ವಿಜಯಪುರದ ಖ್ಯಾತ ನೇತ್ರ ತಜ್ಞ, ಜಮಾಅತೆ ಇಸ್ಲಾಮಿ ಹಿಂದ್‌ ಹಿರಿಯ ನಾಯಕ ಡಾ. ಎಂ ಜೆ ಇನಾಮ್‌ದಾರ್ ನಿಧನ

Date:

Advertisements

ವಿಜಯಪುರದ ಖ್ಯಾತ ನೇತ್ರ ತಜ್ಞರು ಹಾಗೂ ಜಮಾಅತೆ ಇಸ್ಲಾಮಿ ಹಿಂದ್‌ನ ಹಿರಿಯ ನಾಯಕರೂ ಆಗಿದ್ದ ಡಾ. ಎಂ ಜೆ ಇನಾಮ್‌ದಾರ್ ನಿಧನರಾಗಿದ್ದಾರೆ.

ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಸಲಹಾ ಮಂಡಳಿಯ ಸದಸ್ಯರಾಗಿ, ಶಾಂತಿ ಪ್ರಕಾಶನದ ಟ್ರಸ್ಟಿಯಾಗಿ ಮತ್ತು ಸನ್ಮಾರ್ಗ ಪತ್ರಿಕೆಯ ಆರಂಭಕಾಲದ ಓದುಗರು, ಬರಹಗಾರರೂ ಆಗಿ ಚಿರಪರಿಚಿತರಾಗಿದ್ದ ಇನಾಮ್‌ದಾರ್‌(79) ಅವರು ಕವಿಯೂ ಸಾಹಿತಿಯೂ ಆಗಿದ್ದರು.

ʼಆಹಾರ, ಅಹಿಂಸೆ, ಧರ್ಮʼ ಎಂಬ ಅವರ ಕೃತಿ ಭಾರೀ ಸಂಖ್ಯೆಯ ಓದುಗರನ್ನು ಆಕರ್ಷಿಸಿತ್ತು. ʼನ್ಯಾಯದ ವ್ಯವಸ್ಥೆʼ ಎಂಬ ಅವರ ಕೃತಿಯೂ ಜನಪ್ರಿಯವಾಗಿತ್ತು. ಈ ಎರಡೂ ಕೃತಿಗಳನ್ನು ಶಾಂತಿ ಪ್ರಕಾಶನ ಪ್ರಕಟಿಸಿತ್ತು. ಸನ್ಮಾರ್ಗ ಪತ್ರಿಕೆಗೆ ಬಿಜಾಪುರ ಜಿಲ್ಲೆಯಲ್ಲಿ ದೊಡ್ಡಮಟ್ಟದ ಓದುಗರನ್ನು ಒದಗಿಸಿಕೊಟ್ಟಿದ್ದ ಅವರು ತನ್ನ ಗಝಲ್ ಮೂಲಕ ಜನಪ್ರೀತಿ ಗಳಿಸಿಕೊಂಡಿದ್ದರು. ಮುಖ್ಯವಾಗಿ ಲಿಂಗಾಯತ ಸಮುದಾಯ ಮತ್ತು ಮುಸ್ಲಿಂ ಸಮುದಾಯದ ನಡುವಿನ ಸೌಹಾರ್ದದ ಕೊಂಡಿಯಾಗಿ ಅವರು ಪಾತ್ರ ನಿಭಾಯಿಸುತ್ತಿದ್ದರು. ಒಳ್ಳೆಯ ಭಾಷಣಗಾರರೂ ಆಗಿದ್ದ ಅವರಿಗೆ ನಾಡಿನಾದ್ಯಂತ ದೊಡ್ಡ ಮಟ್ಟದ ಓದುಗರು ಮತ್ತು ಅನುಯಾಯಿಗಳೂ ಇದ್ದಾರೆ.

Advertisements

ಎಂ ಜೆ ಇನಾಮ್‌ದಾರ್‌ ಅವರ ನಿಧನಕ್ಕೆ ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ. ಬೆಳಗಾಮಿ ಮುಹಮ್ಮದ್ ಸಾದ್, ಕಾರ್ಯದರ್ಶಿ ಯೂಸುಫ್ ಕನ್ನಿ, ಅಕ್ಬರ್ ಅಲಿ ಉಡುಪಿ, ಮುಹಮ್ಮದ್ ಕುಂಞಿ, ಮಾಜಿ ರಾಜ್ಯಾಧ್ಯಕ್ಷ ಅಥರುಲ್ಲಾ ಶರೀಫ್ ಸಹಿತ ಬಹುತೇಕ ಮುಖಂಡರು ಸಂತಾಪ ಸೂಚಿಸಿದ್ದು, ಅವರ ಅನುಪಸ್ಥಿತಿಯನ್ನು ತಾಳಿಕೊಳ್ಳುವ ಶಕ್ತಿಯನ್ನು ಅಲ್ಲಾಹನು ಕುಟುಂಬಿಕರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಿಕ್ಷಣ ಸುಧಾರಣೆಗೆ ವಿಷಯವಾರು ಶಿಕ್ಷಕರ ನೇಮಕಕ್ಕೆ ಪ್ರತಿಭಟನೆ

ಡಾ. ಇನಾಮ್‌ದಾರ್‌ ಅವರು ಪತ್ನಿ, ಆರು ಹೆಣ್ಣುಮಕ್ಕಳು ಮತ್ತು ಓರ್ವ ಮಗನನ್ನು ಅಗಲಿದ್ದಾರೆ. ಅಲ್ಲಾಹನು ಅವರಿಗೆ ಮಗ್ ಫಿರತ್ ಮತ್ತು ಮರ್ಹಮತ್ ನೀಡಿ ಅನುಗ್ರಹಿಸಲೆಂದು ಪ್ರಾರ್ಥಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X