ವಿಜಯಪುರ | ಭಾರತೀಯ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಮೌಲಾನಾ ಅಬುಲ್ ಕಲಾಂ ಆಜ಼ಾದ್ ಪಾತ್ರರಾಗಿದ್ದರು: ಮುಖ್ಯಶಿಕ್ಷಕ ಖಾಜಿ

Date:

Advertisements

ಮೌಲಾನಾ ಅಬುಲ್ ಕಲಾಂ ಆಜ಼ಾದ್ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಮತ್ತು ಮರುರೂಪಿಸಲು ಕಂಕಣ ಬದ್ಧರಾಗಿದ್ದರು. ಭಾರತೀಯ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರಲ್ಲದೆ, ಮಹಿಳಾ ಶಿಕ್ಷಣಕ್ಕೆ ಒತ್ತು ನೀಡಿದ್ದರು ಎಂದು ನಾಲತವಾಡ ಉರ್ದು ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎ ಎಚ್ ಖಾಜಿ ಹೇಳಿದರು.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಉರ್ದು ಶಾಲೆಯಲ್ಲಿ ಜರಗಿದ ಮೌಲಾನಾ ಅಬುಲ್ ಕಲಾಂ ಆಜ಼ಾದ್ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

“ಆಧುನಿಕ ಶಿಕ್ಷಣ ಪದ್ಧತಿಯನ್ನು ಜಾರಿಗೆ ತಂದ ಶ್ರೇಯಸ್ಸು ಮೌಲಾನಾ ಅಬುಲ್ ಕಲಾಂ ಆಜ಼ಾದ್ ಅವರಿಗೆ ಸಲ್ಲುತ್ತದೆ” ಎಂದು ತಿಳಿಸಿದರು.

Advertisements

ಶಿಕ್ಷಕಿ ಜುಲೇಖಾಬೇಗಂ ಮುಲ್ಲಾ ಮಾತನಾಡಿ, “ಹೆಣ್ಣುಮಕ್ಕಳ ಶಿಕ್ಷಣ ಮತ್ತು 14 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯ ಶಿಕ್ಷಣಕ್ಕೆ ಒತ್ತು ನೀಡಿದ ಆಜ಼ಾದ್ ಅವರು ತಮ್ಮ ನೇತೃತ್ವದಲ್ಲಿ ಶಿಕ್ಷಣ ಸಚಿವಾಲಯುವು ದೇಶದ ಮೊದಲ ಐಐಟಿಯನ್ನು 1951ರಲ್ಲಿ ಸ್ಥಾಪಿಸಿತ್ತು. ನಂತರ 1953 ರಲ್ಲಿ ವಿಶ್ವವಿದ್ಯಾನಿಲಯ ಅನುದಾನ ಆಯೋಗವನ್ನು (ಯುಜಿಸಿ) ರಚಿಸಿದರು” ಎಂದು ತಿಳಿಸಿದರು.

“ಜಾಮಿಯಾ ಮಿಲಿಯಾ ಇಸ್ಲಾಮಿಯಾ ಮತ್ತು ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್ (ಎಐಸಿಟಿಇ) ಸ್ಥಾಪಿಸುವ ಮೂಲಕ ಶಿಕ್ಷಣ ವ್ಯವಸ್ಥೆಗೆ ಮಹತ್ವದ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಇಂಡಿಯನ್ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ( ಐಸಿಸಿಆರ್), ಸಾಹಿತ್ಯ ಅಕಾಡೆಮಿ, ಲಲಿತ ಕಲಾ ಅಕಾಡೆಮಿ, ಸಂಗೀತ ನಾಟಕ ಅಕಾಡೆಮಿ, ಮತ್ತು ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರೀಸರ್ಚ್‌ನಂತಹ ಭಾರತದ ಸಾಂಸ್ಕೃತಿಕ ಸಂಸ್ಥೆಗಳಿಗೆ ಅವರು ಕೊಡುಗೆ ನೀಡಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ರಾಜ್ಯದ ಜನತೆ ಟಿಪ್ಪು ಸುಲ್ತಾನ್ ಜಯಂತಿ ಹಬ್ಬದಂತೆ ಆಚರಿಸಬೇಕು : ಮಲ್ಲಿಕಾರ್ಜುನ ನೆಲೋಗಿ

ಶಮಶಾದಬೇಗಂ ಸಿಕ್ಕಲಗಾರ ಓಬವ್ವನ ಜೀವನ ಸಾಧನೆಯ ಬಗ್ಗೆ ಮಾತನಾಡಿದರು. ಮಕ್ಕಳು ಓಬವ್ವ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ವೇಷದಲ್ಲಿ ಎಲ್ಲರ ಗಮನ ಸೆಳೆದರು.

ಈ ವೇಳೆ ಶಿಕ್ಷಕರುಗಳಾದ ಎಂ ಎಂ ಇಸ್ಲಾಂಪೂರ, ಜೆ ಎಂ ಮುಲ್ಲಾ, ಹಾಶಿಂಬಿ ನದಾಫ, ಎ ಎ ಮುಲ್ಲಾ, ಜೆ ಎಂ ಮೂಲಿಮನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X