ವಿಜಯಪುರ | ಪುರಸಭೆ ಅಧ್ಯಕ್ಷ ಮೆಹಬೂಬ ಗೂಳಸಂಗಿ ವಿರುದ್ಧ ತಮಟೆ ಚಳವಳಿ

Date:

Advertisements

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪುರಸಭೆ ಅಧ್ಯಕ್ಷ ಮೆಹಬೂಬ ಗೂಳಸಂಗಿ ಅವರು ದಲಿತ ಸಮುದಾಯದ ಹೋರಾಟಗಾರರನ್ನು ಅವಮಾನಿಸಿದ್ದೂ ಅಲ್ಲದೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸುಳ್ಳು ಆರೋಪ ಮಾಡಿರುವುದನ್ನು ಖಂಡಿಸಿ ತಾಲೂಕಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ತಮಟೆ ಚಳವಳಿ ಪ್ರತಿಭಟನೆ ಮಾಡಲಾಯಿತು.

ಪಟ್ಟಣದ ಪುರಸಭೆಗೆ ಆಗಮಿಸಿದ್ದ ಪ್ರತಿಭಟನಾಕಾರರು ಪುರಸಭೆ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿ ಅಕ್ರೋಶ ಹೊರಹಾಕಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹರೀಶ ನಾಟೇಕರ ಮಾತನಾಡಿ, “ಪುರಸಭೆ ಅಧ್ಯಕ್ಷರು ಪದೇ ಪದೇ ಜಾತಿ ನಿಂದನೆ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ್ದು, ಇವರ ಮೇಲೆ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು. ತಾಲೂಕು ಪಂಚಾಯಿತಿ ವಸತಿ ಗೃಹ ನೆಲಸಮ ಮಾಡಿದ್ದು, ಸರಕಾರದ ಆಸ್ತಿಯನ್ನು ಹಾನಿ ಮಾಡಿದ್ದಕ್ಕಾಗಿ ಇವರ ಮೇಲೆ ಕೂಡಲೇ ಸರ್ಕಾರದಿಂದ ಕ್ರಿಮಿನಲ್ ಕೇಸು ದಾಖಲಿಸಬೇಕು” ಎಂದು ಒತ್ತಾಯಿಸಿದರು.

Advertisements
WhatsApp Image 2025 07 22 at 10.48.20 AM

“ಇಂದಿರಾ ನಗರದಲ್ಲಿ ದಲಿತರಿಗೆ ಶೆಡ್ ನಿರ್ಮಿಸಿಕೊಳ್ಳಲು ಅನುಮತಿ ನೀಡಬೇಕು. ಶೆಡ್ ತೆರವುಗೊಳಿಸಿದ ಪುರಸಭೆ ಅಧ್ಯಕ್ಷರ ಮೇಲೆ ಪ್ರಕರಣ ದಾಖಲಿಸಬೇಕು. ಪುರಸಭೆ ಅಧ್ಯಕ್ಷರ ಮೇಲೆ ದೌರ್ಜನ್ಯ, ಗುಂಡಾ, ಕೋಮುಗಲಭೆ ಕೇಸು ದಾಖಲಾಗಿದ್ದು ಇವರನ್ನು ಜಿಲ್ಲೆಯಿಂದ ಗಡಿಪಾರು ಮಾಡಬೇಕು. ದಲಿತ ಸಂಘಟನೆ ನಾಯಕರಿಗೆ ತೇಜೋವಧೆ ಮಾಡಿರುವ ಇವರ ಮೇಲೆ ಮಾನನಷ್ಟ ಮೊಕ್ಕದ್ಧಮೆ, ಜಾತಿನಿಂದನೆ ಕೇಸು ದಾಖಲಿಸಬೇಕು” ಎಂದು ಮನವಿಯಲ್ಲಿ ಕೋರಲಾಗಿದೆ. ಮುಖ್ಯ ಅಧಿಕಾರಿ ಮಲ್ಲನಗೌಡ ಬಿರಾದಾರ್ ಮನವಿ ಪತ್ರ ಸ್ವೀಕರಿಸಿದರು.

ಇದನ್ನೂ ಓದಿ: ವಿಜಯಪುರ | ಬಿಎಲ್‌ಒ ಕೆಲಸ ನೀಡದಂತೆ ಅಂಗನವಾಡಿ ಕಾರ್ಯಕರ್ತೆಯರ ಮನವಿ

ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಪ್ರಕಾಶ ಚಲವಾದಿ, ಆನಂದ ಮದೊರು, ಬಸವರಾಜ ಸರೊರು, ಪರಶುರಾಮ ನಾಲತವಾಡ, ಸಂಜೀವ ಬಾಗೇವಾಡಿ, ಪ್ರಶಾಂತ ಕಾಳೆ, ಶಿವು ಕನ್ನೊಳ್ಳಿ, ಬಾಲಚಂದ್ರ ಹುಲ್ಲರು ಸೇರಿದಂತೆ ಹಲವಾರು ದಲಿತ ಮುಖಮಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X