ವಿಜಯಪುರ | ಕನ್ನಡ ನಮ್ಮೆಲ್ಲರ ಉಸಿರು: ಹಾಸಿಂ ಪೀರ್‌ ವಾಲಿಕಾರ

Date:

Advertisements

ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಹಸಿರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ ಎಂಬ ಜಯಘೋಷದೊಂದಿಗೆ ಸಂಭ್ರಮದಿಂದ ತಾಂಬಾ ಗ್ರಾಮಕ್ಕೆ ಸಾವಿರಾರು ವಿದ್ಯಾರ್ಥಿಗಳು ಮಕ್ಕಳು ಹಾಗೂ ಶಿಕ್ಷಕರು, ಗ್ರಾಮದ ಹಿರಿಯರು ಪಾಲ್ಗೊಂಡು ಕರ್ನಾಟಕ ಸುವರ್ಣ ಸಂಭ್ರಮ 50ರ ನಿಮಿತ್ಯ ಜನರಲ್ಲಿ ಕರ್ನಾಟಕದ ಅಭಿಮಾನ ಮೂಡಿಸುವ ಸಲುವಾಗಿ ಕರ್ನಾಟಕದ ಕನ್ನಡ ರಥವನ್ನು ವಿಜಯಪುರ ಜಿಲ್ಲೆ ತಾಂಬಾ ಗ್ರಾಮಕ್ಕೆ ಸ್ವಾಗತಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ್ ವಾಲಿಕಾರ ಮಾತನಾಡಿ‌, “ಕನ್ನಡ ನಮ್ಮೆಲ್ಲರ ಉಸಿರು, ಕನ್ನಡ ಸಾಹಿತ್ಯ ನಮ್ಮೆಲ್ಲರಿಗೂ ಅನ್ನ ನೀಡುವುದಾಗಿದೆ. ತಾಯಿ ಭಾಷೆ, ವ್ಯವಹಾರ ಭಾಷೆ, ಆಡಳಿತ ಭಾಷೆ, ಕನ್ನಡವಾಗಿರುವುದರಿಂದ ನಾವೆಲ್ಲರೂ ಕನ್ನಡವನ್ನು ಕಡ್ಡಾಯವಾಗಿ ಅರಿಯಬೇಕು. ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಸಾಲಿನಲ್ಲಿ ಕರ್ನಾಟಕ ಅಗ್ರಗಣ್ಯವಾಗಿದೆ. ನಾಡು, ನುಡಿ, ಸಾಹಿತ್ಯ, ಸಂಸ್ಕೃತಿ, ಪರಂಪರೆ ನಮ್ಮ ಸಂಪತ್ತಾಗಿವೆ. ಕನ್ನಡದ ಶಾಲೆಗಳು ಕನ್ನಡವನ್ನು ಉಳಿಸುವ ಮತ್ತು ಬೆಳೆಸುವ ಕಾರ್ಯವನ್ನು ಮಾಡುತ್ತಿರುವುದು ಶ್ಲಾಘನೀಯ. ಸರ್ಕಾರಿ ಶಾಲೆಗಳು ಅತ್ಯಂತ ಪ್ರತಿಭಾವಂತ ಶಿಕ್ಷಕರಿಂದ ಬೋಧನೆಯಾಗುತ್ತಿದೆ. ಅನೇಕ ಜನರು ಇಂಗ್ಲೀಷ್ ಶಾಲೆಗಳಿಗೆ ಕಳಿಸುವ ವ್ಯಾಮೋಹದಿಂದ ಹೊರಬರಬೇಕು” ಎಂದರು.‌

ಇಂಡಿ ತಾಲೂಕು ತಹಶೀಲ್ದಾರ್ ಬಿ‌ ಎಸ್ ಕಡಕಬಾವಿ ಅವರ ನೇತೃತ್ವದಲ್ಲಿ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಯೋಗದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ತಾಂಬಾ ಗ್ರಾಮದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಅನೇಕ ಜನರು ಭುವನೇಶ್ವರಿಗೆ ಪೂಜೆ ಹಾಗೂ ಆರತಿ ಮತ್ತು ನೂರಾರು ವಿದ್ಯಾರ್ಥಿನಿಯರು ಕುಂಭಮೇಳ ಮಾಡಿ ನಾಡದೇವತೆಗೆ ವಿಜ್ರಂಭಣೆಯಿಂದ ಗೌರವ ಸಲ್ಲಿಸಿದರು. ರೈತರು ಹಾಗೂ ಶಿಕ್ಷಕರು ಎತ್ತಿನ ಗಾಡಿಯ ಮೇಲೆ ಸಂಗೊಳ್ಳಿ ರಾಯಣ್ಣ, ಕಿತ್ತೂರ ಚನ್ನಮ್ಮ, ಒನಕೆ ಓಬವ್ವ, ಮಹಾತ್ಮಾ ಗಾಂಧೀಜಿ, ಡಾ ಅಂಬೇಡ್ಕರ್, ಸಿದ್ದೇಶ್ವರ ಶ್ರೀ, ವೇಷಭೂಷಣದಲ್ಲಿ ಮಕ್ಕಳು ಪಾಲ್ಗೊಂಡಿದ್ದು‌, ರೋಮಾಂಚನವಾಗಿತ್ತು. ನೂರಾರು ಶಿಕ್ಷಕರು ಭಾಗಿಯಾಗಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ಜಿಲ್ಲೆಗೆ 371ಜೆ ಸ್ಥಾನಮಾನ ನೀಡಬೇಕೆಂದು ಆಗ್ರಹ

ಇದೇ ಸಂದರ್ಭದಲ್ಲಿ ಇಂಡಿ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಬಾಬು ರಾಠೋಡ ಅಪ್ಪಣ್ಣ ಕಲ್ಲೂರ, ರಜಾಕ ಚಿಕ್ಕಅಗಸಿ, ರಾಚಪ್ಪ ಗಳೆದ, ಪ್ರಕಾಶ ಮುಂಜಿ, ವಾಸಿಮ ವಾಲಿಕಾರ, ರಾಜು ಗಂಗನಳ್ಳಿ, ಪರಶುರಾಮ ಬಿಸನಾಳ, ಎಂ. ಎ. ವಾಲಿಕಾರ, ಎಸ್ ಆರ್ ನಡಗಡ್ಡಿ, ಅಡಿವೆಪ್ಪ ಸರಸಂಬಿ, ಶ್ರೀಧರ ಉಕ್ಕಲಿ, ಬಸವರಾಜ ಅವಟಿ, ಅಹ್ಮದ ವಾಲಿಕಾರ, ಬೌರಮ್ಮ ಡೊಣ್ಣಿ, ಸಾತಿರವ್ವ ಸಕ್ರಿ, ಬೌರಮ್ಮ ಯಳಮೇಲಿ, ಕನ್ಯಾಕುಮಾರಿ ಜುಮನಾಳ, ಆನಂದ ಕಂಬಾರ, ಶಾಂತಾ ಬೆಳ್ಳುಂಡಿ, ಶಶಿಕಲಾ ಪ್ಯಾಟಿ, ಅಮೋಘಸಿದ್ದ ಮಾಶ್ಯಾಳ, ವಸರಾಯ ದೊಡ್ಡಮನಿ, ಬಸವರಾಜ ಗುಂಡಳ್ಳಿ, ಗೂಳಪ್ಪ ಗೊಬ್ಬೂರ ಸೇರಿದಂತೆ ಮುಂತಾದವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X