ವಿಜಯಪುರ | ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ; ರಕ್ಷಿತಾ ಪಂಡಿತ ಕೊಡಹೊನ್ನಗೆ ಸನ್ಮಾನ

Date:

Advertisements

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿಗೆ ಸಮಗಾರ ಹರಳಯ್ಯ ಸಮುದಾಯದ ಹೆಮ್ಮೆಯ ಪುತ್ರಿ ರಕ್ಷಿತಾ ಪಂಡಿತ ಕೊಡಹೊನ್ನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 625ಕ್ಕೆ 620 ಅಂಕ ಪಡೆದು ಇಂಡಿ ತಾಲೂಕಿಗೆ ಪ್ರಥಮ ವಿದ್ಯಾರ್ಥಿನಿಯಾಗಿ ಯಶಸ್ಸು ಸಾಧಿಸುವುದರಿಂದ ಸಮಾಜದ ಮುಖಂಡರು ಸನ್ಮಾನಿಸಿ ಗೌರವಿಸಿದರು.

ಈ ವಿದ್ಯಾರ್ಥಿನಿಯ ಸಾಧನೆ ಸಮುದಾಯದ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿ. ಪ್ರಸ್ತುತ ಸಂದರ್ಭದಲ್ಲಿ ಸಮಾಜದ ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಇಂತಹ ಸಂದರ್ಭದಲ್ಲಿ ಈ ವಿದ್ಯಾರ್ಥಿನಿಯ ಸಾಧನೆ ಸಮಾಜಕ್ಕೆ ಹೆಮ್ಮೆ ಹಾಗೂ ಗೌರವ ತಂದಿದೆ. ಜತೆಗೆ ಸಮಾಜದ ಇನ್ನಿತರ ವಿದ್ಯಾರ್ಥಿಗಳು ಶೇ.90ಕ್ಕಿಂತಲೂ ಹೆಚ್ಚಿಗೆ ಅಂಕ ಪಡೆದಿದ್ದಾರೆ. ಅಂತಹ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಿ ಸನ್ಮಾನಿಸಲಾಗುವುದು ಎನ್ನಲಾಗಿದೆ.‌

ಸಮಾಜದ ಮುಖಂಡ ಮಹೇಶ ಶಿವಪ್ಪ ಹೊನ್ನಬಿಂದಗಿ, ರಾಯಪ್ಪ ಹರಳಯ್ಯ, ರಾಯಗೊಂಡ ರಗಟೆ, ಕಾಶಿನಾಥ ಹೊಸಮನಿ, ಜಗನ್ನಾಥ ಕೊಡತೆ, ಶ್ರೀನಿವಾಸ ಶಹಾಪುರ ವಿಜಯಪುರ, ಸೋಮು ಹೊನ್ನಕಟ್ಟಿ, ಪಂಡಿತ ಕೊಡಹೊನ್ನ ಇದ್ದರು.

Advertisements

ಈ ಸುದ್ದಿ ಓದಿದ್ದೀರಾ? ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ಸ್ 2025: ಶಿವರಾಜಕುಮಾರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

ಇದೇ ಸಂದರ್ಭದಲ್ಲಿ ಸಮುದಾಯದ ಎಲ್ಲ ಬಾಂಧವರು ಒಳಮೀಸಲಾತಿ ಕುರಿತು ಜಾತಿ ಸಮೀಕ್ಷೆ ನಡದಿದೆ. ಕಾರಣ ತಾವೆಲ್ಲರೂ ಜಾಗೃತವಹಿಸಿ 93 ಕೋಡ್‌ ನಂಬರ್‌ನ ಸಮಗಾರ ಜಾತಿ ಎಂದು ನಮೂದಿಸಬೇಕು. ಕುಲಕಸಬು ಕೇಳಿದ್ರೆ ಚರ್ಮಗಾರಿಕೆ ಅಥವಾ ಪಾದರಕ್ಷೆ ತಯಾರಿಸುವುದು ಅಂತಾ ನಮೂದಿಸಬೇಕು. ಕಡ್ಡಾಯವಾಗಿ ಗಣತಿದಾರರು ಬರದೇ ಇದ್ದರೆ ಹುಡುಕಿ ಹೋಗಿ ನಮ್ಮ ಹಟ್ಟಿಗಳಿಗೆ ಕರೆತಂದು ಸಮುದಾಯದ ಎಲ್ಲರ ಮಾಹಿತಿ ಸಲ್ಲಿಸಬೇಕು ಎಂದು ಸಮಗಾರ ಹರಳಯ್ಯ ಸಮುದಾಯದ ಮುಖಂಡರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X