ವಿಜಯಪುರ | ಜೀವಿಗಳ ಪೋಷಣೆಯಲ್ಲಿ ಪರಿಸರ ಪಾತ್ರ ಪ್ರಮುಖವಾದದ್ದು: ಅರಣ್ಯಾಧಿಕಾರಿ ಪ್ರಿಯಾಂಕ

Date:

Advertisements

ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ವಿಶ್ವಪರಿಸರ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಪರಿಸರದ ಸಮೃದ್ಧಿಯೇ ಕಾರಣವಾಗಿದೆ ಎಂದು ಸಿಂದಗಿ ವಲಯ ಉಪ ಅರಣ್ಯಾಧಿಕಾರಿ ಪ್ರಿಯಾಂಕ ನಗರ ಹೇಳಿದರು.

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಂಗಮ ಸಂಸ್ಥೆಯಲ್ಲಿ ವಿಶ್ವಪರಿಸರ ದಿನಾಚರಣೆ ನಿಮಿತ್ತ ಹಮ್ಮಿಕೊಂಡ ಸಸಿ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂಗಮ ಸಂಸ್ಥೆಯ ನಿರ್ದೇಶಕ ಫಾ. ಸಂತೋಷ ಮಾತನಾಡಿ, “ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧೈಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವ ಮೂಲಕ ಪರಿಸರ ಹಾಳು ಮಾಡುವುದನ್ನು ತಡೆಯುವುದಾಗಿದೆ. ವಿಶ್ವಪರಿಸರ ದಿನವು ಸಾರ್ವಜನಿಕವಾಗಿ ತಲುಪಲು ಜಾಗತಿಕ ವೇದಿಕೆಯಾಗಿ ಬೆಳೆದಿದೆ” ಎಂದು ಹೇಳಿದರು.

Advertisements

ಸಂಗಮ ಸಂಸ್ಥೆಯ ಸಹಾ ನಿರ್ದೇಶಕಿ ಸಿಸ್ಟರ್ ಸಿಂತಿಯ ಮಾತನಾಡಿ, “ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಪರಿಸರ ಸಂರಕ್ಷಣೆಯತ್ತ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಇತ್ತೀಚಿನ ದಿನಗಳಲ್ಲಿ ವಿಶ್ವದೆಲ್ಲೆಡೆ ಆಧುನೀಕರಣ, ಕೈಗಾರೀಕರಣದಿಂದಾಗಿ ಹೆಚ್ಚಿನ ಪರಿಸರ ನಾಶ ಸಂಭವಿಸುತ್ತಿದೆ. ಇದರಿಂದಾಗಿ ಮಳೆ, ಬೆಳೆ ಕಡಿಮೆಯಾಗುತ್ತಿದೆ. ವಾತಾವರಣದಲ್ಲಿ ಬದಲಾವಣೆ ಕಾಣಬಹುದಾಗಿದೆ. ಆದ್ದರಿಂದ ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಬೇಕು. ಮರ ಗಿಡಗಳನ್ನು ಬೆಳೆಸುವತ್ತ ಹೆಚ್ಚಿನ ಗಮನಹರಿಸಬೇಕಿದೆ. ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡುವಲ್ಲಿ ಕೈಜೋಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಸ್ಪರ್ಧಾತ್ಮಕ ಪರೀಕ್ಷೆಗಳ ಓದು ನಿರಂತರವಾಗಿರಲಿ: ಡಾ ಪರಮಶಿವಮೂರ್ತಿ

“ಮುಂದಿನ ದಿನಗಳಲ್ಲಿ ಅತಿಹೆಚ್ಚು ಗಿಡಗಳನ್ನು ನೆಡುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕು. ಜತೆಗೆ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುವಂತಾಗಬೇಕು” ಎಂದು ತಿಳಿಸಿದರು.

“ಅರಣ್ಯ ಅಗ್ನಿ ಪಾಲಕರಾದ ಶಿವಾನಂದ ಹಾಗೂ ಅನಿಲ, ವಿವಿಧ ಹಳ್ಳಿಗಳಿಂದ ಸ್ವ-ಸಹಾಯ ಸದಸ್ಯರು, ಸಂಗಮ ಸಂಸ್ಥೆಯ ಕಾರ್ಯಕರ್ತರು ಭಾಗವಹಿಸಿದರು. ನಂತರ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರತಿಯೊಬ್ಬರಿಗೂ ಒಂದೊಂದು ಸಸಿ ಕೊಡಲಾಯಿತು. ತೇಜಸ್ವಿನಿ ಹಳ್ಳದಕೇರಿ ಸ್ವಾಗತಿಸಿದರು. ಬಸವರಾಜ ಬಿಸನಾಳ ನಿರೂಪಿಸಿದರು. ಉಮೇಶ ದೊಡ್ಡಮನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X