ವಿಜಯಪುರ | ಅಕ್ಕಮಹಾದೇವಿ ವಿವಿಯಲ್ಲಿ ಲಕ್ಷಾಂತರ ರೂ. ಶುಲ್ಕ ವಂಚನೆ ಶಂಕೆ

Date:

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರ ಪ್ರವೇಶ ಶುಲ್ಕಕ್ಕೆ ಸಂಬಂಧಿಸಿದಂತೆ ಲಕ್ಷಾಂತರ ರೂಪಾಯಿ ಹಣಕಾಸು ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆಗೆ ವಿಶ್ವವಿದ್ಯಾಲಯವು ಸಮಿತಿಯನ್ನು ರಚಿಸಿದೆ.

2023-24, 2024-25 ಹಾಗೂ 2025-26 ಶೈಕ್ಷಣಿಕ ವರ್ಷಗಳಲ್ಲಿ ನಾಟಕ ಮತ್ತು ವಿವಿಧ ಸ್ನಾತಕೋತ್ತರ ವಿಭಾಗಗಳಿಗೆ ದಾಖಲಾದ ವಿದ್ಯಾರ್ಥಿನಿಯರು ಪಾವತಿಸಿದ ಶುಲ್ಕವನ್ನು ಕೆಲ ಸಿಬ್ಬಂದಿ ಬ್ಯಾಂಕ್ ಖಾತೆಗೆ ಜಮಾ ಮಾಡದೇ ದುರುಪಯೋಗಪಡಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಕೃತ್ಯದಲ್ಲಿ ವಿಶ್ವವಿದ್ಯಾಲಯದ ಕೆಲ ಸಿಬ್ಬಂದಿಯೂ ಭಾಗಿಯಾಗಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

- Advertisement -

ರಾಜ್ಯ ಸರ್ಕಾರದ ಯುನಿಫೈಡ್ ಯೂನಿವರ್ಸಿಟಿ ಅಂಡ್ ಕಾಲೇಜ್ ಮ್ಯಾನೇಜ್ಮೆಂಟ್ ಸಿಸ್ಟಮ್ (UCMS) ಮೂಲಕ ಆನ್‌ಲೈನ್‌ನಲ್ಲಿ ಶುಲ್ಕ ಪಾವತಿಸುವ ವ್ಯವಸ್ಥೆ ಇದ್ದರೂ, ತಾಂತ್ರಿಕ ತೊಂದರೆ ಅಥವಾ ಅರಿವಿನ ಕೊರತೆಯಿಂದ ಆಫ್‌ಲೈನ್‌ನಲ್ಲಿ ಶುಲ್ಕ ಪಾವತಿಸಲು ಬಂದ ಪೋಷಕರಿಗೆ ನೆರವಾಗುವ ನೆಪದಲ್ಲಿ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇನ್ನಷ್ಟು ಆತಂಕಕಾರಿ ಸಂಗತಿಯೆಂದರೆ, ಕೆಲ ವಿದ್ಯಾರ್ಥಿನಿಯರಿಗೆ ಇತರರ ಆನ್‌ಲೈನ್ ಪಾವತಿ ರಸೀದಿಗಳ ನಕಲು ಪ್ರತಿಗಳನ್ನು ನೀಡಿ, ಅದನ್ನೇ ವಿದ್ಯಾರ್ಥಿ ಪೋರ್ಟಲ್‌ಗೆ ಅಪ್‌ಲೋಡ್ ಮಾಡುವ ಮೂಲಕ ದಾಖಲಾತಿಯನ್ನು ಅಧಿಕೃತಗೊಳಿಸಿರುವುದು ಬೆಳಕಿಗೆ ಬಂದಿದೆ. ಇದರಿಂದ ಅವ್ಯವಹಾರ ದೀರ್ಘಕಾಲ ಯಾರ ಗಮನಕ್ಕೂ ಬಂದಿರಲಿಲ್ಲ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಮಲ್ಲಮ್ಮ ಯಳವಾರ, “ಪ್ರಕರಣದ ಬಗ್ಗೆ ಉನ್ನತ ಮಟ್ಟದ, ಪಾರದರ್ಶಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ ಸಮರ್ಪಕ ಸರ್ಕಾರಿ ಅನುದಾನದ ಕೊರತೆಯಿಂದ ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವ ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿನಿಯರ ಶುಲ್ಕವೇ ಪ್ರಮುಖ ಆದಾಯದ ಮೂಲವಾಗಿದೆ. ಇಂತಹ ಸಂದರ್ಭದಲ್ಲಿ ಶುಲ್ಕದ ಹಣದಲ್ಲೇ ಅವ್ಯವಹಾರ ನಡೆದಿರುವ ಆರೋಪ ವಿಶ್ವವಿದ್ಯಾಲಯದ ಆರ್ಥಿಕ ಸ್ಥಿತಿಗೆ ಮತ್ತಷ್ಟು ಹೊಡೆತ ನೀಡಿದ್ದು, ಶೈಕ್ಷಣಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅಂಬೇಡ್ಕರವರ ಅಧ್ಯಯನವೆಂದರೆ ಜಗತ್ತಿನ ಪ್ರಗತಿಯ ಅಧ್ಯಯನ : ಜಗನ್ನಾಥ ಹೆಬ್ಬಾಳೆ

ಡಾ.ಬಿ.ಆರ್.ಅಂಬೇಡ್ಕರ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ. ಅವರು ಇಡೀ ಮನುಕುಲದ...

ಬೀದರ್‌ | ಸಂವಿಧಾನ ಮೌಲ್ಯಗಳಿಂದ ಸಾಮರಸ್ಯ ಸಮಾಜ ನಿರ್ಮಾಣ : ಸಚಿವ ಈಶ್ವರ ಖಂಡ್ರೆ

ವಿಶ್ವದಲ್ಲೇ ಅತ್ಯಂತ ಮಾದರಿಯಾದ ಹಾಗೂ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ಭಾರತದಲ್ಲಿ...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಸೆ.17ರಂದು ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಪ್ರಶಸ್ತಿ ಪ್ರದಾನ

ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ವತಿಯಿಂದ ವಾರ್ಷಿಕ ದತ್ತಿ...