ವಿಜಯಪುರ | ಸಂವಿಧಾನ ಮಹಿಳೆಯರಿಗೆ ಸಿಗಬೇಕಾದ ಎಲ್ಲ ಹಕ್ಕುಗಳನ್ನು ನೀಡಿದೆ; ಪ್ರೊ. ಚಂದ್ರಮ್ಮ ಎಂ

Date:

Advertisements

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸೇವಾ ಯೋಜನೆ ಕೋಶ, ಮಹಿಳಾ ಅಧ್ಯಯನ ಕೇಂದ್ರ ಹಾಗೂ ಡಾಕ್ಟರ್ ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿದ್ದ ಕರ್ನಾಟಕ ವಿಶ್ವವಿದ್ಯಾಲಯದ ಪ್ರಭಾರಿ ಕುಲಸಚಿವೆ ಪ್ರೊ. ಚಂದ್ರಮ್ಮ ಎಂ, ನಮ್ಮ ಸಂವಿಧಾನವು ಮಹಿಳೆಯರಿಗೆ ಸಮಾನ ವೇತನ ಕಾಯ್ದೆ, ಮಾತೃತ್ವ ಸವಲತ್ತು ಕಾಯ್ದೆ, ಬಹು ಪತ್ನಿತ್ವ ನಿಷೇಧ ಕಾಯ್ದೆ, ಅಂತರ್ ಜಾತಿ ವಿವಾಹ ಕಾಯ್ದೆ ಸೇರಿದಂತೆ ಹಲವಾರು ವಿಧಿಗಳನ್ನು ನೀಡಿದ್ದರೂ, ಇಂದಿಗೂ ಹಲವು ಕಡೆಗಳಲ್ಲಿ ಮಹಿಳೆಯರು ಇದರಿಂದ ವಂಚಿತರಾಗುತ್ತಿರುವುದು ವಿಷಾದನೀಯ ಎಂದು ಬೇಸರ ವ್ಯಕ್ತಪಡಿಸಿದರು.

ಭಾರತದ ಅಸಂಘಟಿತ ವಲಯದ ಮಹಿಳಾ ಕಾರ್ಮಿಕ ವಲಯ ಇಂದಿಗೂ ದೌರ್ಜನ್ಯಕ್ಕೆ ಒಳಗಾಗುತ್ತಿವೆ. ಮಹಿಳೆಯರ ದೇಶದಲ್ಲಿ ಇಂದಿಗೂ ಎರಡನೇ ದರ್ಜೆಯ ಪ್ರಜೆಗಳಾಗಿಯೇ ಉಳಿದಿದ್ದಾರೆ. ನಮ್ಮ ಯಾವುದೇ ಧರ್ಮಗಳು ಮಹಿಳೆಯರಿಗೆ ಮೊದಲ ಆದ್ಯತೆ ನೀಡಿಲ್ಲ. ಆದರೆ, ನಮ್ಮ ಸಂವಿಧಾನ ಮಹಿಳೆಯರಿಗೆ ಸಿಗಬೇಕಾದ ಎಲ್ಲ ಹಕ್ಕುಗಳನ್ನು ನೀಡಿದೆ. ಇಂದಿನ ದಿನ ನಮ್ಮನ್ನು ನಾವೇ ಪ್ರಸಂಸಿಕೊಳ್ಳಬೇಕಿದೆ. ಏಕೆಂದರೆ, ಡಾ. ಅಂಬೇಡ್ಕರ್ ಅವರ ಚಿಂತನೆ ಏನಾಗಿತ್ತು? ಅವರ ಕನಸು ಏನಾಗಿತ್ತು? ಸಂವಿಧಾನದ ಮಾರ್ಗ ಸೂಚಿಸಿರುವುದು ಏನು? ಅದರ ಮಾರ್ಗದಲ್ಲಿ ನಾವು ನಡೆದಿದ್ದೇವೆಯೇ? ಇವೆಲ್ಲದರ ಕುರಿತು ಆತ್ಮವಲೋಕನ ಮಾಡಿಕೊಳ್ಳಬೇಕಾಗಿದೆ ಎಂದರು.

Advertisements

ಇಂಗ್ಲಿಷ್ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಪಿ ಕಣ್ಣನ್ ಮಾತನಾಡಿ, ನಮಗೆ ಸ್ವಾತಂತ್ರ್ಯ ಸಿಕ್ಕಿದ ಮೇಲು ಸಂಪೂರ್ಣ ಸ್ವಾತಂತ್ರ್ಯ ಸಿಕ್ಕಿರಲಿಲ್ಲ. ನಿಜವಾಗಿಯೂ ಸ್ವಾತಂತ್ರ್ಯ ಸಿಕ್ಕಿದ್ದು 1949, ನವೆಂಬರ್ 26ರಂದು. ಜನರಿಗೆ 1949ಕ್ಕೂ ಮೊದಲು ಪ್ರಜೆಯೆಂಬ ಕಲ್ಪನೆಯೇ ಇರಲಿಲ್ಲ. ಪ್ರಜೆ ಎಂಬ ಹಕ್ಕು ದೊರೆಕಿರುವುದು ಸಂವಿಧಾನದಿಂದ ಎಂದರು.

ಸಂವಿಧಾನ ದಿನದ ಅಂಗವಾಗಿ ನಡೆದ ರಸಪ್ರಶ್ನೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಪ್ರೊ. ಚಂದ್ರಮ್ಮ ಎಂ. ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯರಾದ ಪ್ರೊ. ಡಿ.ಎಂ. ಮದರಿ, ಡಾ. ರಾಜಕುಮಾರ್ ಮಾಲಿಪಾಟೀಲ್, ಹಲವು ವಿಭಾಗದ ಮುಖ್ಯಸ್ಥರಿದ್ದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ರಾಷ್ಟ್ರೀಯ ಯೋಜನಾ ಕೋಶದ ಸಂಯೋಜನೆ ಅಧಿಕಾರಿ ಪ್ರೊ. ಶಾಂತಾದೇವಿ ಟಿ. ಓದಿದರು. ಡಾ. ಸರೋಜ ಅತಿಥಿಗಳನ್ನು ಪರಿಚಯಿಸಿದರು. ಡಾ. ಶಶಿಕಲಾ ರಾಥೋಡ್ ಕಾರ್ಯಕ್ರಮ ನಿರೋಪಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಪತಿ ಪ್ರೊ. ಬಿ.ಕೆ. ತುಳಸಿ ಮಾಲಾ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X