ವಿಜಯಪುರ | ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯ: ಸಬಲಾ ಸಂಸ್ಥೆ

Date:

Advertisements

ಕೇಂದ್ರದ ಬಜೆಟ್ನಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ವಿಜಯಪುರ ನಗರ ಸಬಲಾ ಸಂಸ್ಥೆ ಮುಖ್ಯಸ್ಥೆ ಮಲ್ಲಮ್ಮ ಯಳವಾರ ಟೀಕಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಕರ್ನಾಟಕಕ್ಕೆ ಈ ಬಾರಿ ಬಜೆಟ್‌ನಲ್ಲಿ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ಇದರಿಂದ ಕರ್ನಾಟಕದ ಜನರಿಗೆ ನಿರಾಶೆಯಾಗಿದೆ. ನಷ್ಟದಲ್ಲಿರುವ ಭದ್ರಾವತಿ ಉಕ್ಕಿನ ಕಾರ್ಖಾನೆಯಂತಹ ಅನೇಕ ಉದ್ದಿಮೆಗಳ ಪುನಶ್ಚೇತನಕ್ಕೆ ಯಾವುದೇ ಯೋಜನೆಯನ್ನು ಘೋಷಿಸದೆ ಇರುವುದು ಬೇಸರ ತಂದಿದೆ” ಎಂದರು.

“ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದವರಿಗೆ ₹3.50 ಲಕ್ಷಗಳ ವರೆಗೆ ಸಾಲ ಸೌಲಭ್ಯವನ್ನು ಒದಗಿಸುವುದಾಗಿ ಘೋಷಿಸಲಾಗಿದೆ. ಆದರೆ ರೈತರ ಉತ್ಪಾದನೆಗೆ ಯಾವುದೇ ನಿರ್ದಿಷ್ಟವಾದ ಯೋಜನೆ ರೂಪಿಸದೇ ಇರುವುದರಿಂದ ರೈತರು ಸಾಲದ ಸುಳಿಯಲ್ಲಿ ಸಿಲುಕಬೇಕಾಗುತ್ತದೆ. ರೈತರು ಈಗಾಗಲೇ ಸಂಕಷ್ಟದಲ್ಲಿದ್ದು ಇನ್ನೂ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ. ದೇಶದ ಬೆನ್ನೆಲುಬಾಗಿರುವ ಒಕ್ಕಲುತನ ಆರ್ಥಿಕ ಸಂಕಷ್ಟದಿಂದ ಬಳಲುವಂತಾಗುತ್ತದೆ. ಮಹಿಳಾ ಶಿಕ್ಷಣಕ್ಕೆ ಯಾವುದೇ ಹೊಸ ಯೋಜನೆಯನ್ನು ರೂಪಿಸಿಲ್ಲ. ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿಲ್ಲ. ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಆದಾಯ ಮೂಲ ಹೆಚ್ಚಿಸಲು ಸರಿಯಾದ ಯೋಜನೆಯನ್ನು ರೂಪಿಸಲಾಗಿಲ್ಲ. ಹೀಗಾಗಿ ಬಡವರು ಬಡವರಾಗಿಯೇ ಉಳಿಯುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಪರಿಸರ ಕಾಳಜಿ ಕೇವಲ ವಾಟ್ಸಪ್ ಸ್ಟೇಟಸ್‌ಗೆ ಸೀಮಿತವಾಗದಿರಲಿ: ನಟ ವಿಶ್ವಪ್ರಕಾಶ

“ದೇಶದ ಸಾಲ ₹200 ಲಕ್ಷ ಕೋಟಿಗಳಿಗಿಂತಲೂ ಹೆಚ್ಚಾಗಿರುವುದು ದೇಶದ ಪ್ರತಿ ಪ್ರಜೆಗೂ ಆತಂಕವನ್ನು ಹುಟ್ಟಿಸಿದೆ. ಮೂಲ ಶಿಕ್ಷಣಕ್ಕೆ ಒತ್ತು ಕೊಡದೆ ಮೆಡಿಕಲ್ ಸೀಟ್‌ಗಳನ್ನು ಹೆಚ್ಚು ಮಾಡಿದ್ದು, ನಗರದ ಮಕ್ಕಳಿಗಷ್ಟೇ ಹೆಚ್ಚು ಉಪಯುಕ್ತವಾಗಿದೆ. ಗ್ರಾಮೀಣ ಮಕ್ಕಳು ಇದರಿಂದ ವಂಚಿತರಾಗುತ್ತಾರೆ. ಆದರೆ ಇದೆಲ್ಲದರ ನಡುವೆ ಕೇಂದ್ರ ಬಜೆಟ್ 12 ಲಕ್ಷದವರೆಗೆ ಆದಾಯ ತೆರಿಗೆ ವಿನಾಯತಿ ಘೋಷಣೆ ಮಾಡಿದ್ದು ಸ್ವಾಗತಾರ್ಹ” ಎಂದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X