ವಿಜಯಪುರ | ಅತಿಥಿ ಶಿಕ್ಷಕರ ನೇಮಕಾತಿ ಪರೀಕ್ಷೆ ರದ್ದುಪಡಿಸುವಂತೆ ಮಾದಿಗ ಸಂಘ ಒತ್ತಾಯ

Date:

Advertisements

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ವಸತಿ ಶಾಲೆ ಹಾಗೂ ಕಾಲೇಜುಗಳಿಗೆ ಅತಿಥಿ ಶಿಕ್ಷಕರ ಹಾಗೂ ಉಪನ್ಯಾಸಕರ ನೇಮಕಾತಿಗೆ ಜಾರಿ ಮಾಡಿರುವ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಮಾದಿಗ ಸಂಘದ ನೇತೃತ್ವದಲ್ಲಿ ಉಪನ್ಯಾಸಕರು ಶಿಕ್ಷಕರು, ವಿಜಯಪುರ ಜಿಲ್ಲಾಧಿಕಾರಿ ಟಿ ಭೂಬಾಲನ್ ಮೂಲಕ ಸಿ ಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಶ್ರೀಶೈಲ ರತ್ನಾಕರ ಮಾತನಾಡಿ, ”ಅತಿಥಿ ಶಿಕ್ಷಕರ, ಉಪನ್ಯಾಸಕರ ನೇಮಕಾತಿಯಲ್ಲಿ ಪ್ರವೇಶ ಪರೀಕ್ಷೆ ನಿಯಮ ಸಂಪೂರ್ಣ ರದ್ದುಗೊಳಿಸಬೇಕು. ಈ ಹಿಂದೆ ಕಾರ್ಯನಿರ್ವಹಿಸಿದ ಅತಿಥಿ ಶಿಕ್ಷಕರ, ಉಪನ್ಯಾಸಕರ ಶ್ರಮಕ್ಕೆ ಬೆಲೆ ಕೊಟ್ಟು, ಈ ವರ್ಷವೂ ಅವರನ್ನೇ ಮುಂದುವರಿಸ ಬೇಕು. ಸರಕಾರದ ನೇಮಕಾತಿಯಲ್ಲಿ ಶೇ.25ರಷ್ಟು ಕೃಪಾಂಕ ನೀಡಬೇಕು. ಸೇವಾ ಭದ್ರತೆ ಒದಗಿಸಿ ಮಾಸಿಕ ಕನಿಷ್ಠ 35,000 ರೂ. ಗೌರವ ಧನ ನೀಡಬೇಕು,” ಎಂದು ಆಗ್ರಹಿಸಿದರು.

ಶಾಂತಕುಮಾರ ಭಾವಿಕಟ್ಟಿ ಮಾತನಾಡಿ, “ಮಹಿಳಾ ಶಿಕ್ಷಕರಿಗೆ ಪ್ರಸೂತಿ ರಜೆ ಜತೆಗೆ ವೇತನ ಒದಗಿಸಬೇಕು. ವರ್ಷದ 12 ತಿಂಗಳು ವೇತನ ಪಾವತಿಸಬೇಕು. ಜೀವ ವಿಮಾ ಸೌಲಭ್ಯ ಕಲ್ಪಿಸಬೇಕು. ಹಿಂದಿ ಭಾಷಾ ವಿಷಯವನ್ನು ಐಚ್ಛಿಕವಾಗಿಡದೆ ಕಡ್ಡಾಯ ಮೂಲ ಪರಿಗಣಿಸಬೇಕು. ಈಗಿರುವ ಅತಿಥಿ ಶಿಕ್ಷಕರನ್ನೇ ಮುಂದುವರಿಸದೆ ಪರೀಕ್ಷಾ ಕ್ರಮ ಮಾಡಿದರೆ ಕುಟುಂಬ ಸಮೇತ ಇಲಾಖೆ ಮುಂದೆ ನಿರಂತರ ಉಪವಾಸ ಸತ್ಯಾಗ್ರಹ ನಡೆಸಲಾಗುವುದು” ಎಂದು ಎಚ್ಚರಿಸಿದರು.

Advertisements

ಇದನ್ನೂ ಓದಿ: ವಿಜಯಪುರ | ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಘೋಷಣೆಗೆ ದವಿಪ ಮನವಿ

ಈ ವೇಳೆ ಛತ್ರಪ್ಪ ಭಜಂತ್ರಿ, ವಿಕ್ರಮ ಮುದ್ದೇಬಿಹಾಳ, ಸಾಬಣ್ಣ ಬಸರಕೋಡ, ಶಿವರಾಜ ಮಾಲಗತ್ತಿ, ಬಾನು ಹೆಬ್ಬಾಳ, ಅಸ್ಮಾ ಬಾಗವಾನ, ಸಿ.ಮಹಾಂತೇಶ, ಸಿದ್ದಾರ್ಥ ಲಚ್ಯಾಣ, ಸುರೇಶ ವಾಲಿಕಾರ, ಮಹಾಂತೇಶ ಸಲಬಣ್ಣವರ, ಜಿ ಡಿ ಬೀಳಗಿ, ವಿ ಬಿ ನಾಯಕ, ಸಂಜು ಬನಸೋಡೆ, ಬಸವರಾಜ ಜಂಬಗಿ, ಜಬ್ಬಾರ ಕವಠ, ಭೀಮಾಶಂಕರ ಸಾರವಾಡ ಸೇರಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X