತೇಕರು ಆಗಮಿಸುತ್ತಿದ್ದಾರೆ. ಆದರೆ, ಈಗ ಚಳಿಗಾಲವಿರುವುದರಿಂದ ಈಜುಗೊಳಕ್ಕೆ ಕೆಲವು ಮಂದಿ ಬರುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

“ಈಜುಕೊಳಕ್ಕೆ ನೇಮಕವಾಗಿರುವ ಮಹಿಳಾ ಮ್ಯಾನೇಜರ್ ಪತ್ರಿನಿತ್ಯ ಕೆಲಸಕ್ಕೆ ಸರಿಯಾಗಿ ಬರುವುದಿಲ್ಲ. ಇದರಿಂದ ಉಳಿದ ಸಿಬ್ಬಂದಿಯೂ ಸರಿಯಾಗಿ ಕೆಲಸಕ್ಕೆ ಬರುವುದಿಲ್ಲ. ಜೊತೆಗೆ ಸಿಬ್ಬಂದಿ ನಡುವೆ ಹೊಂದಾಣಿಕೆಯೂ ಇಲ್ಲ” ಎಂದು ಟೀಕಿಸಿದರು.

“ಪ್ರತಿದಿನ ಈಜುಗೊಳಕ್ಕೆ ಬರುವ ಜನರಿಗೆ ಟಿಕೆಟ್ ನೀಡುವುದು ಮಹಿಳಾ ಮ್ಯಾನೇಜರ್‌ ಕೆಲಸ. ಆದರೆ, ಇವರು ಟಿಕೆಟ್‌ ನೀಡಲು ಡಿ ಗ್ರೂಪ್‌ ಸಿಬ್ಬಂದಿಗೆ ವಹಿಸಿ ಹೊರಗಡೆ ಹೋಗುತ್ತಾರೆ. ಇವರು ಯಾವುದೇ ರೀತಿಯ ಕಂಪ್ಯೂಟರ್ ಜ್ಞಾನ ಹಾಗೂ ಅಕೌಂಟ್ ಬಗ್ಗೆ ಅನುಭವ ಹೊಂದಿಲ್ಲ” ಎಂದು ಆರೋಪಿಸಿದರು.

ಈಜುಕೊಳದ ಮಾಹಿತಿ
ಈಜುಕೊಳದ ಬಿಲ್‌ ಮತ್ತು ಅಕ್ರಮ ಬಿಲ್‌ ಪಟ್ಟಿ

“ಟಿಕೆಟ್‌ ನೀಡುವಿಕೆಯಲ್ಲಿ ಗೋಲಮಾಲ್ ನಡೆಯುತ್ತಿದ್ದು, ಒಬ್ಬರಿಗೆ ₹100 ಶುಲ್ಕ ನಿಗದಿಪಡಿಸಲಾಗಿದೆ. ಒಟ್ಟಿಗೆ ಐದು ಮಂದಿ ಬಂದರೆ, ಒಬ್ಬರ ಹೆಸರು ಬರೆದು + 4= ₹500 ಅಂತ ಟಿಕೇಟಿನ ಮೇಲೆ ಬರೆದು ಜನರಿಗೆ ಕೊಡುತ್ತಾರೆ. ಆದರೆ ರಿಜಿಸ್ಟರ್‌ನಲ್ಲಿ ₹100 ಅಂತ ಬರೆಯುತ್ತಾರೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ವಿದ್ಯುತ್‌ ದರ ಏರಿಕೆ; ಜೂ.22ರ ಕರ್ನಾಟಕ ಬಂದ್‌ ಕರೆ ವಾಪಸು

“ಅಕ್ರಮದ ಕುರಿತು ವಿಚಾರಿಸಿದರೆ ʼನಿಮಗೇನು ಮಾಡುವುದು ಮುಚ್ಚಿಕೊಂಡ ಸ್ವಿಮಿಂಗ್ ಮಾಡಿʼ ಅಂತ ನಮ್ಮ ಮೇಲೆಯೇ ಚಿರಾಡುತ್ತಾರೆ. ಅಂದರೆ ಇವರು ಸರ್ಕಾರಕ್ಕೆ ತೋರಿಸುವ ಮೊತ್ತ ₹100 ಮಾತ್ರ, ಮಿಕ್ಕ ₹400 ಇವರ ಪಾಕೆಟ್‌ಗೆ ಹೋಗುತ್ತದೆ. ಇದನ್ನು ಪರಿಶೀಲನೆ ಮಾಡಲು ಸಹಾಯಕ ನಿರ್ದೇಶಕರಿಗೆ ಹಲವು ಬಾರಿ ತಿಳಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ” ಎಂದು ಆರೋಪಿಸಿದರು.

“ಎಲ್ಲ ದಾಖಲೆಗಳ ಮಾಹಿತಿಯನ್ನು ಪತ್ರದೊಂದಿಗೆ ಲಗತ್ತಿಸಿದ್ದೇವೆ. ಪರಿಶೀಲನೆ ನಡೆಸಿ ಸರ್ಕಾರಕ್ಕೆ ಮೋಸ ಮಾಡಿರುವುದನ್ನು ಗಮನಿಸಿ ದಂಡದ ಸಮೇತ ಹಣವನ್ನು ವಸೂಲಿ ಮಾಡಬೇಕು. ಜೊತೆಗೆ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಕನಕದಾಸ ಬಡಾವಣೆಯ ನಿವಾಸಿಗಳು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ದಲಿತ ಸಭೆಯೋ, ಚಹಾ, ಫೋಟೋ ಕೂಟವೋ? ಅಧಿಕಾರಿಗಳ ವಿರುದ್ಧ ವಿಶ್ವ ನಾಟೇಕಾರ್ ಕಿಡಿ

ದಲಿತರ ಮೇಲಿನ ದೌರ್ಜನ್ಯ, ದಬ್ಬಾಳಿಕೆ, ಸಾಮಾಜಿಕ ಅಸ್ಪೃಶ್ಯತೆ, ಭೂಮಿ ಹಾಗೂ ಮೂಲಭೂತ...

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...