ವಿಜಯಪುರ | ʼಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕುʼ

Date:

Advertisements

ಮನುಷ್ಯ ಸಂಬಂಧಗಳ ಹುಡುಕಾಟವೇ ಸಾಂಸ್ಕೃತಿಕ ಆಂದೋಲನವಾಗಬೇಕು ಎಂದು ಜಾಜಿ ಮಲ್ಲಿಗೆ ಕವಿ ಡಾ. ಸತ್ಯಾನಂದ ಪಾತ್ರೋಟ ಹೇಳಿದರು.

ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಆವಿಷ್ಕಾರ, ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್ ಸಂಘಟನೆಗಳ ಸಹಯೋಗದಲ್ಲಿ ನಡೆದ ʼ14ನೇ ವಿಜಯಪುರ ಸಾಂಸ್ಕೃತಿಕ ಜನೋತ್ಸವʼ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಮನುಷ್ಯತ್ವ ಇರದ ಕಲೆ, ಸಾಹಿತ್ಯ, ಸಂಸ್ಕೃತಿ ಉತ್ಸವಗಳಿಗೆ ಅರ್ಥವಿಲ್ಲ. ದೇಶವೆಂದರೆ ಬರೀ ಮಣ್ಣಲ್ಲ, ಕುರ್ಚಿಯಲ್ಲ. ಮನುಷ್ಯರಾದ ನಾವು ಜಾತಿ-ಧರ್ಮಗಳ ಮಧ್ಯವರ್ತಿಗಳಾಗದೇ ಸತ್ಯದ ಮಧ್ಯವರ್ತಿಗಳಾಗಬೇಕು. ಇಂದು ಮುಖಂಡರು, ಅಧಿಕಾರಿಗಳು ಭ್ರಷ್ಟರಾಗುವ ಜತೆಗೆ ಲೇಖನ ಸಹ ಭ್ರಷ್ಟವಾಗಿದೆ. ಹೀಗಾದರೆ ರಕ್ಷಣೆ ಎಲ್ಲಿ. ನಮ್ಮನ್ನು ನಾವು ಕಂಡುಕೊಳ್ಳುವುದೇ ಇದಕ್ಕೆ ಪರಿಹಾರ. ತನ್ನ ಸಮುದಾಯವನ್ನೂ ಮೀರಿ ಜನಸಾಮಾನ್ಯರಿಗೆ ನಾಯಕರಾದ ಜ್ಯೋತಿಬಾ ಫುಲೆ ನಮಗೆ ಆದರ್ಶವಾಗಬೇಕು” ಎಂದರು.

Advertisements

ಎಐಯುಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ಕೆ. ಸೋಮಶೇಖರ ಮಾತನಾಡಿ, ”ನೀತಿ, ಸಂಸ್ಕೃತಿ, ಮೌಲ್ಯಗಳ ಅಭಿವೃದ್ಧಿ ನಿಜವಾದ ಅಭಿವೃದ್ಧಿ, ಇಂದಿನ ಸಮಾಜದ ಪ್ರಗತಿಗೆ ಪೂರಕವಾದುದನ್ನು ಮಾತ್ರ ನಾವು ಇತಿಹಾಸದಿಂದ ಅನುಸರಿಸಬೇಕು ಹೊರತು ಜನರನ್ನು ಒಡೆದು ಆಳುವ ಇತಿಹಾಸ, ಸಂಸ್ಕೃತಿಯನ್ನು ಅಲ್ಲ” ಎಂದರು.

WhatsApp Image 2025 04 13 at 4.44.49 PM 1

ರಂಗಮಂದಿರದ ಆವರಣದಲ್ಲಿಯ ಸೂಕ್ತಿ ಹಾಗೂ ಛಾಯಾಚಿತ್ರ ಪ್ರದರ್ಶನವನ್ನು ಸಾಹಿತಿ ಮನು ಪತ್ತಾರ ಉದ್ಘಾಟಿಸಿದರು. ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ದಲಿಂಗ ಬಾಗೇವಾಡಿ ಅಧ್ಯಕ್ಷತೆ ವಹಿಸಿದ್ದರು. ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ, ಎಐಎಂಎಸ್ಎಸ್ ಜಿಲ್ಲಾಧ್ಯಕ್ಷೆ ಗೀತಾ ಎಚ್, ಆವಿಷ್ಕಾರದ ಮುಖಂಡ ಅಶೋಕ ದೇಸಾಯಿ ಇದ್ದರು.

ಇದನ್ನೂ ಓದಿ: ವಿಜಯಪುರ | ನೀರಿನ ಸಮಸ್ಯೆ ಬಗೆಹರಿಸಿ: ಶಾಸಕ ಯಶವಂತರಾಯ

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿದುಷಿ ಲಕ್ಷ್ಮೀ ತೇರದಾಳಮಠ ಅವರ ನಾಟ್ಯ ಕಲಾ ಡ್ಯಾನ್ಸ್ ಕ್ಲಾಸ್ ನವರ ನೃತ್ಯ ರೂಪಕ, ಧಾರವಾಡ ಆಕಾಶವಾಣಿಯ ಬಿ ಹೈಗ್ರೇಡ್ ಕಲಾವಿದೆ ಕೃತಿಕಾ ವಿ. ಜಂಗಿನಮಠ ಅವರ ಕೊಳಲು ವಾದನ, ಸ್ವಯಂಭೋ ಆರ್ಟ್ ಫೌಂಡೇಶನ್‌ ನಟಿ ದೀಕ್ಷಾ ಭೀಸೆ, ದಿವ್ಯಾ ಭೀಸೆ ಮತ್ತು ತಂಡದವರ ನೃತ್ಯ ಪ್ರದರ್ಶನ ಜನರ ಮನ ಸೆಳೆದವು. ಬಾದಲ್ ಸರಕಾರ ಅವರು ರಚಿಸಿದ, ರಾಜೇಂದ್ರ ಕಾರಂತ್ ಅವರು ಕನ್ನಡಕ್ಕೆ ರೂಪಾಂತರಿಸಿದ ನಾಟಕ ‘ಮೋಜಿನ ಸೀಮೆಯಾಚೆ ಒಂದೂರು’ ವ್ಯವಸ್ಥೆಯ ಬಗ್ಗೆ ಬೆಳಕು ಚೆಲ್ಲಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X