ವಿಜಯಪುರ | ಮೇ 27ರಿಂದ ‘ಮೇ ಸಾಹಿತ್ಯ ಮೇಳ’: ಹರ್ಷ ಮಂದರ್, ತೀಸ್ತಾ, ಪ್ರಕಾಶ್ ಅಂಬೇಡ್ಕರ್ ಭಾಗಿ

Date:

Advertisements
  • ‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆ
  • ಎರಡು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಮೇಳದಲ್ಲಿ ಆರು ಗೋಷ್ಠಿ

    ಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಭತ್ತು ವರ್ಷಗಳಿಂದ ನಿರಂತರವಾಗಿ ನಡೆದು ಬರುತ್ತಿರುವ ‘ಮೇ ಸಾಹಿತ್ಯ ಮೇಳ’ವು ಈ ವರ್ಷ ಮೇ 27, 28ರಂದು ವಿಜಯಪುರದ ಕಂದಗಲ ಹನಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ.

ಈ ಮೇಳದಲ್ಲಿ ‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆಗಳು ನಡೆಯಲಿವೆ.

ಡಾ. ಬಿ. ಆರ್ ಅಂಬೇಡ್ಕರ್ ಅವರ ಮೊಮ್ಮಗ ಪ್ರಕಾಶ್ ಅಂಬೇಡ್ಕರ್, ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಹರ್ಷ ಮಂದರ್, ಮುಝಫ್ಫರ್ ಅಸ್ಸಾದಿ, ಹೋರಾಟಗಾರ ಪ್ರಕಾಶ ಹಿಟ್ನಳ್ಳಿ, ನಜ್ಮಾ ಬಾಂಗಿ, ಭೀಮಶಿ ಕಲಾದಗಿ, ಉಮಾ ಕಲಬುರ್ಗಿ, ತುಕಾರಾಂ ಚಂಚಲಕರ, ವಿಹಾನ್ ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರಾದ ಬಸವರಾಜ ಸೂಳಿಭಾವಿ ಮಾಹಿತಿ ನೀಡಿದ್ದಾರೆ

“ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅಪಮೌಲ್ಯಗೊಳಿಸುವ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ವ್ಯವಸ್ಥಿತ ಸಂಚುಗಳ ವಿರುದ್ಧ ಚಿಂತನೆ ಮಾಡಬೇಕಿದೆ. ಆ ಉದ್ದೇಶದಿಂದ ಈ ಸಾಹಿತ್ಯ ಮೇಳ ಆಯೋಜನೆ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

Advertisements

ಸ್ಥಳೀಯ ಚಿಂತಕರ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಚಿಂತಕರು ಈ ಮೇಳದಲ್ಲಿ ಭಾಗಿಯಾಗುತ್ತಿದ್ದು, ಎರಡು ದಿನಗಳ ಮೇಳದಲ್ಲಿ ಒಟ್ಟು ಆರು ಗೋಷ್ಠಿಗಳನ್ನು ಸಂಘಟಿಸಲಾಗುತ್ತಿದೆ.

ಗೋಷ್ಠಿ ಮೂಲಕ ಉದ್ಘಾಟನೆ

ಮೇ 27ರಂದು ಬೆಳಗ್ಗೆ 10ಕ್ಕೆ ಹೋರಾಟದ ಹಾಡುಗಳ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಪ್ರೊ. ರಾಜೇಂದ್ರ ಚೆನ್ನಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

ಮಧ್ಯಾಹ್ನ 1.30ಕ್ಕೆ ‘ಭಾರತೀಯ ಪ್ರಜಾತಂತ್ರ-ಚಾರಿತ್ರಿಕ ನೋಟ’ ವಿಷಯದ ಕುರಿತು ಗೋಷ್ಠಿ ನಡೆಯಲಿದ್ದು, ಹಿರಿಯ ಸಾಹಿತಿ ಪುರಷೋತ್ತಮ ಬಿಳಿಮಲೆ ಆಶಯ ನುಡಿಗಳನ್ನಾಡಲಿದ್ದಾರೆ. ಎಚ್.ಜಿ. ಜಯಲಕ್ಷ್ಮಿ, ಎ. ನಾರಾಯಣ ವಿಚಾರ ಮಂಡಿಸಲಿದ್ದಾರೆ.

ಅದೇ ದಿನ ಮಧ್ಯಾಹ್ನ 3.30 ಕ್ಕೆ ‘ಪ್ರಜಾತಂತ್ರ ಸಾಗಿದ ದಾರಿ-ಅಸ್ಮಿತೆ ರಾಜಕಾರಣ’ ವಿಷಯವಾಗಿ ಗೋಷ್ಠಿ ನಡೆಯಲಿದ್ದು, ಬಾಲ ಗುರುಮೂರ್ತಿ, ಕೃಷ್ಣಮೂರ್ತಿ ಚಮರಂ, ರಂಗನಾಥ ಕಂಟನಕುಂಟೆ, ಬಿ.ಎಂ. ಹನೀಫ್, ಶೈಲಜಾ ಹಿರೇಮಠ ವಿಚಾರ ವ್ಯಕ್ತಪಡಿಸಲಿದ್ದಾರೆ.

