ವಿಜಯಪುರ | ಅನಧಿಕೃತ ಪಟಾಕಿ ಅಂಗಡಿ ತೆರವಿಗೆ ಕೆಆರ್‌ಎಸ್‌ ಆಗ್ರಹ

Date:

Advertisements

ಪಟಾಕಿಗಳ ಮಾರಾಟಕ್ಕೆ ಪರವಾನಗಿ ಪಡೆಯದೆ ಅನಧಿಕೃತವಾಗಿ ತೆರೆದಿರುವ ಪಟಾಕಿ ಅಂಗಡಿಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ಕಾರ್ಯಕರ್ತರು ವಿಜಯಪುರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

“ಪಟಾಕಿ ಮಳಿಗೆಗಳನ್ನು ತೆರೆಯಲು ಸರ್ಕಾರ ನಿರ್ದಿಷ್ಟವಾದ ಕಾನೂನುಗಳನ್ನು ಜಾರಿಗೆ ತಂದಿದೆ. ಆದರೆ ಜಿಲ್ಲಾದ್ಯಂತ ಯಾವುದೇ ರೀತಿಯ ಪರವಾನಗಿ ಪಡೆಯದೆ ಜನಸಂದಣಿ ಹೆಚ್ಚಾಗಿರುವ ಪ್ರದೇಶದಲ್ಲಿ ಅನಧಿಕೃತವಾಗಿ ವ್ಯಾಪಾರ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

“ಪಟಾಕಿ ಮಳಿಗೆ ತೆರೆಯಲು ಜಿಲ್ಲಾಧಿಕಾರಿಯಿಂದ ಸ್ಫೋಟಕ ಪರವಾನಗಿ, ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆಯಿಂದ ಅನುಮತಿ ಪತ್ರ, ಸ್ಥಳೀಯ ಸಂಸ್ಥೆಗಳ ಜನರಲ್ ಲೈಸೆನ್ಸ್‌ ಸೇರಿದಂತೆ  ಮುಂತಾದ ಅನುಮತಿ ಪತ್ರಗಳನ್ನು ಪಡೆದುಕೊಂಡು ಜನಸಂದಣಿ ಇಲ್ಲದ, ಅಗ್ನಿ ಅವಘಡಗಳು ಸಂಭವಿಸಿದಾಗ ಹೆಚ್ಚು ಹಾನಿಯಾಗದ ಪ್ರದೇಶಗಳಲ್ಲಿ ಸುರಕ್ಷತೆಯಿಂದ ಮಳಿಗೆಗಳನ್ನು ತೆಗೆಯಲು ಮತ್ತು ವ್ಯಾಪಾರ ವಹಿವಾಟುಗಳು ಮಾಡಲು ಅವಕಾಶವಿರುತ್ತದೆ” ಎಂದರು.

Advertisements

“ಕೆಲವು ಪಟಾಕಿ ಮಾರಾಟಗಾರರು ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಪೋಲಿಸ್ ಇಲಾಖೆ ಮತ್ತು ಅಗ್ನಿಶಾಮಕ ಅಧಿಕಾರಿಗಳಿಗೆ ತಿಂಗಳುವಾರು ಹಫ್ತಾ ನೀಡುವುದರ ಮೂಲಕ ಅನಧಿಕೃತ ಅಂಗಡಿಗಳ ಮಾಲೀಕರು ವರ್ಷಪೂರ್ತಿ ಅಂಗಡಿಯನ್ನು ತೆರೆದು ವ್ಯಾಪಾರ ಮಾಡುತ್ತಿದ್ದಾರೆ. ನಿಯಮದ ಪ್ರಕಾರ ಜಿಲ್ಲಾಧಿಕಾರಿಯವರು ಹಬ್ಬ, ನಾಡ ಉತ್ಸವಗಳಲ್ಲಿ ಎರಡು ದಿನಗಳು ಮಾತ್ರ ಮಳಿಗೆಗಳನ್ನು ತೆರೆಯಲು ಅವಕಾಶವನ್ನು ನೀಡುತ್ತಾರೆ. ಆದ್ದರಿಂದಾಗಿ ಈ ಕೂಡಲೇ ತಮ್ಮ ಇಲಾಖೆಯ ರಾಜಶ್ವ ನಿರೀಕ್ಷಕರ ನೇತೃತ್ವದಲ್ಲಿ ಒಂದು ಟಾಸ್ಕ್ ಫೋರ್ಸ್ ತಂಡವನ್ನು ರಚಿಸಿ ಅನಧಿಕೃತ ಅಂಗಡಿಗಳನ್ನು ಬಂದ್ ಮಾಡಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಸ್ಪೋಟಕ ಪರವಾನಗಿ ಇಲ್ಲದೆ ಅನಧಿಕೃತ ಮಳಿಗೆಗಳಲ್ಲಿ ವ್ಯವಹಾರ ನಡೆಸುತ್ತಿವೆ. ಇದನ್ನು ತಡೆಗಟ್ಟಬೇಕೆಂದು 2022ರಲ್ಲಿ ಮನವಿ ಸಲ್ಲಿಸಿದ್ದೆವು. ಆದರೆ ಅಧಿಕಾರಿಗಳು ತಮ್ಮ ಲಂಚಬಾಕ ಆಮಿಷಗಳಿಂದ ಅನಧಿಕೃತವಾಗಿ ಪಟಾಕಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ್ದರು. ಇದರಿಂದಾಗಿ ಕಳೆದ ಮೂರು ನಾಲ್ಕು ದಿನಗಳ ಹಿಂದೆ ಅತ್ತಿಬೆಲೆಯಲ್ಲಿ ಬೆಂಕಿ ಅವಘಡದಿಂದ ಪಟಾಕಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 13 ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಖಾಯಂ ಶಿಕ್ಷಕರ ನೇಮಕಕ್ಕೆ ಆಗ್ರಹ; ಸಿಎಂ ಭೇಟಿ ಮಾಡಿದ ಎಸ್ಎಫ್ಐ ನಿಯೋಗ

“ವಿಜಯಪುರ ಜಿಲ್ಲೆಯಲ್ಲಿ ಆ ರೀತಿಯ ಪ್ರಕರಣಗಳು ನಡೆಯಬಾರದೆಂಬ ಮುಂಜಾಗೃತೆ ವಹಿಸಬೇಕೆಂದು ತಮ್ಮ ಗಮನಕ್ಕೆ ತಂದಿದ್ದು, ತಾವು ಕ್ರಮ ಕೈಗೊಳ್ಳುತ್ತೀರೆಂದು ಭಾವಿಸಿದ್ದೇವೆ” ಎಂದು ಹೇಳಿದರು.

ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಕೇಶ ಇಂಗಳಗಿ, ಅಮೀದ ಇನಾಮ್ದಾರ್, ಪ್ರವೀಣ ಕನಸೆ, ವಿಕ್ರಮ ವಾಗ್ಮೊರೆ ಮತ್ತು ಶ್ರೀಶೈಲ ಮಠ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X