ವಿಜಯಪುರ | ಹಕ್ಕಿಜ್ವರ ಕುರಿತು ಆತಂಕ ಬೇಡ; ಅಧಿಕಾರಿಗಳ ಅಭಯ

Date:

Advertisements

ಹಕ್ಕಿಜ್ವರ ಪಕ್ಷಿಗಳಿಗೆ ಹರಡುವ ಕಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಾಮಿಕವಾಗಿ ಹರಡುವುದಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ವಿಜಯಪುರ ಕಂದಾಯ ಉಪ ವಿಭಾಗಾಧಿಕಾರಿ ವಿನಯ ಪಾಟೀಲ ಹೇಳಿದರು.

ಇಂಡಿ ತಾಲೂಕಿನ ವಿಧಾನಸೌಧದ ಕಂದಾಯ ಉಪ ವಿಭಾಗಾಧಿಕಾರಿಗಳ ಸಭಾಭವನದಲ್ಲಿ ನಡೆದ ಹಕ್ಕಿಜ್ವರ ಕುರಿತು ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿರಿಯ ಪಶು ವೈದ್ಯಧಿಕಾರಿ ಡಾ. ರಾಜಕುಮಾರ ಅಡಗಿ ಮಾತನಾಡಿ, “ತಾಲೂಕಿನಲ್ಲಿ ಒಟ್ಟು ಹತ್ತು ಸಾವಿರ ಕೋಳಿಗಳಿವೆ. ಸಾವಿರ ಕೋಳಿಯ 4 ಫಾರಂಗಳಿವೆ. 50 ಕೋಳಿಯ 30 ಫಾರಂಗಳಿಗೆ. ಮರಣ ಹೊಂದಿದ ಕೋಳಿಗಳ ವೈಜ್ಞಾನಿಕ ವಿಲೇವಾರಿ ಮಾಡಲಾಗುತ್ತಿದೆ. ಇತ್ತೀಚೆಗೆ ನಡೆದ ಕೋಳಿಗಳ ಸಾವಿನ ಕುರಿತು ವೈದ್ಯಕೀಯ ಕಾರಣಗಳನ್ನು ಕಂಡುಕೊಳ್ಳಲಾಗುತ್ತಿದೆ. ಯಾವುದೇ ಕಾಯಿಲೆಯ ಕುರಿತು ಆತಂಕ ಬೇಡ, ಎಚ್ಚರವಿರಲಿ” ಎಂದರು.

Advertisements

ತಾಲೂಕು ಹಕ್ಕಿಜ್ವರದ ನೋಡಲ್ ಅಧಿಕಾರಿ ಡಾ. ಪ್ರಕಾಶ್ ಮಿರ್ಜಿ ಮಾತನಾಡಿ, “ತಾಲೂಕಿನಲ್ಲಿ ಕೋಳಿ ಶೀತ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೋಳಿ ಸಾಕಾಣಿಕೆ ಕೇಂದ್ರಗಳ ಮಾಲೀಕರಿಗೆ ಕೋಳಿಗಳಲ್ಲಿ ಅಸಹಜ ಸಾವು ಕಂಡುಬಂದಲ್ಲಿ ತಕ್ಷಣವೇ ಪಶುಪಾಲನ ಇಲಾಖೆಗೆ ತಿಳಿಸುವಂತೆ, ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟ ಅಂಗಡಿಗಳಲ್ಲಿ ಉತ್ಪಾದನೆ ಆಗುವ ಮಾಂಸ ಹಾಗೂ ಮೊಟ್ಟೆಗಳನ್ನು ಸೂಕ್ತ ರೀತಿ ಪರಿಶೀಳನೆ ಮಾಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ” ಎಂದು ಹೇಳಿದರು.

ಇದನ್ನೂ ಓದಿ: ವಿಜಯಪುರ | ನೀರು ಕುಡಿಯಲು ಹೋಗಿ ಬಾಲಕ ನೀರುಪಾಲು

ಈ ವೇಳೆ ಪಶು ವೈದ್ಯಧಿಕಾರಿ ಡಾ ಲಕ್ಷ್ಮೇಶ ಕಟ್ಟಿಮನಿ, ಡಾ. ರವಿಕಾಂತ ಬಿರಾದಾರ, ಡಾ. ರಾಜಶೇಖರ ಕಾರಜೋಳ, ಡಾ. ಸಂಜೀವ್ ಕುಮಾರ ಲಾಳಸಂಗಿ, ಡಾ. ವಿನಯ ಜಂಬಗಿ, ಡಾ. ಪ್ರಶಾಂತ ಬೆಳ್ಳುಂಡಗಿ, ಡಾ, ಆಷಾರಾಣಿ ದಶವಂತ, ಸಿಬ್ಬಂದಿಗಳಾದ ರಾಮಣ್ಣ ಉಪ್ಪಾರ, ರಮೇಶ ನರಳೆ, ಜಾವೇದ ಭಾಗವಾನ, ಪುಂಡಲೀಕ ಕೂಡಗಿ, ಮೂಕಲಾಜಿ ಮತ್ತಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X