ವಿಜಯಪುರ | ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿಗೆ ಮನವಿ

Date:

Advertisements

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಗೀಳಿಗೆ ಇಂದಿನಯುವಕರು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದು, ಸರ್ಕಾರ ಬೆಟ್ಟಿಂಗ್ ಆ್ಯಪ್‌ಗಳನ್ನು ನಿಷೇಧ ಮಾಡಬೇಕು ಎಂದು ಬಲಿಷ್ಠ ಭಾರತ ನಿರ್ಮಾಣ ಸೇನೆ ಹಾಗೂ ಕರುನಾಡ ಕ್ರಾಂತಿ ಸೇನೆ ಪದಾಧಿಕಾರಿಗಳು ವಿಜಯಪುರ ಹೆಚ್ಚುವರಿ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಮನವಿ ಸಲ್ಲಿಸಿದರು.

ಸೇನೆ ಅಧ್ಯಕ್ಷ ಪುನೀತ್ ಸಜ್ಜನ ಮಾತನಾಡಿ, “ಆನ್‌ಲೈನ್ ಜೂಜು, ಇಸ್ಪೀಟ್, ಲೂಡೊ, ಕ್ರಿಕೆಟ್, ಫುಟ್ಬಾಲ್ ಸೇರಿದಂತೆ ಅನೇಕ ಅಪ್ಲಿಕೇಷನ್‌ಗಳು ಹಣದ ವಂಚನೆ ಮಾಡುತ್ತಿವೆ. ಯುವಕರನ್ನು ಈ ಗೀಳಿಗೆ ಹಣ ಹಾಕುವಂತೆ ಪ್ರೇರೇಪಿಸಿ ನಂತರ ಅವರನ್ನು ಸಾಲಗಾರರನ್ನಾಗಿ ಮಾಡಿ ಪ್ರಾಣ ಬಿಡುವಂತೆ ಮಾಡುತ್ತಿವೆ. ಸರ್ಕಾರ ಆರ್ಥಿಕ ಅಪರಾಧಗಳನ್ನು ನಿಯಂತ್ರಿಸಲು ಆನ್‌ಲೈನ್ ಬೆಟ್ಟಿಂಗ್ ಹಾಗೂ ಬೆಟ್ಟಿಂಗ್‌ ಆ್ಯಪ್‌ಗಳನ್ನು ನಿಷೇಧ ಮಾಡಬೇಕು” ಎಂದು ಆಗ್ರಹಿಸಿದರು.

“ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟ್ ಆಟಗಳನ್ನು ಆಡಿಸುವಂತಹ ಆ್ಯಪ್‌ಗಳು ವಿಪರೀತ ಪ್ರಮಾಣದಲ್ಲಿ ಹುಟ್ಟಿಕೊಂಡಿವೆ. ವಯಸ್ಸಿನ ಮಿತಿ ಇಲ್ಲದೆ ಎಲ್ಲಾ ವರ್ಗದ ಜನರು ಇವುಗಳ ಆಮಿಷಕ್ಕೆ ಒಳಗಾಗಿ, ಸಾಕಷ್ಟು ಹಣವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಸರ್ಕಾರ ಅಂತಹ ಆ್ಯಪ್‌ಗಳ ವಿರುದ್ಧ ಆರ್ಥಿಕ ಅಪರಾಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಅವುಗಳನ್ನು ನಿಷೇಧಗೊಳಿಸಬೇಕು” ಎಂದು ಮನವಿ ಮಾಡಿದರು.

Advertisements

ಇದನ್ನೂ ಓದಿ: ವಿಜಯಪುರ | ರಂಜಾನ್‌, ಹೋಳಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಿ: ಪೊಲೀಸ್ ಸಿಪಿಐ ಮಹಮ್ಮದ್‌

ಕರುನಾಡ ಕ್ರಾಂತಿ ಸೇನೆಯ ಸಂಭಾಜಿ ಪಾಟೀಲ, ರವಿ ಗಾಯಕವಾಡಿ, ತೀರ್ಥಪ್ಪ ಪೂಜಾರಿ, ರವಿ ಗಾಯಕವಾಡ, ಭೀಮಾರೆಡ್ಡಿ ಬ್ಯಾಕೋಡ, ಉತ್ಕರ್ಷ ಪಾಟೀಲ, ದೀಪಕ ಸೂರ್ಯವಂಶಿ, ಪ್ರಶಾಂತ ಪಾಟೀಲ, ಮುತ್ತಣ್ಣ ಭೋವಿ, ಮಹೇಶ ಯಲ್ಲಕ್ಷ, ರಾಜು ರೂಗಿ, ಮುತ್ತು ಬಿರಾದಾರ. ರುದ್ರಗೌಡ ಪಾಟೀಲ, ಈರಣ್ಣ ಪಾಟೀಲ ಮತ್ತಿತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X