ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಬಹುಮುಖ್ಯ: ಆಂತೋನಿ ಸಿ

Date:

Advertisements

ಸಮಾಜದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಬಹುಮುಖ್ಯವಾದ್ದುದು. ಅವರು ಮನಸು ಮಾಡಿದರೆ ದೇಶವನ್ನೆ ಆಳಬಲ್ಲರು ಆದರೆ ಈಗಿನ ಯುವಕರು ತಮ್ಮ ಯೌವನಾವಸ್ಥೆಯಲ್ಲಿ ಮೊಬೈಲ್ ಬಳಕೆಯಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ ಎಂದು ಮುಧೋಳದ ಅಂತ್ಯೋದಯ ಸಂಸ್ಥೆ ಮುಖ್ಯಸ್ಥರಾದ ಆಂತೋನಿ ಸಿ ಬೇಸರ ವ್ಯಕ್ತಪಡಿಸಿದರು.

ಅನೌಪಚಾರಿಕ ಶಿಕ್ಷಣ ಸಂಸ್ಥೆ ವಿಜಯಪುರ ಹಾಗೂ ಜೀವನಜ್ಯೋತಿ ಮಾಜಿ ದೇವದಾಸಿ ತಾಯಂದಿರ ಜಿಲ್ಲಾ ಒಕ್ಕೂಟದ ಸಹಯೋಗದಲ್ಲಿ ವಿಜಯಪುರ ನಗರದ ಲೊಯೋಲಾ ಪಿ ಯು ಕಾಲೇಜು ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಆಶಾಕಿರಣ ಯುವಜನರಿಗೆ ಸಾಮಾಜಿಕ ವಿಶ್ಲೇಷಣೆ ಕುರಿತು ಎರಡು ದಿನದ ತರಬೇತಿ ಕಾರ್ಯಗಾರದಲ್ಲಿ ಮಾತನಾಡಿದರು.

“ಸಮಾಜದಲ್ಲಿ ನಡೆಯುವ ತಾರತಮ್ಯ, ಜಾತಿ ಭೇದ, ಹಾಗೂ ಸಮಾನತೆಯ ವ್ಯವಸ್ಥೆಯ ವಿರುದ್ದ ಯುವಜನರು ಮುಂದಾಗದೇ ಮೌನ ವಹಿಸುತ್ತಿದ್ದಾರೆ. ಇದು ಆಘಾತಕಾರಿ ವಿಷಯವಾಗಿದೆ. ಸಮಾಜದ ಒಂದು ಮುಖ್ಯ ವ್ಯವಸ್ಥೆಯ ಬಗ್ಗೆ ಯುವಕರು ತಿಳಿದುಕೊಳ್ಳಬೆಕು, ಸಂಘಟಿತರಾಗಬೆಕು, ಸಂವಿಧಾನ ಬದ್ಧ ಬದುಕು ಬದಕಲು ಮುಂದಾಗಬೇಕು” ಎಂದು ಕರೆ ನಿಡಿದರು.

Advertisements

ವಿಮುಕ್ತ ದೇವದಾಸಿ ತಾಯಂದಿರ ವೇದಿಕೆ ಸಂಚಾಲಕ ಚಂದಲಿಗ ಕಲಾಲಬಂಡಿ ಅತಿಥಿ ಭಾಷಣ ಮಾಡಿ, “ಯುವಕರು ಸಮಾಜದಲ್ಲಿ ಬದಲಾಣೆ ಮಾಡುವುದಾದರೆ ಪ್ರಶ್ನೆ ಮಾಡುವುದನ್ನು ಕಲಿಯಬೇಕು. ಹಾಗೂ ಪ್ರಶ್ನೆಗಳಿಗೆ ಉತ್ತರ ಹುಡುಕಲು ಪ್ರಯತ್ನಿಸಿದರೆ ಸಮುದಾಯದಲ್ಲಿ ಅಥವಾ ಸಮಾಜದಲ್ಲಿ ಅತಿ ಶೀಘ್ರದಲ್ಲಿ ಗಣನೀಯ ಪರಿವರ್ತನೆ ಕಾಣಲು ಸಾದ್ಯವಾಗಿದೆ. ಅದಕ್ಕೆ ಇಂತಹ ಅರ್ಥಪೂರ್ಣವಾದ ತರಬೇತಿಗಳಲ್ಲಿ ಭಾಗಿಯಾಗಬೇಕು: ಎಂದು ಯುವಪೀಳಿಗೆಯನ್ನು ಉತ್ತೇಜೀಸಿದ್ದರು.‌

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ವಿದ್ಯಾರ್ಥಿಗಳು ಗಾಂಧಿಯವರ ಆದರ್ಶ ಅಳವಡಿಸಿಕೊಳ್ಳಬೇಕು: ಕಸಾಪ ಅಧ್ಯಕ್ಷ ಪಾಂಡುರಂಗ ಜಟ್ಟಗನ್ನವರ

ಜೀವನ ಜ್ಯೋತಿ ಮಾಜಿ ದೇವದಾಸಿ ತಾಯಂದಿರ ಒಕ್ಕೂಟ ಜಿಲ್ಲಾಧ್ಯಕ್ಷೆ ರೇಣುಕಾ ಎಂಟಮಾನ್ ಮಾತನಾಡಿ, “ದೇವದಾಸಿ ಮಕ್ಕಳನ್ನು ಉದ್ದೇಶಿಸಿ ಅವರವರ ತಾಯಾಂದಿರ ಕಷ್ಟವನ್ನು, ನೋವನ್ನು, ಅರ್ಥಮಾಡಿಕೊಂಡು ತಮ್ಮ ತಾಯಾಂದಿರಿಗೆ ಸರ್ಕಾರದಿಂದ ಸಿಗಬೇಕಾಗಿರುವ ಸೌಲಭ್ಯ ಪಡೆಯುವುದ್ದಕ್ಕಾಗಿ ಪಣತೊಟ್ಟು ಹೋರಾಡಬೇಕು. ತಮ್ಮ ತಾಯಂದಿರ ಕನಸು ನನಸು ಮಾಡಬೇಕು” ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X