ವಿಜಯಪುರ | ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಕೆಗೆ ಸೂಚನೆ

Date:

Advertisements

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ 702 ಜನವಸತಿಗಳ 5 ಪುರಸಭೆಗಳಿಗೆ ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕಿನ 343 ಜನವಸತಿಗಳ ಹಾಗೂ 6 ಪುರಸಭೆಗಳಿಗೆ ಕುಡಿಯುವ ನೀರು ಒದಗಿಸುವ ಡಿಬಿಒಟಿ ಯೋಜನೆ-1ಯಡಿ ಪೈಪಲೈನ್‌ ಆಳವಡಿಸುವ ಕಾಮಗಾರಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಈ ಕುರಿತು ಪ್ರಕಟಣೆ ಹೊರಡಿಸಿದ್ದು, “ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು ಅತ್ಯಂತ ಅವಶ್ಯಕವಾಗಿರುವುದರಿಂದ ಪೈಪ್‌ಲೈನ್ ಕಾಮಗಾರಿಯನ್ನು ಭೂಮಿಯ ಆಳದಲ್ಲಿ ಅಳವಡಿಸಲಾಗುವುದರಿಂದ ಭೂಸ್ವಾಧೀನ ಪ್ರಕ್ರಿಯೆ ಅವಶ್ಯಕತೆ ಇರುವುದಿಲ್ಲ. ಆದರೆ ಕೆಲವರು ತಕರಾರು ಮಾಡಿ ಕಾಮಗಾರಿಯನ್ನು ಸ್ಥಗಿತಗೊಳಿಸುತ್ತಿದ್ದರಿಂದ ಈ ಯೋಜನೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು” ಎಂದು ಹೇಳಿದರು.

“ಗ್ರಾಮೀಣ ಜನವಸತಿಗಳಿಗೆ ನೀರು ಪೂರೈಸುವ ಹಿತದೃಷ್ಟಿಯಿಂದ ಸಂಬಂಧಿಸಿದ ಅಧಿಕಾರಿಗಳು ಕಾಮಗಾರಿಗಳಿಗೆ ಸಾರ್ವಜನಿಕರಿಂದ ಅಡ್ಡಿಯಾಗದಂತೆ ನೋಡಿಕೊಂಡು ಕಾಮಗಾರಿ ಕೈಗೊಳ್ಳಬೇಕು. ಈ ಯೋಜನೆಯು ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಿದ್ದು, ಸ್ಥಳೀಯ ಸಮುದಾಯಗಳ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಪ್ರಯೋಜನಕಾರಿ ಆಗಿರುವುದರಿಂದ ವಿಳಂಬ ಅಥವಾ ಹಸ್ತಕ್ಷೇಪವಿಲ್ಲದೇ ಕೆಲಸ ಮುಂದುವರೆಯುವುದು ನಿರ್ಣಾಯಕವಾಗಿದೆ” ಎಂದು ತಿಳಿಸಿದರು.

Advertisements

“ಯಾವುದೇ ಸ್ಥಳದಲ್ಲಿ ಯಾವುದೇ ವ್ಯಕ್ತಿ ಕಾಮಗಾರಿಗೆ ಅಡ್ಡಿಪಡಿಸುವುದು ಅಥವಾ ನಿಲ್ಲಿಸುವುದು, ಯಾರಿಗಾದರೂ ಕೆಲಸ ಮಾಡುವವರಿಗೆ ಅಡೆತಡೆ ಮಾಡುವುದು, ಕೈಯಿಂದ ಹೊಡೆದು ಗಾಯ ಮಾಡುವುದು, ಬಡಿಗೆ ಅಥವಾ ಇತರೆ ವಸ್ತುಗಳಿಂದ ಹೊಡೆಯುವುದು, ಕೆಲಸ ಮಾಡುವವರಿಗೆ ಜೀವನ ಬೆದರಿಕೆ ಹಾಕುವುದು ಕಂಡುಬಂದಲ್ಲಿ ಬಿಎನ್‌ಎಸ್ ಕಲಂ 132 ಅಡಿ ಎರಡು ವರ್ಷ ಕಾರಾವಾಸ ಅಥವಾ ದಂಡ, ಬಿಎನ್ಎಸ್ 126(1)ರನ್ವಯ ಒಂದು ತಿಂಗಳು ಶಿಕ್ಷೆ ಅಥವಾ ₹5000 ದಂಡ, ಬಿಎನ್‌ಎಸ್ ಕಲಂ 15(2) ರನ್ವಯ ಒಂದು ವರ್ಷ ಕಾರಾವಾಸ ಅಥವಾ ₹10,000 ದಂಡ ಬಿಎನ್‌ಎಸ್ ಕಲಂ 118(1)ರನ್ವಯ ಮೂರು ವರ್ಷ ಕಾರಾವಾಸ ಅಥವಾ ₹20,000 ದಂಡ, ಬಿಎನ್ ಎಸ್ ಕಲಂ 352 ರನ್ವಯ ಎರಡು 351(2) 2 ವಿಧಿಸಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಶೈಕ್ಷಣಿಕ ಹಂತದಲ್ಲಿಯೇ  ಜೀವನದ ಗುರಿ ನಿರ್ಧರಿಸಿ : ಎಂ.ಎಸ್ ರವಿಪ್ರಕಾಶ್

“ಕಾರಾವಾಸ ಅಥವಾ ದಂಡ ಹಾಗೂ ಬಿಎನ್ಎಸ್ ಜಿಲ್ಲಾ ಪ್ರಾಧಿಕಾರವು ನಿರ್ಧರಿಸಿದಂತೆ ಸಾರ್ವಜನಿಕ ಕಲ್ಯಾಣ ಯೋಜನೆಗಳನ್ನು ನಿಯಂತ್ರಿಸುವ ನಿಯಮಗಳಿಗೆ ಅನುಸಾರ ದಂಡ ಅಥವಾ ಇತರ ಕಾನೂನು ಕ್ರಮಗಳು ಒಳಗೊಂಡಿರುತ್ತವೆ” ಎಂದು ಹೇಳಿದರು.

“ಸಾರ್ವಜನಿಕರು ಈ ಯೋಜನೆಗೆ ಸಂಪೂರ್ಣ ಸಹಕಾರ ನೀಡಬೇಕು. ಈ ಕುರಿತು ಯಾವುದೇ ಹೆಚ್ಚಿನ ಮಾಹಿತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ವಿಜಯಪುರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X