ವಿಜಯಪುರ | ಅಂಬೇಡ್ಕರ್ ಅವರನ್ನು ಎಷ್ಟೇ ಜಪ ಮಾಡಿದರು ಸಾಲದು: ಮಲ್ಲಿಕಾರ್ಜುನ್ ಲೋಣಿ

Date:

Advertisements

ಅಂಬೇಡ್ಕರ್ ಅವರು ಕೇವಲ ಒಂದು ಜಾತಿ ಜನಾಂಗ ಮತ್ತು ಧರ್ಮಕ್ಕೆ ಸೀಮಿತವಾದವರಲ್ಲ. ಅವರು ಈ ದೇಶದ ಪ್ರತಿಯೊಬ್ಬರ ಪಾಲಿಗೆ ದೇವರ ಸಮಾನರಾಗಿದ್ದಾರೆ. ಅಂತಹ ಒಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಾವು ಪ್ರತಿನಿತ್ಯ ಎಷ್ಟೇ ಜಪ ಮಾಡಿದರು ಸಾಲದು ಎಂದು ಕಾಂಗ್ರೆಸ್ ವಿಜಯಪುರ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ್ ಲೋಣಿ ಹೇಳಿದರು.

ವಿಜಯಪುರದ ಅಂಬೇಡ್ಕರ್ ವೃತ್ತದಿಂದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನೆ ನಡೆಸಿ ಅಪಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಜಗತ್ತಿನ ಮಹಾನ್ ಮಾನವತವಾದಿ ಸಂವಿಧಾನ ಶಿಲ್ಪಿಡಾ. ಬಿ. ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು.

Advertisements

ಮುಖಂಡ ಅಬ್ದುಲ್ ಹಮೀದ್ ಮುಶ್ರಫ್ ಮಾತನಾಡಿ, ಅಂಬೇಡ್ಕರ್ ಈ ದೇಶದ ಸಂವಿಧಾನ ಬರೆದವರು. ನಮ್ಮೆಲ್ಲರಿಗೂ ಸಮಾನ ಹಕ್ಕು ನೀಡಿದ ಮಹಾನ್ ನಾಯಕ. ಅಂಬೇಡ್ಕರ್ ಬಗ್ಗೆ ನಗುವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೂಡಲೆ ಸಂಪುಟದಿಂದ ವಜಾ ಮಾಡಬೇಕು. ಅಂಬೇಡ್ಕರ್ ಬಗ್ಗೆ ಕೇವಲವಾಗಿ ಮಾತನಾಡುವ ಬಿಜೆಪಿ ನಾಯಕರನ್ನು ಜನತೆ ತಿರಸ್ಕರಿಸಬೇಕೆಂದು ಆಗ್ರಹಿಸಿದರು.

WhatsApp Image 2024 12 24 at 12.56.23 PM

ಪರಿಶಿಷ್ಟ ಜಾತಿ ಘಟಕದ ಜಿಲ್ಲಾ ಅಧ್ಯಕ್ಷ ರಮೇಶ್ ಗುಬ್ಬೇವಾಡ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನ ರಚಿಸಿ ಈ ದೇಶದ ಪ್ರತಿಯೊಬ್ಬ ನಾಗರಿಕರಿಗೆ ಸಮಾನಕಗಳನ್ನು ಕಲ್ಪಿಸಿದ್ದಾರೆ. ನಾಲ್ಕು ಗೋಡೆಗಳ ಮಧ್ಯೆ ಜೀವಿಸುತ್ತಿದ್ದ ಮಹಿಳೆಯರಿಗೆ ಪುರುಷ ಸಮಾನ ಅಧಿಕಾರ ಮತ್ತು ಹಕ್ಕುಗಳನ್ನು ನೀಡಿದ್ದಾರೆ. ಇದರಿಂದ ಮಹಿಳೆಯರನ್ನು ಮುಖ್ಯವಾಗಿ ತಂದು ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯ ಸಾಧನೆ ಮಾಡಲು ಸಾಧ್ಯವಾಗಿದೆ. ಇಂತಹ ಮಹಾನ್ ಚೇತನರ ಬಗ್ಗೆ ಮಾತನಾಡಿದ್ದು ಅತ್ಯಂತ ಖಂಡನೆವಾಗಿದೆ. ಅಮಿತ್ ಶಾ ಹೇಳಿಕೆಯಿಂದ ಕೇವಲ ಅಂಬೇಡ್ಕರ್ ಅವರಿಗೆ ಅಷ್ಟೇ ಅಲ್ಲ ಇಡೀ ದೇಶದ ನಾಗರಿಕರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಅಮಿತ್ ಸರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ದೇಶದ ಜನತೆಗೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ವಿಜಯಪುರ | ಶರಣರ ಎಲ್ಲ ಕುರುಹುಗಳನ್ನು ಉಳಿಸಿ ಅಭಿವೃದ್ಧಿಪಡಿಸುವಂತೆ ಸರ್ಕಾರಕ್ಕೆ ಒತ್ತಾಯ

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ಆರತಿ ಷಹಪೂರ, ಮುಖಂಡರಾದ ಡಾ.ಬಾಬುರಾಜೇಂದ್ರ ನಾಯಕ, ಬಿಎಸ್ ಗಸ್ತಿ, ಸುಭಾಶ ಕಾಲೇಭಾಗ, ವೈದ್ಯನಾಥ್ ಕರ್ಪೂರ ಮಠ, ಚಾಂದಸಾಬ್ ಗಡಗಲಾವ, ಗಂಗಾಧರ ಸಂಬಣ್ಣಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಮೀರ್ ಬಕ್ಷಿ, ಪ್ರಧಾನ ಕಾರ್ಯದರ್ಶಿಗಳಾದ ಜಾಕೀರ್ ಹುಸೇನ್ ಮುಲ್ಲಾ, ಎಂ ಎಂ ಮುಲ್ಲಾ, ದೇಶೂ ಚೌಹಾಣ್, ವಸಂತ ವನಮೋಡೆ, ಹಾಜಿಲಾಲ್ ದಳವಾಯಿ, ರಾಘವೇಂದ್ರ ಒಡವಡಗಿ, ಅಜಯ್ ರೋಜೆವಾಲೆ, ಇಲಿಯಾಸ್ ಸಿದ್ದಕಿ, ಜಬ್ಬರ್ ಮುಲ್ಲಾ, ಆನಂದ್ ಜಾದವ, ಅಮಿತ್ ಚೌಹಾನ್, ರಾಜೇಶ್ವರಿ ಚೊಳಕೆ, ಪ್ರಿಯಾಂಕಾ ತೊರವಿ, ಲಲಿತ ದೊಡ್ಡಮನಿ, ಜಯಶ್ರೀ ಹದನೂರ, ದಿಲೀಪ್ ಪ್ರಭಾಕರ್ ಪಾಲ್ಗೊಂಡಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X