ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಪ್ರಯೋಜನಕಾರಿಯಾಗುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆಯಿಂದ ಲಾಚ್ಯಾಣ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆ ನೀಡಿದರು.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಾಚ್ಯಾಣ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಲಾಚಾಣೆ ಮತ್ತು ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆ ಶಾಖೆಯಾಗದಲ್ಲಿ ಶುದ್ಧ ನೀರಿನ ಘಟಕ ಉದ್ವಾಟಿಸಿ ಮಾತನಾಡಿದ ಪಾಟೀಲರು, ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆಯ ಅನುಕೂಲವನ್ನು ತಾಲೂಕಿನಲ್ಲಿ ಜನ ಉಪಯೋಗಿಕೊಂಡಿರುವುದು ಶ್ಲಾಘನೀಯ. ಶುದ್ಧ ನೀರಿನ ಘಟಕದ ಮೂಲಕ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ” ಎಂದರು.
“ಗ್ರಾಮಸ್ಥರಿಗೆ ಅಗತ್ಯ ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ಧರ್ಮಸ್ಥಳ ಸಂಸ್ಥೆ ತನ್ನ ಕಾರ್ಯ ಯೋಜನೆಯನ್ನು ಮತ್ತಷ್ಟು ಅರ್ಥಪೂರ್ಣವಾಗಿಸಿಕೊಂಡಿದೆ” ಎಂದರು.
ತಾಲೂಕಿನ ಯೋಜನೆ ಅಧಿಕಾರಿ ನಟರಾಜ ಎಲ್ ಎಂ ಮಾತನಾಡಿ, “ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆಯಿಂದ ತಾಲೂಕಿನ ಅತ್ಯಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲೂ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತದೆ” ಎಂದರು.
ಈ ಸುದ್ದಿ ಓದಿದ್ದೀರಾ? ಕಲಬುರಗಿ | ಬೇಸಿಗೆ ಬಿಸಿ : ಏಪ್ರಿಲ್, ಮೇ ತಿಂಗಳಲ್ಲಿ ಕಚೇರಿ ಸಮಯ ಬದಲಾವಣೆಗೆ ಆಗ್ರಹ
ವಿಜಯಪುರ ಜ್ಞಾನ ಯೋಗಾಶ್ರಮದ ಶಂಕರಾನಂದ ಶ್ರೀಗಳು, ಧರ್ಮರಾಜ ಮುಜಗೊಂಡ ಮಾತನಾಡಿದರು.
ಗ್ರಾ ಪಂ ಉಪಾಧ್ಯಕ್ಷ ಕಾಶೀನಾಥ ಅವಾಜಿ, ಸದಸ್ಯ ರಾಜು ನದಾಫ್, ದೇವಸ್ಥಾನ ಸಮಿತಿ ಅಧ್ಯಕ್ಷ ಮಲ್ಕಣ್ಣ ಬಿರಾದಾರ, ಯಶವಂತ ಬಿರಾದಾರ, ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆಯ ಹುಸೇನ ಸಾಬ, ಸಂಗೀತ ಪ್ರಭಾವತಿ, ಮೇಲ್ವಿಚಾರಕ ಬಸವರಾಜ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜಯಶ್ರೀ ಸೇರಿದಂತೆ ಇತರರು ಇದ್ದರು.