ವಿಜಯಪುರ | ವ್ಯಕ್ತಿಯನ್ನು ಅರೆಬೆತ್ತಲೆಯಾಗಿ ಕೂರಿಸಿದ ಪೆಟ್ರೋಲ್‌ ಬಂಕ್‌ ಮಾಲೀಕ!

Date:

Advertisements

ಡೀಸೆಲ್ ಹಾಕಿಸಿದ್ದ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಪೆಟ್ರೋಲ್ ಬಂಕ್​ನಲ್ಲಿ ವ್ಯಕ್ತಿಯನ್ನು ಅರೆಬೆತ್ತಲೆಗೊಳಿಸಿ ಕೂರಿಸಿದ ಅಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

“ವಾಹನಗಳಿಗೆ ಡೀಸೆಲ್ ಹಾಕಿಸಿದ್ದ ಮೌನೇಶ್ ಪತ್ತಾರ್ ಎಂಬಾತ ಅಂದಾಜು 10 ರಿಂದ 15 ಲಕ್ಷ ರೂ.ನಷ್ಟು ಬಾಕಿ ಹಣ ನೀಡಬೇಕಿತ್ತು. ಆ ಹಣವನ್ನು ಪಾವತಿಸುವಂತೆ ಒತ್ತಾಯಿಸಿದ ಆತನನ್ನು ಮುದ್ದೇಬಿಹಾಳ ಪಟ್ಟಣದಲ್ಲಿರುವ ಬೋಸಲೆ ಬಂಕ್​ನಲ್ಲಿ ಕಳೆದ 12 ದಿನಗಳಿಂದ ಅರೆಬೆತ್ತಲೆಯಾಗಿ ಕೂಡಿಹಾಕಿದ್ದಾರೆ” ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

ತಮಿಳುನಾಡು ಮೂಲದ ಶಿವಶಕ್ತಿ ಬೋರ್‌ವೆಲ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮೌನೇಶ್, ವಾಹನಗಳಿಗೆ ಬೋಸಲೆ ಅವರ ಬಂಕ್‌ನಲ್ಲಿ ಡೀಸೆಲ್ ಹಾಕಿಸುತ್ತಿದ್ದರು. ಆದರೆ, ಶಿವಶಕ್ತಿ ಬೋರ್‌ವೆಲ್ಸ್​ನವರು ಡೀಸೆಲ್ ಬಾಕಿ ಹಣ ನೀಡದೇ ಹೋಗಿದ್ದಾರೆ. ಹೀಗಾಗಿ ಬಾಕಿ ಹಣ ಪಾವತಿಸುವಂತೆ ಮೌನೇಶ್‌ನನ್ನು ಪೆಟ್ರೋಲ್ ಬಂಕ್ ಮಾಲೀಕ ಹಿಡಿದುಕೊಂಡಿದ್ದು, ಬಂಕ್​ನಲ್ಲೇ ಕೂಡಿಹಾಕಿದ್ದಾರೆ. ಇನ್ನು ಮೌನೇಶ್ ಬಿಡುಗಡೆಗಾಗಿ ಆಗ್ರಹಿಸಿ ಆತನ ಪತ್ನಿ ಹಾಗೂ ಮಕ್ಕಳು ಕಳೆದ ಮೂರು ದಿನಗಳಿಂದ ಬೋಸಲೆ ಪೆಟ್ರೋಲ್ ಬಂಕ್‌ನಲ್ಲೇ ಕುಳಿತಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಪ್ರವಾಹ ಸಂತ್ರಸ್ತೆ

ಡೀಸೆಲ್ ಬಾಕಿ ಹಣ ನೀಡುವಂತೆ ಕಳೆದ 12 ದಿನಗಳಿಂದ ಮೌನೇಶ್ ಪತ್ತಾರ್‌ನನ್ನು ಅರೆಬೆತ್ತಲೆಗೊಳಿಸಿ ಬಂಕ್​ನಲ್ಲೇ ಕೂಡಿ ಹಾಕಿದ್ದಾರೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ. ಪೊಲೀಸ್ ಠಾಣೆಗೂ ತೆರಳಲು ಬಿಡದೆ ಬಂಕ್ ಮಾಲೀಕರು ಮೌನೇಶ್ ಕುಟುಂಬಸ್ಥರನ್ನು ತಡೆಹಿಡಿದಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X