ವಿಜಯಪುರ | ಸಮೀಕ್ಷೆಗೆ ನೆಟ್‌ವರ್ಕ್‌ ಸಮಸ್ಯೆ; ಚಾವಣಿಯಲ್ಲಿ ಕುಳಿತು ಕೆಲಸ ನಿರ್ವಹಿಸುತ್ತಿರುವ ಗಣತಿದಾರರು

Date:

Advertisements

ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಗ್ರಾಮದಲ್ಲಿ ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ಸಮೀಕ್ಷರು ಮನೆಯ ಚಾವಣಿ ಮೇಲೆ ಕುಳಿತು, ಕುಟುಂಬ ಸದಸ್ಯರಿಂದ ಮಾಹಿತಿ ಪಡೆದು ಗಣತಿ ಕಾರ್ಯ ನಡೆಸುತ್ತಿದ್ದಾರೆ.

ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರ ಗೋಳು ಕೇಳುವವರೇ ಇಲ್ಲ. ಸಮೀಕ್ಷೆದಾರರು, ಮೇಲ್ವಿಚಾರಕರು, ಟೆಕ್ನಿಷಿಯನ್‌ಗಳ ಸಮಸ್ಯೆಗೆ ಹಿರಿಯ ಅಧಿಕಾರಿಗಳು, ಪರಿಹಾರವೆ ಸೂಚಿಸುತ್ತಿಲ್ಲ. ಗ್ರೂಪ್‌ಗಳಲ್ಲಿ ಸಮೀಕ್ಷೆ ಮಾಡುವ ಶಿಕ್ಷಕರು ಆಕ್ರೋಶ ಹೊರಹಾಕಿದರೂ ಬಾರದ ಉತ್ತರಕ್ಕೆ ಬೇಸತ್ತು ಬೆರಳೆಣಿಕೆಯಷ್ಟು ಸಮೀಕ್ಷೆ ನಡೆಸಿ ಮನೆಗೆ ನಡೆಯುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರು ತಿಳಿಸಿದರು.

ಇದನ್ನೂ ಓದಿ: ವಿಜಯಪುರ | ಅಬಕಾರಿ ಬಾಕಿ ಪಾವತಿಸದ ರೈತನ ಜಮೀನು ಹರಾಜು ಕ್ರಮಕ್ಕೆ ಗ್ರಾಮಸ್ಥರ ವಿರೋಧ

ಸಮೀಕ್ಷಕರ ಮೊಬೈಲ್‌ಗಳಲ್ಲಿ ಆ್ಯಪ್ ಇನ್‌ಸ್ಟಾಲ್ ಆಗುತ್ತಿಲ್ಲ, ಮೊಬೈಲ್‌ಗಳಿಗೆ ಒಟಿಪಿ ತಕ್ಷಣ ಬರುತ್ತಿಲ್ಲ, ಎಲ್ಲ ಮಾಹಿತಿ ತುಂಬಿದರೂ ಸಬ್‌ಮಿಟ್ ಆಗುತಿಲ್ಲ. ಒಂದು ಮನೆ ಸಮೀಕ್ಷೆ 2-3 ಗಂಟೆ ಆಗುತ್ತಿದ್ದು, ದಿನಕ್ಕೆ ಮೂರ್ನಾಲ್ಕು ಸಮೀಕ್ಷೆ ಮಾತ್ರ ಆಗುತ್ತಿದೆ ಎಂದು ಸಮೀಕ್ಷಕರು ದೂರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X