ಸಂಜೆ 6ಕ್ಕೆ ‘ಬೌದ್ಧ, ಸೂಫಿ, ಶರಣ ಪರಂಪರೆಯಲ್ಲಿ ಪ್ರಜಾತಂತ್ರದ ಆಶಯಗಳು’ ಕುರಿತಾದ ಗೋಷ್ಠಿ ನಡೆಯಲಿದೆ. ಮೂಡ್ನಾಕೂಡು ಚಿನ್ನಸ್ವಾಮಿ, ನಟರಾಜ ಬೂದಾಳು ವಿಚಾರ ಮಂಡಿಸಲಿದ್ದಾರೆ.

ಮೇ 28 ರಂದು ‘ಪ್ರಜಾಪ್ರಭುತ್ವ-ಯುವಸ್ಪಂದನ’ ಗೋಷ್ಠಿ ನಡೆಯಲಿದ್ದು, ಯುವ ಚಿಂತಕರಾದ ಸುಭಾಷ ರಾಜಮಾನೆ, ನಿಕೇತ್ ರಾಜ್ ಮೌರ್ಯ, ಕಲ್ಯಾಣಿ ಎಂ. ಎಸ್, ನದೀಂ ಸನದಿ, ಶಿವು ನಾಗರಹೊಳೆ, ಟಿ. ಎಸ್. ಗೊರವರ ಭಾಗಿಯಾಗಲಿದ್ದಾರೆ.

ಕವಿಗೋಷ್ಠಿಯಲ್ಲಿ ತಮಿಳುನಾಡಿನ ಕವಯಿತ್ರಿ ಸುಕೀರ್ತರಾಣಿ ಆಶಯ ಭಾಷಣ ಮಾಡಲಿದ್ದಾರೆ. ಸಬಿತಾ ಬನ್ನಾಡಿ ಅಧ್ಯಕ್ಷತೆ ವಹಿಸಲಿರುವ ಕವಿಗೋಷ್ಠಿಯಲ್ಲಿ 18 ಕವಿಗಳು ಕವನ ವಾಚನ ಮಾಡಲಿದ್ದಾರೆ.

“ಪ್ರಜಾಪ್ರಭುತ್ವದ ಬಿಕ್ಕಟ್ಟುಗಳು-ಎದುರಿಸುವ ಬಗೆ” ಎಂಬ ಗೋಷ್ಠಿಯಲ್ಲಿ ಮಾವಳ್ಳಿ ಶಂಕರ್‌, ಸಿದ್ಧನಗೌಡ ಪಾಟೀಲ, ನೂರ್ ಶ್ರೀಧರ್, ಕೆ. ನೀಲಾ, ಬಡಗಲಪುರ ನಾಗೇಂದ್ರ, ಸಸಿಕಾಂತ್ ಸೆಂಥಿಲ್, ನಂದಕುಮಾರ ಅವರು ಮಾತನಾಡಲಿದ್ದಾರೆ.

ಪ್ರಶಸ್ತಿ ಪ್ರದಾನ

ಸಮಾರೋಪ ಸಮಾರಂಭದಲ್ಲಿ ಭಾಗ್ಯಜ್ಯೋತಿ ಹಿರೇಮಠ ಅವರಿಗೆ `ವಿಭಾ ಸಾಹಿತ್ಯ’ ಪ್ರಶಸ್ತಿ, ಎನ್ ವೆಂಕಟೇಶ ಅವರಿಗೆ ‘ಬಂಡ್ರಿ ನರಸಪ್ಪ ಸಮಾಜವಾದಿ ಶ್ರಮಜೀವಿ’ ಪ್ರಶಸ್ತಿ, ಮಾಲತಿ ಪಟ್ಟಣಶೆಟ್ಟಿ ಅವರಿಗೆ ‘ನವಲಕಲ್ ಶಾಂತವೀರಮ್ಮ ಮಹಾತಾಯಿ’ ಪ್ರಶಸ್ತಿ, ಜೆ. ಎಂ. ವೀರಸಂಗಯ್ಯ ಅವರಿಗೆ ‘ಸಂಶಿ ನಿಂಗಪ್ಪ ರೈತ ಚೇತನ’ ಪ್ರಶಸ್ತಿ, ಸಿ. ಬಸಲಿಂಗಯ್ಯ ಅವರಿಗೆ ‘ಪಂಚಪ್ಪ ಸಮುದಾಯ ಮಾರ್ಗಿ’ ಪ್ರಶಸ್ತಿಯನ್ನು ಪ್ರದಾನ ನಡೆಯಲಿದೆ.

ಸಮಾರೋಪ ಭಾಷಣವನ್ನು ಪುಣೆಯ ನೀರಜ್ ಜೈನ್ ಮಾಡಲಿದ್ದಾರೆ. ಅಧ್ಯಕ್ಷತೆ ಕಾಳೇಗೌಡ ನಾಗವಾರ ವಹಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X