ವಿಜಯಪುರ | ವಿವಿಧ ಉದ್ದೇಶಗಳಿಗೆ ಜಾಗ ಗುರುತಿಸಿಕೊಡಲು ಮುಸ್ಲಿಂ ಸಮುದಾಯ ಒತ್ತಾಯ

Date:

Advertisements

ಬಸವನಬಾಗೇವಾಡಿ ತಾಲೂಕಿನ ಡೋಣೂರ ಗ್ರಾಮದ ಆಶ್ರಯ ಕಾಲನಿಯಲ್ಲಿ ಮುಸ್ಲಿಂ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ಥಾನಕ್ಕೆ ಜಾಗ ಗುರುತಿಸಿ ಕೊಡುವಂತೆ ಟಿಪ್ಪು ಕ್ರಾಂತಿ ಸೇನೆ ಹಾಗೂ ಡೋಣೂರ ಗ್ರಾಮದ ಅಂಜುಮನ್ ಕಮೀಟಿ ಒತ್ತಾಯಿಸಿದೆ. ಬಸವನಬಾಗೇವಾಡಿ ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ಹಕ್ಕೊತ್ತಾಯ ಪತ್ರ ಸಲ್ಲಿಸಿ ಮಾತನಾಡಿದ ಟಿಪ್ಪು ಕ್ರಾಂತಿ ಸೇನೆಯ ಮುಖಂಡ ಖಾಜಂಬರ ನದಾಫ, “ಡೋಣೂರ ಗ್ರಾಮದ ಆಶ್ರಯ ಕಾಲನಿಯಲ್ಲಿ ಮುಸ್ಲಿಂ ಸಮುದಾಯದ ಪ್ರಾರ್ಥನಾ ಮಂದಿರ, ದರ್ಗಾ, ಉರ್ದು ಶಾಲೆ, ಈದ್ಗಾ ಹಾಗೂ ಖಬರಸ್ಥಾನಕ್ಕೆ ಜಾಗೆ ಗುರುತಿಸಿ ಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ಗ್ರಾಮದ ಆಶ್ರಯ ಕಾಲನಿಯಲ್ಲಿ ಬೇರೆ ಬೇರೆ ಸಮುದಾಯದವರು ಸ್ವತ: ತಾವೇ ಜಾಗಗಳನ್ನು ಗುರುತಿಸಿಕೊಂಡು ಕಬ್ಜಾ ಮಾಡಿಕೊಂಡಿದ್ದಾರೆ. ಹಾಗಾಗಿ, ನಮ್ಮ ಸಮುದಾಯ ಸ್ವತ: ಜಾಗೆ ಗುರುತಿಸಲು ಹೋದಲ್ಲಿ ಸಮಸ್ಯೆಯಾಗುವ ಸಂಭವವಿದೆ. ತಾಲೂಕು ದಂಡಾಧಿಕಾರಿಗಳು ಮುಸ್ಲಿಂ ಸಮಾಜಕ್ಕೆ ಜಾಗ ಗುರುತಿಸಿ ಕೊಡುವ ಮೂಲಕ ಸಮಾಜಕ್ಕೆ ಅನಕೂಲ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

Advertisements

ಈ ಸಂದರ್ಭದಲ್ಲಿ ಅಮಿನಸಾಬ ಹುಡೆದಗಡ್ಡಿ, ನಾಸೀರ್ ತಾಂಬೋಳಿ, ಅಬಿದ ತಾಂಬೋಳಿ, ಬಂದೇನವಜ್ ಸುತಾರ, ಮಹೇಬೂಬ ಸುತಾರ, ರಹೇಮಾನ ಮುಲ್ಲಾ, ಹಾಶಿಂಸಾಬ ಸುತಾರ, ಸುಲೇಮಾನ್ ಗೌಂಡಿ, ಅಬ್ಬುಸಾಬ ಮುಲ್ಲಾ, ಇಸ್ಮಾಯಿಲ್ ಮುಲ್ಲಾ ಹಾಗೂ ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X