ವಿಜಯಪುರ | ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ʼನಿಮ್ಮೊಂದಿಗೆ ನಾವುʼ ಕಾರ್ಯಕ್ರಮ

Date:

Advertisements

ಕರ್ನಾಟಕ ಲಲಿತಕಲಾ ಅಕಾಡೆಮಿಯಿಂದ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪ್ರೌಢಶಾಲಾ ವಿಭಾಗದ ಮಕ್ಕಳಿಗಾಗಿ ಫೆಬ್ರವರಿ 10ರ ಸೋಮವಾರ ಬೆಳಿಗ್ಗೆ 11ರಿಂದ ಸಂಜೆ 5ರವರೆಗೆ “ನಿಮ್ಮೊಂದಿಗೆ ನಾವು” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, 2024/25ನೇ ಸಾಲಿನಲ್ಲಿ ಇದೇ ಪ್ರಥಮ ಬಾರಿಗೆ ಮಕ್ಕಳಿಗಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮವಾಗಿದೆ.

ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯೆ ರಾಜೇಶ್ವರಿ ಮೋಪಗಾರ ಅವರು ಈ ಕುರಿತು ಪತ್ರಿಕೆ ಪ್ರಕಟಣೆ ತಿಳಿಸಿದ್ದು, ಕಲೆಯನ್ನು ಜನಪರವಾಗಿಸಬೇಕು. ಜನರಲ್ಲಿ ಕಲೆಯ ಬಗ್ಗೆ ತಿಳುವಳಿಕೆ ಮೂಡಿಸಬೇಕು. ಕಲಾಭಿಮಾನಿಗಳ ದೊಡ್ಡ ಸಮೂಹ ಸೃಷ್ಟಿಯಾಗಬೇಕೆನ್ನುವುದೇ ನಮ್ಮ ಆಶಯ. ಕಲಾವಿದರ ಚಿತ್ರ ಪ್ರದರ್ಶನವೂ ಇರುತ್ತದೆ. ಕಲಾವಿದರು ರಚಿಸಿದ ಕಲಾಕೃತಿಗಳನ್ನು ನೋಡಿದ ಮಕ್ಕಳ ಮನಸ್ಸಿನ ಆಲೋಚನಾ ಲಹರಿ ವಿಸ್ತಾರವಾಗುವುದಂತೂ ಖಂಡಿತ ಎಂದು ಹೇಳಿದ್ದಾರೆ.

“ಈ ಕಾರ್ಯಕ್ರಮದಲ್ಲಿ ಮತ್ತೊಂದು ವಿಶೇಷವೆಂದರೆ ʼಪ್ರಾತ್ಯಕ್ಷಿಕೆʼ ಮತ್ತು ʼಉಪನ್ಯಾಸʼ ನೀಡಲು ನಮ್ಮ ಕಲಾವಿದರು ಜೊತೆಗಿರುತ್ತಾರೆ. ಚಿತ್ರರಚನೆಯ ಕ್ರಮವನ್ನು ಬಣ್ಣ ಬಳಸುವ ವಿಧಾನವನ್ನು ಮಕ್ಕಳಿಗೆ ತಿಳಿಸಿ ಕೊಡುತ್ತಾರೆ. ಮಕ್ಕಳು ಅವರೊಂದಿಗೆ ಮುಕ್ತವಾಗಿ ಚರ್ಚಿಸಬಹುದು. ʼನಿಮ್ಮೊಂದಿಗೆ ನಾವುʼ ಒಂದು ವಿಶಿಷ್ಟ ಪ್ರಯೋಗವೆಂದರೆ, ಈ ಕಾರ್ಯಕ್ರಮದಲ್ಲಿ, ಕಲಾವಿದರು, ಕಲಾಭಿಮಾನಿಗಳು, ಕಲಾ ವಿದ್ಯಾರ್ಥಿಗಳು, ಕಲಾಪೋಷಕರು ಮಕ್ಕಳನೆಲ್ಲ ಒಟ್ಟಾಗಿ ಸೇರಿಸಿ ʼಕಲಾ ಸಂಭ್ರʼ ವನ್ನು ಆಚರಿಸಬೇಕೆನ್ನುವುದೇ ನಮ್ಮ ಆಸೆ. ಚಿತ್ರಕಲೆಯಲ್ಲಿ ಆಸಕ್ತಿಯುಳ್ಳ ಪ್ರತಿ ಶಾಲೆಗೆ ಐದು ಮಕ್ಕಳಂತೆ ಒಟ್ಟು 50 ಮಂದಿ ಮಕ್ಕಳಿಗಾಗಿ ಶಿಬಿರವನ್ನು ಆಯೋಜಿಸಿದ್ದೇವೆ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಜಮೀನು ಹೆದ್ದಾರಿ ಪಾಲು; ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ

ವಿಜಯಪುರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಬಿ ಕೆ ಶ್ರೀದೇವಿಯವರಿಂದ ಕಾರ್ಯಕ್ರಮದ ಉದ್ಘಾಟನೆ ನೆರವೇರಲಿದೆ. ಬೆಂಗಳೂರಿನ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷ ಪ ಸ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

Download Eedina App Android / iOS

X