ವಿಜಯಪುರ | ಶಿಕ್ಷಕನ ಮೇಲೆ ಪೋಲಿಸ್ ಪೇದೆಯ ಗೂಂಡಾ ವರ್ತನೆ; ಆರೋಪ

Date:

ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ಪೊಲೀಸ್‌ ಪೇದೆಯೋರ್ವ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿಸಿದ್ದು, ಹಲ್ಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಎಂ ಬಿ ಪಾಟೀಲ ಕಾಲೋನಿಯಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ.

ಶಿಕ್ಷಕ ಚಿದಾನಂದಗೆ ವಿಜಯಪುರ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಅಶೋಕ ಮಿಂಚನಾಳ ಜೀವ ಬೆದರಿಕೆ ಹಾಕಿರುವ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ನಗರದ ಎಂ.ಬಿ ಪಾಟೀಲ ಬಡಾವಣೆಯಲ್ಲಿ ಅಕ್ಕಪಕ್ಕದಲ್ಲಿ ನಿವೇಶನ ಹೊಂದಿರುವ ತಿಕೋಟಾ ತಾಲೂಕಿನ ಬರಟಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಶಿಕ್ಷಕ ಚಿದಾನಂದ ಜಿಗಜೇವಣಿ ಮತ್ತು ವಿಜಯಪುರ ಗ್ರಾಮೀಣ ಪೋಲಿಸ್ ಠಾಣೆಯ ಪೇದೆ ಅಶೋಕ ಮಿಂಚನಾಳ ನಡುವೆ ನಿವೇಶನ ಒತ್ತುವರಿಗೆ ಸಂಬಂಧಿಸಿದಂತೆ ವಿವಾದ ಏರ್ಪಟ್ಟಿದೆ. ಈ ವೇಳೆ ಪೊಲೀಸ್‌ ಪೇದೆ ಶಿಕ್ಷಕನಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ವಿಜಯಪುರ ನಗರದಲ್ಲಿ ಗುರುವಾರ ಮಾಧ್ಯಮದ ಎದುರು ಮಾತನಾಡಿದ ಶಿಕ್ಷಕ ಚಿದಾನಂದ ಅವರು, “ಗ್ರಾಮೀಣ ಪೊಲೀಸ ಠಾಣೆಯ ಪಿ.ಸಿ ಅಶೋಕ ಮಿಂಚನಾಳ ನಿವೇಶನದ ವಿಚಾರಕ್ಕಾಗಿ ನನ್ನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪೊಲೋಸ್‌ ಪೇದೆ ಅಶೋಕ ಮಿಂಚಿನಹಾಳ ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನ ಮಾಡಿದ್ದು, ಜೀವ ಬೆದರಿಕೆ ಹಾಕಿರುವುದರಿಂದ ನಾನು ಪೊಲೀಸ್ ಇಲಾಖೆಗೆ ದೂರು ನೀಡಿದ್ದೇನೆ. ಅಶೋಕನ ಮೇಲೆ ಎಸ್‌ಪಿ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ನಾನು ರಾಜ್ಯಪಾಲರಿಗೆ ಪತ್ರ ಬರೆಯುತ್ತೇನೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸರ್ಕಾರಿ ಜಾಗದಲ್ಲಿ ಅಂಗಡಿ ಹಾಕಿದ್ದವರ ಮೇಲೆ ಕಾಂಗ್ರೆಸ್ ಮುಖಂಡ ಗೂಂಡಾಗಿರಿ: ಆರೋಪ

“ಸಮಾಜವನ್ನು ರಕ್ಷಿಸಬೇಕಾದ ಆರಕ್ಷಕರೇ ಭಕ್ಷಕರಾದಾಗ ನಾವು ಸಮಾಜದಲ್ಲಿ ಬದುಕುವುದು ಹೇಗೆ? ನಾನೊಬ್ಬ ಶಿಕ್ಷಕನಾಗಿ ಪೊಲೀಸ್‌ ಠಾಣೆ ಕುರಿತು ಮಕ್ಕಳಿಗೆ ಏನೆಂದು ಪಾಠ ಮಾಡಲಿ? ಪೊಲೀಸರು ಗೂಂಡಾಗಳೆಂದೋ ಅಥವಾ ಸಮಾಜದ ರಕ್ಷಕರೆಂದೋ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಂದಾಯ ಕರ್ಮಕಾಂಡ -3 | ಲಂಚವಿಲ್ಲದೆ ಈ ಇಲಾಖೆಯಲ್ಲಿ ಒಂದು ಕಡತವೂ ಚಲಿಸುವುದಿಲ್ಲ!

'ಇತ್ತೀಚಿನ ದಿನಗಳಲ್ಲಿ ಕಂದಾಯ ಇಲಾಖೆಯಲ್ಲಿ ಉನ್ನತ ಶ್ರೇಣಿಯಿಂದ ಕೆಳಹಂತದವರೆಗೆ ಭ್ರಷ್ಟಾಚಾರ ತಾಂಡವವಾಡುತ್ತಿದೆ....

ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ...

ಬೆಳಗಾವಿ | ಹಿಡಕಲ್ ಡ್ಯಾಂನಿಂದ ನೀರು ಹರಿಸುವಂತೆ ರೈತರ ಪ್ರತಿಭಟನೆ

ಹಿಡಕಲ್‌ ಜಲಾಶಯದಿಂದ ಘಟಪ್ರಭಾ ಎಡದಂಡೆ ನಾಲೆಯ ರೈತರಿಗೆ ನೀರುಹರಿಸುವಂತೆ ಕೋರಿ ಚಿಕ್ಕೋಡಿ-ಮಿರಜ್‌...

ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸುಮಾರು 380...