ಪ್ರತಿ ಕ್ವಿಂಟಾಲ್ ತೊಗರಿ ಬೆಂಬಲ ಬೆಲೆಯಲ್ಲಿ 7,550 ರೂಪಾಯಿಯೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ 450 ರೊ. ನೀಡಲು ನಿರ್ಧರಿಸಿದ್ದು, ಈ ಉದ್ದೇಶಕ್ಕೆ 140 ಕೋಟಿ ರೊ. ಒದಗಿಸಲಾಗುವುದು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಘೋಷಿಸಿದರು.
ವಿಜಯಪುರ ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರೊಂದಿಗೆ ಅವರ ಬೇಡಿಕೆಗಳ ಬಗ್ಗೆ ಚರ್ಚಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ ಸಚಿವರು, ಪ್ರತಿ ಕ್ವಿಂಟಾಲ್ ತೊಗರಿಗೆ ಒಟ್ಟು ಎಂಟು ಸಾವಿರ ರೊ. ಬೆಂಬಲ ಬೆಲೆ ನೀಡಲಾಗುವುದು ಎಂದು ತಿಳಿಸಿದರು.
ರಾಜ್ಯಾದ್ಯಂತ 400ಕ್ಕೂ ಅಧಿಕ ಖರೀದಿ ಕೇಂದ್ರಗಳನ್ನು ಈಗಾಗಲೇ ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ನಫೆಡ್ ಖರೀದಿ ಏಜೆನ್ಸಿಯಾಗಿದ್ದು, ದಾಖಲೆಗಳನ್ನು ಸಕಾಲಕ್ಕೆ ಒದಗಿಸುವ ಕಾರಣ, ಖರೀದಿ ಪ್ರಕ್ರಿಯೆ ವಿಳಂಬವಾಗಿದೆ. ಈ ಬಗ್ಗೆ ತೊಗರಿ ಬೆಲೆಗಾರರು ಆತಂಕಪಡುವ ಅಗತ್ಯವಿಲ್ಲ. ಇದೇ ಮೊದಲ ಬಾರಿಗೆ 8,000 ರೂ. ಧಾರಣೆಯಲ್ಲಿ ತೊಗರಿ ಖರೀದಿ ಮಾಡಲಾಗುತ್ತಿದೆ. ಬೀದರ್ ಜಿಲ್ಲೆಯಿಂದ ಚಿತ್ರದುರ್ಗ ಜಿಲ್ಲೆಯವರಿಗೋ ತೊಗರಿ ಬೆಳಯಲಾಗುತ್ತಿದ್ದು, ರೈತರ ಬೆಂಬಲ ಬೆಲೆ ಹೆಚ್ಚಳ ಮಾಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ರೈತರ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿ ಕ್ವಿಂಟಲ್ 450 ರೊ. ಹೆಚ್ಚುವರಿ ಕೊಡುವ ನಿರ್ಧಾರ ಕೈಗೊಂಡಿದೆ ಎಂದು ಸಚಿವರು ವಿವರಿಸಿದರು.
ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ನಾಯಕ ಚೋನಪ್ಪ ಪೂಜಾರಿ, ವಿಜಯಪುರ ಜಿಲ್ಲಾ ನಾಯಕರಾದ ಸಂಗಮೇಶ ಸಾಗರ, ಇರಪ್ಪ ಕುಳೆಮಟಗಿ, ಮಾಳು ಪೂಜಾರಿ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣುರೊ, ಎಸ್ ಪಿ ಲಕ್ಷ್ಮಣ ನಿಂಬರಗಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ರೂಪಾ, ಕೃಷಿ ಮಾರಾಟ ಮಂಡಳಿ ಸಿಜಿಎಂ ಚಂದ್ರಕಾಂತ ಪಾಟೀಲ ಇದ್ದರು.
