ವಿಜಯಪುರ | ಪಠ್ಯದ ಜೊತೆಗೆ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಅವಶ್ಯಕ | ಬಿ ಜಿ ಮೂಲಿಮನಿ

Date:

Advertisements

ವಿಶ್ವವಿದ್ಯಾಲಯಗಳು ಪಠ್ಯದ ಜೊತೆಗೆ ಜೀವನದ ಮೌಲ್ಯಗಳನ್ನು ರೂಢಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವುದು ಅತ್ಯವಶ್ಯಕ ಎಂದು ಕಲಬುರ್ಗಿಯ ಗುಲಬರ್ಗಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ ಬಿ ಜಿ ಮೂಲಿಮನಿ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿ ವಿದ್ಯಾರ್ಥಿ ಕ್ಷೇಮಪಾಲನ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿನಿಯರಿಗೆ ಸ್ವಾಗತ ಕೋರುವ ‘ಪುತ್ರಿಯರ ದಿನ-ಸ್ಪಂದನ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼಪಠ್ಯ ಚಟುವಟಿಕೆಗಳ ಜೊತೆಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ವ್ಯಕ್ತಿತ್ವದ ಅಭಿವೃದ್ಧಿಗೆ ಸಹಾಯ ಮಾಡುವುದು ವಿವಿಗಳ ಕೆಲಸ. ಮಹಿಳೆ ಒಂದು ದೇಶದ ಸಂಸ್ಕೃತಿ ಮತ್ತು ಪರಂಪರೆಯ ಪ್ರತೀಕವಾಗಿದ್ದು, ಆಕೆಯ ಶಕ್ತಿಯು ದೇಶದ ಪ್ರಗತಿಗೆ ದೊಡ್ಡ ಕೊಡುಗೆಯನ್ನು ನೀಡುತ್ತದೆ. ಜೀವನದಲ್ಲಿ ಸರ್ವಧರ್ಮ ಸಮನ್ವಯವನ್ನು ಅಳವಡಿಸಿಕೊಳ್ಳುವುದರಿಂದ ಸಮಾನತೆ ಮತ್ತು ಶಾಂತಿಯ ದಾರಿಯನ್ನು ಅನುಸರಿಸಬೇಕು ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ ಬಿ ಕೆ ತುಳಸಿಮಾಲ ಮಾತನಾಡಿ, ಎರಡು ವರ್ಷಗಳ ಕಾಲ ಕೇವಲ ತರಗತಿಯಲ್ಲಿ ಕಲಿಯುವುದಷ್ಟೇ ಸಾಕಾಗುವುದಿಲ್ಲ. ಈ ಅವಧಿಯಲ್ಲಿ ಕೆಲವು ಕೌಶಲ್ಯಗಳು ಮತ್ತು ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಬಹಳ ಮುಖ್ಯವಾಗಿದೆ. ಇಂದಿನ ಸಂದರ್ಭದಲ್ಲಿ ಸಾಮಾಜಿಕ ಮೌಲ್ಯಗಳು ನಿಧಾನವಾಗಿ ಕಣ್ಮರೆಯಾಗುತ್ತಿರುವುದರಿಂದ ಇವುಗಳನ್ನು ಅಳವಡಿಸಿಕೊಳ್ಳುವ ಕಡೆಗೆ ಹೆಚ್ಚು ಗಮನಹರಿಸಬೇಕು. ಜೀವನದಲ್ಲಿ ಕೇವಲ ಪಠ್ಯದ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ, ನೈತಿಕ ಮತ್ತು ಜೀವನದ ಮೌಲ್ಯಗಳು ಅತ್ಯಂತ ಮುಖ್ಯವಾದವು. ಈ ಬೆಳವಣಿಗೆಗೆ ವಿಶ್ವವಿದ್ಯಾನಿಲಯವು ಸೂಕ್ತ ಮಾರ್ಗದರ್ಶನ ನೀಡುತ್ತಿದ್ದು, ಸರ್ವತೋಮುಖ ಬೆಳವಣಿಗೆಗೆ ಸಾಕ್ಷಿಯಾಗುತ್ತದೆ. ಮುಂಬರುವ ದಿನಗಳಲ್ಲಿ ನೀವು ಈ ವಿವಿಯ ಹೆಮ್ಮೆಯ ರಾಯಭಾರಿಗಳಾಗಿ, ಸಮಾಜಕ್ಕೆ ಮಾದರಿಯಾಗುವತ್ತ ಪ್ರಯತ್ನಿಸಬೇಕು ಎಂದು ತಿಳಿಸಿದರು.

Advertisements

ಇದೇ ಕಾರ್ಯಕ್ರಮದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮದಲ್ಲಿ ವಿವಿಧ ಕೇಂದ್ರಗಳು ಮತ್ತು ನಿರ್ದೇಶನಾಲಯಗಳು ಹಾಗೂ ಗ್ರಂಥಾಲಯ ಸೌಲಭ್ಯಗಳ ಬಗೆಗೆ ಆಯಾ ಕೇಂದ್ರಗಳ ಮುಖ್ಯಸ್ತರು ಮಾಹಿತಿ ನೀಡಿದರು. ಪ್ರೊ ಬಿ ಜಿ ಮೂಲಿಮನಿ, ಅವರು ಕಡು ಬಡವ ವಿದ್ಯಾರ್ಥಿನಿಯರಿಗೆ ಶಿಷ್ಯವೇತನಕ್ಕಾಗಿ ದೇಣಿಗೆಯಾಗಿ 10 ಲಕ್ಷ ರೂಗಳ ಚೆಕ್ಕನ್ನು ಹಸ್ತಾಂತರಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಸೂಕ್ತ ಕ್ರಮಕ್ಕೆ ಶರಣು ಶಿಂಧೆ ಆಗ್ರಹ

ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವ ಪ್ರೊ ಎಚ್ ಎಂ ಚಂದ್ರಶೇಖರ್, ವಿವಿಯ ಸಿಂಡಿಕೇಟ್ ಸದಸ್ಯರು, ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು. ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X