ವಿಜಯಪುರ | ಮನರೇಗಾ ಕಾರ್ಮಿಕರಿಗೆ ಕೆಲಸ ನೀಡದಿದ್ದಲ್ಲಿ ಕಠಿಣ ಕ್ರಮ: ಸಿಇಒ

Date:

Advertisements

ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡಲು ವಿಫಲರಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.

ವಿಜಯಪುರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದರು.

“ಬರ ಪರಿಸ್ಥಿತಿ ಇರುವುದರಿಂದ ಕೂಲಿ ಬಯಸಿ ಅರ್ಜಿ ಸಲ್ಲಿಸಿದ 15 ದಿನದೊಳಗೆ ಕೆಲಸ ನೀಡಬೇಕು. ಒಂದು ವೇಳೆ ಅರ್ಜಿ ಸಲ್ಲಿಸಿದ 15 ದಿನದೊಳಗೆ ಕೆಲಸ ನೀಡದಿದ್ದಲ್ಲಿ ಅಂತಹ ಫಲಾನುಭವಿಗಳಿಗೆ ಕಡ್ಡಾಯವಾಗಿ ನಿರುದ್ಯೋಗ ಭತ್ಯೆ ನೀಡಲು ಕ್ರಮವಹಿಸಬೇಕು. ಮನರೇಗಾ ಯೋಜನೆ ಅಡಿ ಎಲ್ಲ ಕೂಸಿನ ಮನೆಗಳು ಕಡ್ಡಾಯವಾಗಿ ಪ್ರಾರಂಭ ಮಾಡುವ ಮೂಲಕ ಮಹಿಳೆಯರು ಮತ್ತು ಅಂಗವಿಕಲರ ಭಾಗವಹಿಸುವಿಕೆಯನ್ನು ಹೆಚ್ಚಿಸಬೇಕು” ಎಂದು ಸೂಚನೆ ನೀಡಿದರು.

Advertisements

“ಗ್ರಾಮ ಪಂಚಾಯಿತಿಯಲ್ಲಿ ತೆರಿಗೆ ವಸೂಲಾತಿಯನ್ನು ಕಡ್ಡಾಯವಾಗಿ ಪಿಒಎಸ್ ಮಷೀನ್ ಮೂಲಕ ಮಾಡಬೇಕು ಮತ್ತು ಸಾರ್ವಜನಿಕರಿಗೆ ರಶೀದಿ ನೀಡಬೇಕು. ಜಿಲ್ಲಾ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಕಡ್ಡಾಯವಾಗಿ ಇ -ಹಾಜರಾತಿಯಲ್ಲಿ ನಮೂದಿಸಬೇಕು” ಎಂದು ಅವರು ಸೂಚನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ತುಂಗಾ ನದಿ ಮಲಿನಗೊಳ್ಳುತ್ತಿದ್ದರೂ ಪಾಲಿಕೆ ನಿರ್ಲಕ್ಷ್ಯ; ಎಎಪಿ ಆರೋಪ

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಡಾ. ವಿಜಯಕುಮಾರ್ ಅಜೂರ, ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ, ಯೋಜನಾ ನಿರ್ದೇಶಕ ಸಿ ಬಿ ದೇವರಮನಿ, ಅನುಷ್ಠಾನ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಭೆಯಲ್ಲಿ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X