ವಿಜಯಪುರ | ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ ಕುರಿತ ವಿಚಾರ ಸಂಕಿರಣ

Date:

Advertisements

ದೇಶದ ಪ್ರಗತಿಯಲ್ಲಿ ವಿಜ್ಞಾನ ಸಂವಹನ ಮಹತ್ತರ ಪಾತ್ರ ನಿರ್ವಹಿಸುತ್ತದೆ ಎಂದು ವಿಜಯಪುರ ಮಹಿಳಾ ವಿವಿಯ ಕುಲಪತಿ ಬಿ ಕೆ ತುಳಸಿಮಾಲ ಹೇಳಿದರು.

ಭಾರತೀಯ ವಿಜ್ಞಾನ ಕಾಂಗ್ರೆಸ್ ಅಸೋಸಿಯೇಶನ್ ವಿಜಯಪುರ ಘಟಕ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ಸಂವಹನ’ ಕುರಿತ ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಪ್ರಸ್ತುತ ಯುಗದಲ್ಲಿ ವಿಜ್ಞಾನ ಸಂವಹನ ಅತ್ಯವಶ್ಯಕವಾದ ವಿಷಯವಾಗಿದೆ. ಇದನ್ನು ನಮ್ಮ ಮಕ್ಕಳಿಗೆ ಅರ್ಥೈಸಬೇಕಾದ ಅವಶ್ಯಕತೆ ಇದೆ. ವೈಜ್ಞಾನಿಕ ವಿಷಯದ ಬಗ್ಗೆ ಸರಿಯಾಗಿ ಗ್ರಹಿಸಿ ಅದನ್ನು ತಿಳಿದುಕೊಳ್ಳಬೇಕಾದದ್ದು ಪ್ರತಿಯೊಬ್ಬರ ಜವಾಬ್ದಾರಿ” ಎಂದರು.

Advertisements

“ವೈಜ್ಞಾನಿಕ ಕ್ಷೇತ್ರದಲ್ಲಿ ನಾವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕೆಂದರೆ ಇಂಗ್ಲೀಷ್ ಭಾಷಾ ಕೌಶಲ ಬಹಳ ಅತ್ಯವಶ್ಯಕ. ಏಕೆಂದರೆ ಮಾತೃ ಭಾಷೆಯಲ್ಲಿ ಅನೇಕ ಸಂಶೋಧನೆಗಳು ನಡೆದರೂ ಅವು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಭಾಷೆಯ ಬಳಕೆ ಪ್ರಮುಖವಾಗಿದೆ. ನಮ್ಮ ಮಾತೃ ಭಾಷೆಯಲ್ಲಿ ವಿಜ್ಞಾನವನ್ನು ಗ್ರಹಿಸಬಹುದು. ಆದರೆ ಅದನ್ನು ಜಗತ್ತಿಗೆ ಪರಿಚಯಿಸಬೇಕೆಂದರೆ ನಮಗೆ ಇಂಗ್ಲಿಷ್ ಭಾಷೆ ಅನಿವಾರ್ಯ” ಎಂದರು.

“ಸಮೂಹ ಮಾಧ್ಯಮಗಳಲ್ಲಿ ವಿಜ್ಞಾನದ ಕುರಿತು ಸುದ್ದಿ ಮಾಡುವುದು ಸುಲಭದ ಮಾತಲ್ಲ. ವರದಿ ಮಾಡುವವರು ಬಹಳ ಜಾಗೂರಕತೆಯಿಂದ ಎಲ್ಲ ವಿಷಯವನ್ನೂ ಆರಿತುಕೊಂಡು ವರದಿ ಮಾಡಬೇಕಾಗುತ್ತದೆ. ವಿಜ್ಞಾನದ ಕುರಿತು ಪ್ರಾದೇಶಿಕ ಭಾಷೆಗಳಲ್ಲಿ ತಿಳಿಸುವುದು ಒಂದು ಸವಾಲಿನ ವಿಷಯ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ ಓಂಕಾರ ಕಾಕಡೆ ಮಾತನಾಡಿ, “ಪ್ರಸ್ತುತ ದಿನಮಾನದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ವಿಜ್ಞಾನ ಬರವಣಿಗೆ ಮಾಡುವವರು ಬೆರಳೆಣಿಕೆಯಷ್ಟು ಜನರಿದ್ದಾರೆ. ವಿಜ್ಞಾನ ಪದವೀಧರರು ಬರವಣಿಗೆಯ ಕೌಶಲಗಳನ್ನು ಕರಗತ ಮಾಡಿಕೊಳ್ಳುವ ಮೂಲಕ ವಿಜ್ಞಾನ ಬರವಣಿಗೆ ಮಾಡಲು ಸಾಕಷ್ಟು ಅವಕಾಶಗಳಿವೆ. ಈ ಅವಕಾಶಗಳನ್ನು ವಿದ್ಯಾರ್ಥಿನಿಯರು ಬಳಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

“ಕನ್ನಡ ಮಾಧ್ಯಮದ ಜೊತೆಗೆ ಇಂಗ್ಲೀಷ್‌ನಲ್ಲಿ ಪರಿನೀತಿಯನ್ನು ಹೊಂದಿದ್ದರೆ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗುತ್ತದೆ. ವಿಜ್ಞಾನ ಮೆದುಳಿಗೆ ಸಂಬಂಧಪಟ್ಟ ವಿಷಯವಾದರೆ ಬರವಣಿಗೆ ಹೃದಯಕ್ಕೆ ಸಂಬಂಧಿಸಿದೆ. ಈ ಎರಡನ್ನೂ ಬೆರೆಸುವುದೇ ವಿಜ್ಞಾನ ಪತ್ರಿಕೋದ್ಯಮ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರ ನೇಮಕ

ವಿಚಾರ ಸಂಕೀರ್ಣದ ತಾಂತ್ರಿಕಗೋಷ್ಟಿಗಳಲ್ಲಿ ವಿಜ್ಞಾನ ಬರಹಗಾರ ಶ್ರೀರಾಮ್ ಭಟ್ ಹಾಗೂ ಹುನಗುಂದದ ವಿಜ್ಞಾನ ಶಿಕ್ಷಕ ರಮೇಶ್ ವೀರಪ್ಪ ಬಳ್ಳ ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ನಾಟಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತು ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X