ವಿಜಯಪುರ | ಜಲಜೀವನ ಮಿಷನ್‌ ಅಕ್ರಮ ತಡೆಯುವಂತೆ ಆಗ್ರಹ

Date:

Advertisements

ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಅಕ್ರಮ ನಡೆಯದಂತೆ ತಡೆಯಿರಿ ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಮನವಿ ಸಲ್ಲಿಸಿದೆ.

ಮನವಿ ಪತ್ರದಲ್ಲಿ, 2022-23ನೇ ಸಾಲಿನ ಜಲಜೀವನ್ ಮಿಷನ್ ಯೋಜನೆಯ ಅಡಿಯಲ್ಲಿ ಸರ್ಕಾರ ಪ್ರತಿಮನೆಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸುವ ಉತ್ತಮ ಯೋಜನೆಯನ್ನು ಹಮ್ಮಿಕೊಂಡಿದೆ. ಆದರೆ, ಸರ್ಕಾರಿ ಅಧಿಕಾರಿಗಳ ಮತ್ತು ಶಾಸಕರ ದಿವ್ಯ ನಿರ್ಲಕ್ಷದಿಂದಾಗಿ ಈಗಾಗಲೇ ಕೆಲವೊಂದು ಹಳ್ಳಿಗಳಲ್ಲಿ ಕಾಮಗಾರಿ ಪ್ರಾರಂಭವಾಗಿದೆ ಇನ್ನು ಕೆಲವೊಂದು ಹಳ್ಳಿಗಳಲ್ಲಿ ಚಾಲನೆಗೊಳ್ಳುತ್ತಿದೆ.

ಈ ಯೋಜನೆ ಅತ್ಯಂತ ಕಳಪೆ ಮಟ್ಟದಲ್ಲಿ ನಿರ್ಮಾಣವಾಗುತ್ತಿದೆ ಎಂದು ಸಾರ್ವಜನಿಕ ವಲಯದಲ್ಲಿ ತೀವ್ರವಾದ ಚರ್ಚೆಗೆ ಗ್ರಾಸವಾಗುತ್ತಿದೆ ಚಿಂತಕರ ವಲಯದಲ್ಲಿ ಆತಂಕದ ಕೂಗು ಮೂಡಿ ಬರುತ್ತದೆ. ಆದ್ದರಿಂದಾಗಿ ಈ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತಂದು ದೇವರಹಿಪ್ಪರಗಿ ಮತಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಶುದ್ಧ ಕುಡಿಯುವ ನೀರನ್ನು ಒದಗಿಸುವುದರ ಮೂಲಕ ಬರಗಾಲದ ನಾಡಿಗೆ ಜೀವ ಜಲ ಒದಗಿಸಿದ ಪುಣ್ಯ ಸರ್ಕಾರಕ್ಕೆ ಮತ್ತು ಪ್ರಾಮಾಣಿಕ ಅಧಿಕಾರಿ ವರ್ಗಕ್ಕೆ ತಟ್ಟುತ್ತದೆ.

Advertisements

ಮತಕ್ಷೇತ್ರದಲ್ಲಿ ಕೈಗೊಳ್ಳಲಾದ ಬಹುತೇಕ ವಿವಿಧ ಕಾಮಗಾರಿಗಳು ಅತ್ಯಂತ ಕಳಪೆ ಮಟ್ಟದಲ್ಲಿ ನಿರ್ಮಾಣವಾಗಿರುವ ಉದಾರಣೆಗಳು ಇವೆ. ಜೀವ ಜಲದ ವಿಷಯದಲ್ಲಿ ಭ್ರಷ್ಟಾಚಾರದ ವಾಸನೆ ತಾಗದೆ ಪ್ರಾಮಾಣಿಕವಾದ ಕಾಯಕದಿಂದ ಈ ಯೋಜನೆ ಯಶಸ್ವಿಯಾಗಿ ಜನರ ಮನೆ ಮನಗಳಿಗೆ ಮುಟ್ಟುವಂತೆ ಮಾಡಬೇಕಾಗಿ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹ ಮಾಡಿದೆ.

ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಳ್ಳಿ, ರಾಕೇಶ್ ಇಂಗಳಗಿ, ಹಮೀದ್ ಇನಾಮ್ದಾರ್, ಪ್ರವೀಣ್ ಕಣಜ ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X