ವಿಜಯಪುರ | ಜು.13ರಂದು ಸಾಹಿತಿ ಅನಿಲ ಹೊಸಮನಿಯವರಿಗೆ ಅಭಿನಂದನಾ ಸಮಾರಂಭ

Date:

Advertisements

ವಿಜಯಪುರ ಜಿಲ್ಲೆಯ ಹಿರಿಯ ಪತ್ರಕರ್ತ ಹಾಗೂ ದಲಿತ ದಮನಿತರ ಧ್ವನಿ, ಸಾಹಿತಿ ಅನಿಲ ಹೊಸಮನಿ ಅವರಿಗೆ ನಗರದ ಅಂಬೇಡ್ಕ‌ರ್ ಭವನದಲ್ಲಿ ಜುಲೈ 13ರ ಭಾನುವಾರ ಬೆಳಿಗ್ಗೆ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ಲಡಾಯಿ ಪ್ರಕಾಶನದ ಬಸವರಾಜ ಸುಳಿಬಾವಿ ಹೇಳಿದರು.

ವಿಜಯಪುರ ನಗರದ ಬುದ್ಧ ವಿಹಾರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದರು.

ವಿಜಯಪುರದ ಮೇ ಸಾಹಿತ್ಯ ಮೇಳ ಬಳಗದಿಂದ ನಡೆಯಲಿರುವ ಅನಿಲ ಎಂಬ ಬಿಸಿಲ ನೆಲದ ಸಂಘರ್ಷದ ಒಡನಾಡಿಯೊಂದಿಗೆ ಒಂದು ದಿನ ಎಂಬ ಕಾರ್ಯಕ್ರಮದಲ್ಲಿ ಬಿ. ಶ್ರೀನಿವಾಸ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

Advertisements

ಉದ್ಘಾಟನೆಯನ್ನು ಮುಂಬಯಿಯ ವಿಜಯ ಸುರ್ವಾಡೆ ಮುಂಬಯಿ ನೇರವೇರಿಸುವರು. ಡಾ. ಮೂಡ್ನಾಕೂಡ ಚಿನ್ನಸ್ವಾಮಿಯವರು ‘ಡಾ. ಅಂಬೇಡ್ಕ‌ರ್ ಸಹವಾಸದಲ್ಲಿ’ ಪುಸ್ತಕದ 2ನೇ ಆವೃತ್ತಿ ಬಿಡುಗಡೆ ನೇರವೇರಿಸುವರು.

ಮುಖ್ಯ ಅತಿಥಿಗಳಾಗಿ ಡಾ. ಆರ್ ಸುನಂದಮ್ಮ, ರಾಜು ಅಲಗೂರ ಆಗಮಿಸುವರು. ಅಧ್ಯಕ್ಷತೆಯನ್ನು ರಾಜಶೇಖರ ಯಡಹಳ್ಳಿ ವಹಿಸುವರು. ಶೋಭಾ ಕಟ್ಟಿಮನಿ ಹೊಸಮನಿ ಉಪಸ್ಥಿತರಿರುವ. ಸುಜಾತ ಚಲವಾದಿ ಉಪನ್ಯಾಸ ನೀಡುವರು. ಮೋಹನ ಕಟ್ಟಿಮನಿ ಸಂಯೋಜಿಸುವರು. ಬಳಿಕಾ ಅಭಿಷೇಕ ಚಕ್ರವರ್ತಿಯವರಿಂದ ವಿಜಾಪುರ ಜಿಲ್ಲೆಯ ದಲಿತ ಚಳವಳಿ ಮತ್ತು ಅನಿಲ ಹೊಸಮನಿ ಎಂಬ ವಿಚಾರಗೋಷ್ಠಿ ನಡೆಸಿಕೊಡುವರು.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಅಧಿಕಾರಿಗಳ ಕಣ್ತಪ್ಪಿಸಿ ಮುನಗನಹಳ್ಳಿ ಕೆರೆಯ ಮಣ್ಣು ಅಕ್ರಮ ‌ಸಾಗಣೆ: ಕ್ರಮಕ್ಕೆ ಒತ್ತಾಯ

ಅದಾದ ನಂತರ ಹಣಮಂತ ಚಿಂಚೋಳಿ ಇವರಿಂದ ಅನಿಲ ಹೊಸಮನಿ: ಜನಪರ ಚಳವಳಿಗಳ ಒಡನಾಟ, ಡಾ.ಓಂಕಾರ ಕಾಕಡೆ ಇವರಿಂದ ಅನಿಲ ಹೊಸಮನಿ: ಪತ್ರಿಕಾ ಬರಹ- ಬದುಕು ಎಂಬ ವಿಚಾರ ಗೋಷ್ಠಿ ನಡೆಯಲಿವೆ. ಸಾಯಂಕಾಲ ಅನಿಲ ಹೊಸಮನಿಯವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಬಳಿಕ ಗೌರವಾರ್ಪಣೆ ಮತ್ತು ಸಮಾರೋಪ ಹಾಗೂ ಒಡನಾಡಿಗಳ ಮಾತು ಕಾರ್ಯಕ್ರಮ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಅಭಿಷೇಕ್ ಚಕ್ರವರ್ತಿ, ರಾಜಶೇಖರ ಯಡಹಳ್ಳಿ, ಚೆನ್ನು ಕಟ್ಟಿಮನಿ, ನಾಗರಾಜ ಲಂಬು, ಅಡಿವೆಪ್ಪ ಸಾಲಗಲ್ಲು, ಶ್ರೀನಾಥ ಪೂಜಾರಿ,‌ ಪ್ರಭುಗೌಡ ಪಾಟೀಲ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X