ವಿಜಯಪುರ | ದಲಿತರು, ಅಲ್ಪಸಂಖ್ಯಾತರ ಮೇಲಿನ ನಿರಂತರ ದೌರ್ಜನ್ಯಕ್ಕೆ ಹಲವು ಸಂಘಟನೆಗಳ ಖಂಡನೆ

Date:

Advertisements

ಅಲ್ಪಸಂಖ್ಯಾತರು ಮತ್ತು ದಲಿತರ ಮೇಲೆ ನಿರಂತರವಾಗಿ ಆಗುತ್ತಿರುವ ದೌರ್ಜನ್ಯಗಳು ಹಾಗೂ ಅವರ ಮೇಲಿನ ಸುಳ್ಳು ಆರೋಪಗಳನ್ನು ಖಂಡಿಸಿ ವಿಜಯಪುರ ನಗರದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ವಿಜಯಪುರ ಜನರ ವೇದಿಕೆ, ಬಿಜಾಪುರ ನಗರ ಸ್ಲಂ ಅಭಿವೃದ್ಧಿ ಸಮಿತಿ ಒಕ್ಕೂಟ, ಬಿಜಾಪುರ ನಗರ ಸ್ಲಂ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ, ವಿಜಯಪುರ ನಗರ ಗೃಹ ಕಾರ್ಮಿಕರ ಯೂನಿಯನ್ ಹಾಗೂ ಸಹ ಸಂಘಟನೆಗಳ ಕಾರ್ಯಕರ್ತರು ಡಾ.ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದರು.

“ಛತ್ತೀಸ್‌ಗಢದಲ್ಲಿ ಕಳೆದ ತಿಂಗಳು ರೈಲಿನಲ್ಲಿ ಪ್ರಯಾಣಿಸಿದ್ದ ಕ್ರೈಸ್ತ ಸಮುದಾಯದ ಇಬ್ಬರು ಸಿಸ್ಟರ್‌ಗಳನ್ನು ಮತಾಂತರಕ್ಕೆ ಯತ್ನ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಎರಡ್ಮೂರು ದಿನ ಜೈಲಿನಲ್ಲಿಟ್ಟು ಅವರಿಗೆ ಕಿರುಕುಳ ನೀಡಲಾಗಿತ್ತು. ಆದರೆ, ಯಾವುದೇ ಪುರಾವೆಗಳು ಇಲ್ಲ ಮತ್ತು ಸುಳ್ಳು ದೂರಿನಡಿ ಬಂಧಿಸಿ ನಂತರ ಬಿಡುಗಡೆ ಮಾಡಿದ್ದಾರೆ. ಹೀಗಾಗಿ ಬಂಧನಕ್ಕೆ ಕುಮ್ಮಕ್ಕು ನೀಡಿದ ಹಾಗೂ ಸುಳ್ಳು ದೂರ ನೀಡಿದ ದುಷ್ಟಶಕ್ತಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಬೇಕು” ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅರೇಬಿಕ್ ಮದ್ರಸಾಗಳ ಶಿಕ್ಷಕರಿಗೆ ಕನ್ನಡ ಬೋಧನೆ: ಅಭಿಯಾನಕ್ಕೆ ಚಾಲನೆ

“ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರು, ದಲಿತ, ಹಿಂದುಳಿದ ವರ್ಗದವರ ಮೇಲೆ ದೌರ್ಜನ್ಯ ಹಾಗೂ ಪದೇ ಪದೆ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಇವುಗಳನ್ನು ಸಹಿಸಲಾಗುವುದಿಲ್ಲ. ಮುಂದಿನ ದಿನದಲ್ಲಿ ತೀವ್ರ ಹೋರಾಟ ಮಾಡಬೇಕಾಗುತ್ತದೆ” ಎಂದು ಪ್ರತಿಭಟನಾನಿರತರು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸುನೀಲ ಫರ್ನಾಂಡಿಸ್, ಕೇವಿನ್ ಸಿಕ್ವೆರಾ, ನಿರ್ಮಲಾ ಹೊಸಮನಿ, ಅಕ್ರಂ ಮಾಶ್ಯಾಳಕರ, ಸುನೀಲ ಅಂದ್ರಾದೆ, ಪೀಠರ್ ಅಲೆಕ್ಸಾಂಡರ್, ಫರ್ಜಾನಾ ಜಮಾದಾರ, ರಾಜೇಶ್ವರಿ ಮಠಪತಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ಯಾದಗಿರಿ | ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ನೀಡುವಂತೆ ಒತ್ತಾಯ

ಕಾರ್ಮಿಕರ ಮಕ್ಕಳಿಗೆ ಸಹಾಯ ಧನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಕಲ್ಯಾಣ...

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X