ವಿಜಯಪುರ | ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

Date:

Advertisements

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿ ಐದು ತಿಂಗಳು ಕಳೆದರೂ ಇನ್ನುವರೆಗೂ ಯಾವ ರೈತರಿಗೂ ಪರಿಹಾರ ಬಂದಿಲ್ಲ. ಫಸಲ್ ಭೀಮಾ ಯೋಜನೆಯಲ್ಲಿ ಭಾರಿ ಪ್ರಮಾಣದ ಅನ್ಯಾಯವಾಗುತ್ತಿದೆ, ಅದೇರೀತಿ ರೈತ ಸಂಪರ್ಕ ಕೇಂದ್ರಗಳಲ್ಲಿ ಹಲವಾರು ಸಮಸ್ಯೆಗಳಿವೆ. ಅಧಿಕಾರಿಗಳು ಸರಿಯಾಗಿ ಸ್ಪಂದಿಸುವುದಿಲ್ಲ, ಸ್ಪಿಂಕಲರ್ ಪೈಪಗಳ ಸಮಸ್ಯೆ ದೊಡ್ಡದಾಗಿದೆ. ಕಳೆದ 2-3 ವರ್ಷಗಳ ಹಿಂದೆ ಡಿ.ಡಿ ತುಂಬಿದ ಹಣವನ್ನು ಮರಳಿ ಹಾಕಲಾಗಿದೆ, ಈಗ ಮತ್ತೆ ಡಿ.ಡಿ ತುಂಬುವಂತೆ ಹೇಳುತ್ತಿದ್ದಾರೆ, ಅದು ನಿಮ್ಮ ಸರದಿ ಬಂದಾಗ ಕೊಡುತ್ತೇವೆ ಎನ್ನುತ್ತಿದ್ದಾರೆ ಎಂದು ಮನವಿಯಲ್ಲಿ ರೈತ ಸಂಘ ಉಲ್ಲೇಖಿಸಿದೆ.

ಈ ವೇಳೆ ರಾಜ್ಯ ಪ್ರಧಾನ ಕಾರ್ಯದಶಿಗಳಾದ ರಾಹುಲ ಕುಬಕಡ್ಡಿ, ಹಾಗೂ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, ರೈತರಿಗೆ ಅನುಕೂಲವಾಗುವ ರೀತಿಯಲ್ಲಿ ಯೋಜನೆಗಳ ಬಗ್ಗೆ ಸರಿಯಾದ ಮಾಹಿತಿ ನೀಡಿ, ಜೊತೆಗೆ ವಿಮೆಯಲ್ಲಿ ದೊಡ್ಡಪ್ರಮಾಣದ ಅವ್ಯವಹಾರ ನಡೆಯುತ್ತಿದೆ. ನಷ್ಟ ಅನುಭವಿಸಿರುವ ರೈತರಿಗೆ ಪರಿಹಾರ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಈ ಬಗ್ಗೆ ಸರಿಯಾದ ಮಾರ್ಗಸೂಚಿ ಇಲ್ಲ. ಅದುಕೂಡಾ ಗೊಂದಲವಿದೆ ಎಂದರು.

Advertisements

ಇಲಾಖೆಯಲ್ಲಿ ವಿಜಿಲೇನ್ಸ್ ತಂಡವನ್ನು ಇನ್ನು ಹೆಚ್ಚಿಸಿ ಜಿಲ್ಲೆಯಲ್ಲಿ ಅಕ್ರಮವಾಗಿ ನಕಲಿ ಬೀಜ ಗೊಬ್ಬರ, ಕೀಟನಾಶಕ ಮಾರಾಟವಾಗುವುದು ತಡೆಯುವಂತೆ ಇದರಿಂದ ರೈತರಿಗೆ ನಷ್ಟವಾಗುತ್ತಿದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಜಂಟಿ ಕೃಷಿ ನಿರ್ದೇಶಕರಾದ ರಾಜಶೇಖರ ವಿಲಿಯಮ್ಸ್, ಬೆಳೆವಿಮೆಗೆ ಸರ್ಕಾರದ ಮಾರ್ಗಸೂಚಿಯಿದೆ. ಇಲ್ಲಿ ಕೇವಲ ಕೃಷಿ ಇಲಾಖೆ ಮಾತ್ರವಲ್ಲದೇ ಇನ್ನು 4-5 ಇಲಾಖೆಯ ಅಧಿಕಾರಿಗಳ ತಂಡ ಸರ್ವೇ ಮಾಡಿ ವರದಿ ಸಲ್ಲಿಸಲಾಗುತ್ತದೆ, ಇನ್ನು ಜಿಲ್ಲೆಗೆ ಸುಮಾರು 600ಕೋಟಿಗಳ ಬೇಡಿಕೆಯನ್ನು ಸಲ್ಲಿಸಲಾಗಿದೆ, ಅದ್ದರಿಂದ ಈ ವರ್ಷ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸ್ಪಿಂಕಲರ್ ಪೈಪ್ ಸೇರಿದಂತೆ ಎಲ್ಲಾ ವಸ್ತುಗಳ ಸರಿಯಾದ ಸಮಯಕ್ಕೆ ಹಾಗೂ ನೈಜ ರೈತರಿಗೆ ಸಿಗುವಂತಹ ವ್ಯವಸ್ಥೆ ಕಲ್ಪಿಸಲಾಗುವುದು, ನಾವೂ ಯಾವಾಗಲೂ ರೈತರ ಏಳ್ಗೆಗಾಗಿ ಇರುವವರು ಎಂದರು.

ಈ ಸಂದರ್ಭದಲ್ಲಿ ಮಹಿಳಾ ಅಧ್ಯಕ್ಷರಾದ ರೇಖಾ ಪಾಟೀಲ, ಈರಪ್ಪ ಕುಳೆಕುಮಟಗಿ, ಸಾತಲಿಂಗಯ್ಯ ಸಾಲಿಮಠ, ಮಹಾದೇವ ಬನಸೋಡೆ, ಶ್ರೀಶೈಲ ವಾಲಿಕಾರ, ಸೇರಿದಂತೆ ಮುಖಂಡಾರಾದ ಶಿವಾನಂದಯ್ಯ ಹಿರೇಮಠ, ಸುಭಾಸ ಸಜ್ಜನ, ನಜೀರ ನಂದರಗಿ, ಶಾನೂರ ನಂದರಗಿ, ಖಾದರಸಾಬ ವಾಲಿಕಾರ,  ರಾಮನಗೌಡ ಪಾಟೀಲ, ಮಹಾದೇವ ತೇಲಿ, ಅರುಣಗೌಡ ತೇರದಾಳ, ಸಂಗಪ್ಪ ಟಕ್ಕೆ, ಸಂಪತ್ತ ಜಮಾದಾರ, ಸಂಗಮೇಶ ಹುಣಸಗಿ, ಹಣಮಂತ ಬ್ಯಾಡಗಿ, ಎಚ್.ಎನ್.ಪಾಟೀಲ, ಮಹಾದೇವ ಕದಂ, ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X