ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಿ, ದೇಶದ ಜನರ ಕ್ಷಮೆ ಕೇಳಬೇಕು. ಅದಲ್ಲದೇ, ಅಮಿತ್ ಶಾ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಬೇಕು ಇಲ್ಲವಾದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಒಡಲ ದನಿ ಮಹಿಳಾ ಒಕ್ಕೂಟದ ವಿಜಯಪುರ ಜಿಲ್ಲಾ ಮುಖಂಡರಾದ ಭುವನೇಶ್ವರಿ ಕಾಂಬಳೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಅವರು ವಿಜಯಪುರ ಜಿಲ್ಲೆಯ ಇಂಡಿ ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಪ್ರಾರಂಭಿಸಿ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಪ್ರಮುಖ ರಸ್ತೆಯಲ್ಲಿ ವಿವಿಧ ಘೋಷಣೆಗಳನ್ನು ಕೂಗುವ ಹಾಗೂ ತಮಟೆ ಬಾರಿಸುವ ಮೂಲಕ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಮುಂದುವರಿದು ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವ ಅಮಿತ್ ಶಾ ಚಳಿಗಾಲದ ಅಧಿವೇಶನದಲ್ಲಿ ಅವಮಾನದ ಹೇಳಿಕೆ ನೀಡುವ ಮೂಲಕ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಗೊಳಿಸಿದ್ದಾರೆ.ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂಬುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂಬೇಡ್ಕರ್ ಹೆಸರು ಜಪ ಮಾಡುವ ಬದಲಿಗೆ ದೇವರ ಹೆಸರನ್ನು ಜಪಿಸಿದ್ದರೆ ಸ್ವರ್ಗವಾದರೂ ಪ್ರಾಪ್ತಿಯಾಗುತ್ತಿತ್ತು ಎನ್ನುವ ಮೂಲಕ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಅಮಿತ್ ಶಾ ನೀಡಿರುವ ಹೇಳಿಕೆಯು ಅಂಬೇಡ್ಕರ್ ಅವರೊಂದಿಗೆ,ಅವರ ಸಂವಿಧಾನದಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿಯೂ ಮುಖ್ಯವಾಹಿನಿಗೆ ಬಂದಿರುವ ಎಲ್ಲ ಸಮುದಾಯಗಳಿಗೂ ಅವಮಾನಿಸಿದಂತಾಗಿದೆ. ಆದ್ದರಿಂದ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದನ್ನು ಓದಿದ್ದೀರಾ? ವಿಜಯಪುರ | ನಿತ್ಯವೂ ಮಾನವೀಯ ಮೌಲ್ಯಗಳನ್ನು ನಾವು ಮೈಗೂಡಿಸಿಕೊಳ್ಳಬೇಕು: ನಾಗರತ್ನ ಮನಗೂಳಿ
ಈ ಸಂದರ್ಭದಲ್ಲಿ ಶ್ರೀಮತಿ ರಮಾಬಾಯಿ ಅಂಬೇಡ್ಕರ್ ಮಹಿಳಾ ಸ್ವ-ಸಹಾಯ ಸಂಘದ ಅಧ್ಯಕ್ಷ ಇಂದಿರಾಗಾಂಧಿ ಹೊಸಮನಿ, ಸುಶೀಲಾ ಬನಸೊಡೆ, ಬೈಜಾಬಾಯಿ ಹರಿಜನ, ಮಹಾದೇವಿ ಶಿವಶರಣ, ಭಾಗವ್ವ ದಶವಂತ, ಯಲಬಾಯಿ ಬನಸೊಡೆ, ಲಕ್ಷ್ಮೀ ದ್ರಾವಿಡ, ರೇಣುಕಾ ದಶವಂತ, ಪವಿತ್ರ ಮಾದರ, ಸುನಂದ ದಶವಂತ, ಜ್ಯೋತಿ ಹೊಸಮನಿ, ರೂಪಾ ಕಾಲೇಬಾಗ, ಪವಿತ್ರ ಸಾವಳಸಂಗ, ಸರೋಜನಿ ಕಟ್ಟಿಮನಿ, ಶೋಭಾ ಲೋಗಿ, ಗುಂಡವ್ವ ಕಾಂಬಳೆ, ಸುಜಾತ ಬಬಲಾದಿ, ಸುಭಾಸ ತಳಕೇರಿ, ಪಾಂಡುರಂಗ ರೇವಪ್ಪ ಹೊಸಮನಿ, ವಿಕಾಸ ಬನಸೋಡೆ, ಆನಂದ ಅಗರಖೇಡ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

ಕಾಂಗ್ರೆಸ್ ಕೊಡುವ ದುಡ್ಡಿಗೆ ಅಂಬೇಡ್ಕರ್ ಹೆಸರು ಕೆಡಿಸಬೇಡಿ.
ವಿಧಾನಸೌಧ ಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿದಾಗ ಯಾರಿಗೂ ದೇಶದ ಬಗ್ಗೆ ಅಭಿಮಾನ ಬರಲಿಲ್ಲ,
ಅವಾಗ ಪ್ರತಿಭಟನೆ ಮಾಡ್ಲಿಕ್ಕೆ ಯಾರು ದುಡ್ಡು ಕೊಟ್ಟಿಲ್ಲ